ಬಿಸಿ ಬಿಸಿ ಸುದ್ದಿ

ಮೆಲ್ಬರ್ಗದ ಜನರಿಗೆ ಶೇ 10 ಮೀಸಲಾತಿ; ಸಂವಿಧಾನದ ಮೂಲ ಆಶಯಕ್ಕೆ ಧಕ್ಕೆ ತಂದಿದೆ

ಕಲಬುರಗಿ: ಕೇಂದ್ರ ಮೆಲ್ಬರ್ಗದ ಜನರಿಗೆ ಶೇ 10 ಮೀಸಲಾತಿ ನೀಡುವ ಮೂಲಕ ಸಂವಿಧಾನದ ಮೂಲ ಆಶಯಕ್ಕೆ ಧಕ್ಕೆ ತಂದಿದೆ’ ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದ ನಿರ್ದೇಶಕ ಪ್ರೊ. ಎಚ್.ಟಿ. ಪೋತೆ ಹೇಳಿದರು.

ನಗರದ ಅಂಜುಮನ್ ತರಖಿ-ಎ- ಉರ್ದು ಹಿಂದೆ ಸಭಾಂಗಣದಲ್ಲಿ ಗುರುವಾರ ಬಾಂಸೆಫ್ ಮತ್ತು ಯುನಿಟಿ ಆಫ್ ಮೂಲ ನಿವಾಸಿ ಹಾಗೂ ಮೂಲ ವಿವಾಸಿ ಬಹುಜನ ಮಹಿಳಾ ಸಂಘ ಸಂಯುಕ್ತಾಶ್ರಯದಲ್ಲಿ ರಮಾಬಾಯಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನದ ಅಂಗವಾಗಿ ಹಮ್ಮಿಕೊಂಡ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.

“ಸಂವಿಧಾನದಲ್ಲಿ ಆರ್ಥಿಕ ಯೋಜನೆಗಳನ್ನು ನೀಡಲು ಅವಕಾಶವಿದೆ. ಆದರೆ, ಸರ್ಕಾರ ಮೇಲ್ವರ್ಗದವರಿಗೆ ಮೀಸಲಾತಿ ನೀಡಿ ಕೆಳವರ್ಗದವರಿಗೆ ಅನ್ಯಾಯ ಮಾಡಿದೆ’ ಎಂದು ಹೇಳಿದರು.

ಕೆಳ ಸಮುದಾಯ, ದಲಿತರು, ದುಡಿಯುವ ವರ್ಗ, ಹಿಂದುಳಿದವರಿಗೆ ಬೇಕಾದ ಸೌಲಭ್ಯ ಸಿಗುತ್ತಿಲ್ಲ. ದೇಶದ ಆಸ್ತಿಗಳೆಲ್ಲ ಖಾಸಗೀಕರಣ ಮಾಡುವ ಮೂಲಕ ಉದ್ಯೋಗ ಹಾಗೂ ಮೀಸಲಾತಿ ಹಕ್ಕ ಕಸಿದುಕೊಳ್ಳಲಾಗುತ್ತಿದೆ. ರಾಜ್ಯದ ಎಲ್ಲ ಸರ್ಕಾರಿ ಸಂಸ್ಥೆಗಳಲ್ಲಿ ಹೊರಗುತ್ತಿಗೆಯಾಗಿ ಮೇಲ್ವರ್ಗದವರನ್ನು ನೇಮಿಸಿ, ದಲಿತರು ಹಾಗೂ ಹಿಂದುಳಿದವರಿಗೆ ವಂಚನೆ ಆಗುತ್ತಿದೆ’ ಎಂದರು.

‘ದೇಶದಲ್ಲಿ ಅಸಮಾನತೆ, ರೈತರು ಮತ್ತು ಕಾರ್ಮಿಕ ವಿರೋಧಿ ಕಾನೂನು ಜಾರಿಗೆ ತಂದು, ಜನವಿರೋಧಿ ಮತ್ತು ಧಾರ್ಮಿಕ ದ್ವೇಷದ ವಾತಾವರಣ ಸೃಷ್ಟಿಸಲಾಗುತ್ತಿದೆ. ದೇಶದ ಸಂಪತ್ತು ಹಾಗೂ ಭೂಮಿಯು ರಾಷ್ಟ್ರೀಕರಣವಾಗಬೇಕು ಎಂಬುದು ಡಾ. ಬಿ.ಆರ್. ಅಂಬೇಡ್ಕರ್ ಅವರ ಆಶಯವಾಗಿತ್ತು. ಅದರಿಂದ ಸಾಮಾಜಿಕ ಸುಧಾರಣೆ ಬರಲು ಸಾಧ್ಯ’ ಎಂದರು.

ಅಧ್ಯಕ್ಷತೆ ವಹಿಸಿದ್ದ ಬಾಂಸೆಫ್ ಅಂಡ್ ಯುನಿಟಿ ಅಫ್ ಮೂಲನಿವಾಸಿ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ಕಮಲಾಕಾಂತ ಕಾಳೆ ಮಾತನಾಡಿ, ‘ದೇಶದಲ್ಲಿ ಅಸಮಾನತೆ ಹೆಚ್ಚುತ್ತಿದೆ. ಕೋಮುವಾದಕ್ಕೆ…. ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಕೇಂದ್ರ ಸರ್ಕಾರದ ಈ ಬಾರಿಯ ಬಜೆಟ್‍ನಲ್ಲಿ ಹಣಕಾಸು ಸಚಿವರು ಅಲ್ಪಸಂಖ್ಯಾತರ ಪದವನ್ನು ಬಳಸದೇ ಬಜೆಟ್ ಮಂಡನೆ ಮಾಡಿದ್ದಾರೆ’ ಎಂದರು.

ಆಳಂದದ ಬೆಳಮಗಿ ಧ್ಯಾನಭೂಮಿ ಬುದ್ಧವಿಹಾರದ ಭಂತೆ ಅಮರಜ್ಯೋತಿ, ಮೂಲ ನಿವಾಸಿ ಬಹುಜನ ಮಹಿಳಾ ಸಂಘದ ಜಮುನಾ ಟಿಳ್ಳೆ ಅವರು ಮಾತನಾಡಿದರು.

ಬಾಂಸೆಫ್ ಸಿಐಸಿ ಸುಭಾಷ ಶೀಲವಂತ ಅವರು ಪ್ರಾಸ್ತಾವಿಕ ಮಾತನಾಡಿದರು. ಲೋಕೋಪಯೋಗಿ ಇಲಾಖೆ ಆಡಳಿತ ನೌಕರರ ಅಭಿವೃದ್ಧಿ ಸಂಘದ ಅಧ್ಯಕ್ಷ ಮಹ್ಮದ್ ಮೀರ ಅಲಿ, ಸಾಮಾಜಿಕ ಕಾರ್ಯಕರ್ತ ಮಸ್ತಾನ ಬಿರಾದಾರ, ಫೆಡರೇಶನ್ ಬಹುಜನ ಸ್ಟುಡೆಂಟ್ ರಾಜ್ಯ ಮುಖಂಡ ಮಾರುತಿ ಗಂಜಗಿರಿ, ಯಲ್ಲಪ್ಪ ತಳವಾರ, ಸಂಘಟನೆಯ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

29 mins ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

31 mins ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

34 mins ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

2 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

3 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

6 hours ago