ಎಸ್ಟಿ ಸೇರ್ಪಡೆಗೆ 10ಕ್ಕೆ ಡಿಸಿ ಕಚೇರಿವರೆಗೆ ಪಾದಯಾತ್ರೆ; ಪ್ರಭು ಚನ್ನಪಟ್ಟಣ

0
14

ಸುರಪುರ:ವಿಶ್ವಕರ್ಮ ಸಮುದಾಯ ಎಸ್ಟಿಗೆ ಸೇರ್ಪಡೆಗೊಳಿಸುವಂತೆ ಆಗ್ರಹಿಸಿ ನಗರದ ಪತ್ರಿಕಾ ಭವನದಲ್ಲಿ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಮುಖಂಡರು ಸುದ್ದಿಗೋಷ್ಠಿ ನಡೆಸಿ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮಹಾಸಭಾದ ತಾಲೂಕು ಅಧ್ಯಕ್ಷ ಪ್ರಭು ಚನ್ನಪಟ್ಟಣ ಮಾತನಾಡಿ, ಹಿಂದುಳಿದ ವಿಶ್ವಕರ್ಮ ಸಮಾಜಕ್ಕೆ ಎಸ್‍ಟಿ ಮೀಸಲಾತಿ ನೀಡುವಂತೆ ಒತ್ತಾಯಿಸಿ ಮಾ10 ರಂದು ತಾಲೂಕಿನ ಸುಕ್ಷೇತ್ರ ತಿಂಥಣಿ ಮೌನೇಶ್ವರ ದೇವಸ್ಥಾನದಿಂದ ಯಾದಗಿರಿ ಜಿಲ್ಲಾಧಿಕಾರಿಗಳ ಕಚೇರಿವರೆಗೆ 81ಕಿಮೀ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

Contact Your\'s Advertisement; 9902492681

ವಿಶ್ವಕರ್ಮ ಸಮಾಜ ಬಹಳಷ್ಟು ಹಿಂದುಳಿದಿರುವ ಸಮಾಜವಾಗಿದ್ದು ಸರಕಾರಿ ಸೌಲಭ್ಯಗಳಿಂದ ವಂಚಿತಗೊಂಡಿದೆ ವಿಶ್ವಕರ್ಮ ಸಮಾಜಕ್ಕೆ ಎಸ್‍ಟಿ ಮೀಸಲಾತಿ ನೀಡುವಂತೆ ಒತ್ತಾಯಿಸಿ ಹಲವು ವರ್ಷಗಳಿಂದ ಹೋರಾಟ ನಡೆಸುತ್ತಾ ಬಂದಿದ್ದು ಸರಕಾರ ನಮ್ಮ ಮನವಿಗೆ ಸ್ಪಂದಿಸಿಲ್ಲ ಎಂದು ಹೇಳಿದ ಅವರು ವಿಶ್ವಕರ್ಮ ಸಮಾಜಕ್ಕೆ ಸರಕಾರ ನ್ಯಾಯ ಒದಗಿಸಿಕೊಡಬೇಕು ಬಹುದಿನಗಳ ಬೇಡಿಕೆಯಾಗಿರುವ ಎಸ್‍ಟಿ ಮೀಸಲಾತಿ ನೀಡುವಂತೆ ಒತ್ತಾಯಿಸಿ ಮಾ10 ರಿಂದ ನಾಲ್ಕು ದಿನಗಳವರೆಗೆ ಈ ಪಾದಯಾತ್ರೆ ಹಮ್ಮಿಕೊಳ್ಳಲಾಗಿದ್ದು ಸಮಾಜದ ಬಾಂಧವರು ನೂರಾರು ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಪಾದಯಾತ್ರೆಯಲ್ಲಿ ಸಮಾಜದ ಸ್ವಾಮಿಗಳು, ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ರಾಜ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಕೆ.ಪಿ.ನಂಜುಂಡಿ ಸೇರಿದಂತೆ ರಾಜ್ಯ ಹಾಗೂ ಜಿಲ್ಲಾ ಮಟ್ಟದ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.

ಪಾದಯಾತ್ರೆಯು ಮೊದಲ ದಿನ ಕುಂಬಾರಪೇಟ, ಎರಡನೇ ದಿನ ಶಹಾಪುರ, ಮೂರನೇ ದಿನದಂದು ನಾಯ್ಕಲ್ ಗ್ರಾಮದಲ್ಲಿ ವಾಸ್ತವ್ಯ ನಡೆಯಲಿದ್ದು ಮಾ13 ರಂದು ಯಾದಗಿರಿ ಜಿಲ್ಲಾಧಿಕಾರಿಗಳ ಕಚೇರಿಗೆ ತಲುಪಲಿದೆ ಕಚೇರಿ ಮುಂದೆ ಬೃಹತ್ ಪ್ರತಿಭಟನಾ ಸಮಾವೇಶ ಏರ್ಪಡಿಸಲಾಗಿದೆ ಸಾವಿರಾರು ಸಂಖ್ಯೆಯಲ್ಲಿ ಸಮಾಜದ ಬಾಂಧವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.ಇದೇ ಸಂದರ್ಭದಲ್ಲಿ ಪಾದಯಾತ್ರೆಯ ಭಿತ್ತಿ ಪತ್ರಗಳನ್ನು ಬಿಡುಗಡೆಗೊಳಿಸಲಾಯಿತು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ದೇವಿಂದ್ರಪ್ಪ ತಳವಾರಗೇರಾ, ಮಹೇಶಕುಮಾರ ಶಾರದಳ್ಳಿ, ಮಾನಪ್ಪ ನಾಲವಾರ, ಮಲ್ಲು ಬಡಿಗೇರ, ಚಂದ್ರು ಗೋಗಿ, ದೇವಿಂದ್ರಪ್ಪ ಬೈರಿಮಡ್ಡಿ, ಮಹೇಶ ವಿಶ್ವಕರ್ಮ, ಬಲಭೀಮ ಶೆಳ್ಳಗಿ, ಬಸವರಾಜ ಪತ್ತಾರ, ಮಹೇಶ ಸಗರ, ಮೌನೇಶ ಗುಡಿ ತಿಂಥಣಿ, ಶಿವಕುಮಾರ ವಿಶ್ವಕರ್ಮ, ಮೌನೇಶ ಕೋನಾಳ, ಗುರುರಾಜ ವಿಶ್ವಕರ್ಮ, ಶಂಕ್ರಪ್ಪ ಕಲಕೇರಿ, ರಾಜು ತಾಳಿಕೋಟಿ, ರಘುವೀರ ಸೂಗೂರು, ಬಸವರಾಜ ಜೂಜುಗಾರ ತಿಂಥಣಿ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here