ಬಿಸಿ ಬಿಸಿ ಸುದ್ದಿ

ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠವಲೆ)ಯಿಂದ ವಿಜಯೋತ್ಸವ ಆಚರಣೆ

ಕಲಬುರಗಿ: ನಾಗಾಲ್ಯಾಂಡ್ ವಿಧಾನಸಭಾ ಚುನಾವಣೆಯಲ್ಲಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠವಲೆ) ಪಕ್ಷದ ಅಭ್ಯರ್ಥಿಗಳಾದ ಇಮ್ಮಿಚೋಬಾ ಮತ್ತು ವೈಲಿಮಾ ಓನೇನ್‍ಚಾಂಗ್ ಜಯಶಾಲಿಗಳಾಗಿದ್ದಾರೆ.

ಒಟ್ಟು 7 ಸ್ಥಾನಗಳಲ್ಲಿ ಸ್ಪರ್ಧಿಸಿದ್ದ ಅಭ್ಯಾರ್ಥಿಗಳ ಪೈಕಿ ಟ್ಯುನ್ ಸದರ 2 ಮತ್ತು ನೋಕ್‍ಸನ್ ಮತಕ್ಷೇತ್ರದ ಈ ಎರಡು ಸ್ಥಾನಗಳಲ್ಲಿ ಕಬ್ಬು (ಗನ್ನಾ ಕಿಸಾನ್), ಚಿಹ್ನೆಯಿಂದ ಗೆದ್ದಿರುವುದಕ್ಕಾಗಿ ಪಕ್ಷದ ಕಾರ್ಯಕರ್ತರಲ್ಲಿ ಹುಮ್ಮಸು ಮೂಡಿದೆ.

ನಗರದ (ಸಿರಗಾಪೂರ ಬಿಲ್ಡಿಂಗ್, ವೆಂಕಟೇಶ ಲಾಡ್ಜ್ ಎದುರುಗಡೆ ಸ್ಟೇಷನ್ ಬಜಾರ ರಸ್ತೆಯಲ್ಲಿರುವ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಕಚೇರಿ ಎದುರುಗಡೆ ರಾಷ್ಟ್ರೀಯ ಕಾರ್ಯದರ್ಶಿ ಎ.ಬಿ. ಹೊಸಮನಿ ನೇತೃತ್ವದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ವಿಜಯೋತ್ಸವ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾಧ್ಯಕ್ಷರಾದ ಪಾಂಡುರಂಗ ಕೊಟ್ರೆ, ಕಾರ್ಯಾಧ್ಯಕ್ಷ ರಘುರಾಮ ಕಡೇಕರ್, ಜಿಲ್ಲಾ ಉಪಾಧ್ಯಕ್ಷರಾದ ರೇವಣಸಿದ್ದಪ್ಪ ಹುಳಿಪಲ್ಲೆ, ಮಹಾದೇವ ಅಣವಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆನಂದ ಟೈಗರ್, ಜಿಲ್ಲಾ ಕಾರ್ಯದರ್ಶಿಗಳಾದ ರಾಜಕುಮಾರ ನಡಿಗೇರಿ, ಮಿಲಿಂದ್ ಕಣಮುಸ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಅನೀಲಕುಮಾರ ದೇವರ ಮನಿ, ಜಿಲ್ಲಾ ಖಜಾಂಚಿ ಅಮೃತ್ ಬಂಡೆ, ಕಲಬುರಗಿ ನಗರಾಧ್ಯಕ್ಷ ನಂದಕುಮಾರ ತಳಕೇರಿ, ಉತ್ತರ ಮತಕ್ಷೇತ್ರದ ಅಧ್ಯಕ್ಷ ಶೇಖ್ ಅಹ್ಮದ, ಜಿಲ್ಲಾ ಮುಖಂಡರಾದ ಶಂಕರ ಕೊರವಿ, ಚಂದ್ರಕಾಂತ ಪಾಟೀಲ ಇದ್ದರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

2 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

2 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

2 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

3 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

3 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

4 hours ago