ಬಿಸಿ ಬಿಸಿ ಸುದ್ದಿ

ನೆರೆ ಸಂತ್ರಸ್ಥರಿಗೆ ಸಹಾಯ ಹಸ್ತ ಚಾಚಲು ಪತ್ರಕರ್ತರ ನಿರ್ಧಾರ

ಯಾದಗಿರಿ: ಇಲ್ಲಿನ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ನಡೆದ ಸಭೆಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಭಾರಿ ಪ್ರವಾಹದಿಂದ ನಲುಗಿದ ಕುಟುಂಬಗಳ ಸಹಾಯಕ್ಕಾಗಿ ನೆರೆ ಸಂತ್ರಸ್ಥರಿಗೆ ಸಹಾಯ ಹಸ್ತ ಚಾಚಲು ನಿರ್ಧರಿಸಲಾಯಿತು.

ಇದೇ ವೇಳೆ ಮಾತನಾಡಿದ ಸಂಘದ ಜಿಲ್ಲಾ ಉಪಾಧ್ಯಕ್ಷ ಇಂಧುಧರ ಸಿನ್ನೂರ, ಸಂತ್ರಸ್ಥರಿಗೆ ನಮ್ಮ ಕೈಲಾದಷ್ಟು ಸಹಾಯ ಮಾಡೋಣ. ಜಿಲ್ಲೆಯಲ್ಲಿನ ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳ ಮುಖಂಡರು ಹೀಗೆ ಸಮಾಜದ ನಾನಾ ಬಗೆಯ ಯುವ ಮುಖಂಡರುಗಳಿಂದ ಕೂಡ ದೇಣಿಗೆ ಸಂಗ್ರಹಿಸಿ ನೆರೆ ಸಂತ್ರಸ್ಥರಿಗೆ ನೀಡೋಣ ಎಂದು ಹೇಳಿದರು.

ಇದಕ್ಕೆ ಸಮ್ಮತಿಸಿದ ಹಿರಿಯ ಪತ್ರಕರ್ತರಾದ ಅನೀಲ ದೇಶಪಾಂಡೆ, ಎಸ್.ಎಸ್.ಮಠ ನಗರದಲ್ಲಿ ಕೆಲವು ವ್ಯಾಪಾರಿಗಳಿಂದ ಮತ್ತು ಉದ್ಯಮಿಗಳಿಂದಲೂ ಕೂಡ ಸಹಾಯ ಪಡೆಯೋಣ ಒಟ್ಟಿನಲ್ಲಿ ನೆರೆ ಸಂತ್ರಸ್ಥರಿಗೆ ನೀಡುವ ಮನಸ್ಸಿದ್ದವರು ಯಾರೆ ಇದ್ದರೂ ಅವರು ನಮ್ಮ ಸಂಘವು ದೇಣಿಗೆ ಸಂಗ್ರಹಿಸುವ ಸಂದರ್ಭದಲ್ಲಿ ಬಂದು ದೇಣಿಗೆಯನ್ನು ನೀಡಬಹುದು ಎಂದು ತಿಳಿಸಿದರು. ಪತ್ರಕರ್ತರಾದ ಲಕ್ಷ್ಮೀಕಾಂತ ಕುಲಕರ್ಣಿ, ಮಹೇಶ ಕಲಾಲ ಮಾತನಾಡಿ, ನಗರದಲ್ಲಿ ಸಂಗ್ರಹಿಸಿದ ದೇಣಿಗೆಯನ್ನು ನಮ್ಮ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿಗಳಿಗೆ ಸಲ್ಲಿಸೋಣ. ಇದರಿಂದ ಪ್ರಕೃತಿ ವಿಕೋಪದಡಿಯಲ್ಲಿ ಸರ್ಕಾರ ಬಡವರ ನೆರವಿಗೆ ಧಾವಿಸಲು ಇನ್ನಷ್ಟು ಬಲ ಬಂದಂತಾಗುತ್ತದೆ ಎಂದು ಸಲಹೆ ನೀಡಿದರು.

ರವಿಕುಮಾರ ನರಬೋಳಿ, ರವಿ ಕುಲಕರ್ಣಿ ಮಾತನಾಡಿ, ಈಗಾಗಲೇ ಸಾಕಷ್ಟು ಸಮಯವಾಗಿದೆ. ಸುದ್ದಿ ಸಂಗ್ರಹಿಸುವ ಸಮಯದಲ್ಲಿ ನೆರೆ ಸಂತ್ರಸ್ಥರಿಗೆ ಸಹಾಯ ಹಸ್ತ ಚಾಚಲು ದಿನಗಳು ಕಳೆದಂತಾಗಿವೆ ನಾಳೇನೇ ನಿಧಿ ಸಂಗ್ರಹಿಸಿ ಸಲ್ಲಿಸೋಣ ಎಂದು ಸಲಹೆ ನೀಡಿದರು. ಪತ್ರಕರ್ತರಾದ ಸಾಗರ ದೇಸಾಯಿ, ರಾಜು ನಲ್ಲಿಕರ್ ಮಾತನಾಡಿ, ಎಲ್ಲ ಸಂಘ ಸಂಸ್ಥೆಗಳ ಮುಖಂಡರಿಗೆ ಮತ್ತು ಜನಪ್ರತಿನಿಧಿಗಳಿಗೆ ನಮ್ಮ ಸಮಯವನ್ನು ತಿಳಿಸೋಣ ಅವರು ಕೂಡ ಅಂದು ಬಂದು ತಮ್ಮ ಕೈಲಾದಷ್ಟು ಸಹಾಯವನ್ನು ಮಾಡಲಿ ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ಪದಾಧಿಕಾರಿಗಳು, ಪತ್ರಕರ್ತರು ಇದ್ದರು.

emedialine

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

4 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

5 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

5 hours ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

5 hours ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

5 hours ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

5 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420