ಸುರಪುರ: ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ನೇತೃತ್ವದಲ್ಲಿ ವಿಶ್ವಕರ್ಮ ಸಮುದಾಯದ ವಿವಿಧ ಬೇಡಿಕೆಗಳಿಗಾಗಿ ಮಾರ್ಚ್ 10 ರಂದು ಹಮ್ಮಿಕೊಂಡಿರುವ ಪಾದಯಾತ್ರೆಯ ಭಿತ್ತಿ ಪತ್ರಗಳನ್ನು ಬಿಡುಗಡೆಗೊಳಿಸಲಾಯಿತು.
ನಗರದ ಬಡಿಗೇರ ಬಾವಿ ಬಳಿಯಲ್ಲಿನ ಕಾಳಿಕಾದೇವಿ ದೇವಸ್ಥಾನದ ಭವನದಲ್ಲಿ ನಡೆದ ಸಭೆಯಲ್ಲಿ ಭಿತ್ತಿ ಪತ್ರಗಳನ್ನು ಬಿಡುಗಡೆಗೊಳಿಸಿದ ಮುಖಂಡರು ಮಾತನಾಡಿ,ಮಾರ್ಚ್ 10 ರಂದು ತಾಲೂಕಿನ ತಿಂಥಣಿಯ ಜಗದ್ಗುರು ಮೌನೇಶ್ವರ ದೇವಸ್ಥಾನ ದಿಂದ ಯಾದಗಿರಿಯ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪಾದಯಾತ್ರೆ ನಡೆಸಿ ಸಮುದಾಯದ ಅನೇಕ ಬೇಡಿಕೆಗಳನ್ನು ಸರಕಾರ ಈಡೇರಿಸುವಂತೆ ಆಗ್ರಹಿಸಲಾಗುವುದು.ಪಾದಯಾತ್ರೆಯಲ್ಲಿ ಮಹಾಸಭಾದ ರಾಜ್ಯ ಮುಖಂಡರು ಸೇರಿದಂತೆ ಜಿಲ್ಲೆಯ ಸಾವಿರಾರು ಜನರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಸಭೆಯಲ್ಲಿ ಮಹಾಸಭಾದ ಯಾದಗಿರಿ ಜಿಲ್ಲಾ ಯುವ ಘಟಕದ ಅಧ್ಯಕ್ಷ ಬಸವರಾಜ ಸೈದಾಪುರ,ಗೌರವಾಧ್ಯಕ್ಷ ಮಹೇಶ ಶಾರದಹಳ್ಳಿ, ತಾಲೂಕು ಅಧ್ಯಕ್ಷ ಪ್ರಭು ಚನ್ನಪಟ್ಟಣ, ಯುವ ಘಟಕದ ತಾಲೂಕು ಅಧ್ಯಕ್ಷ ದೇವಿಂದ್ರಪ್ಪ ತಳವಾರಗೇರ,ಉಪಾಧ್ಯಕ್ಷ ಶಂಭು ಪ್ರತಿಹಸ್ತ,ಮಹೇಶ ಸಗರ,ಮೌನೇಶ ಕೋನ್ಹಾಳ,ಬಸವರಾಜ ಅಮ್ಮಾಪುರ ಸೇರಿದಂತೆ ಅನೇಕರು ಭಾಗವಹಿಸಿದ್ದರು.