ಸುರಪುರ: ಪ್ರತಿ ವರ್ಷದಂತೆ ತಾಲೂಕಿನ ಜನತೆ ಶಾಂತಿಯುತವಾಗಿ ಹೋಳಿ ಹಬ್ಬವನ್ನು ಆಚರಣೆ ಮಾಡುವಂತೆ ಪೊಲೀಸ್ ಇನ್ಸ್ಪೇಕ್ಟರ್ ಆನಂದ ವಾಘ್ಮೋಡೆ ಸಲಹೆ ನೀಡಿದರು.
ನಗರದ ಪೊಲೀಸ್ ಠಾಣೆ ಆವರಣದಲ್ಲಿ ಹೋಳಿ ಹಬ್ಬದ ಅಂಗವಾಗಿ ನಡೆದ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಷ್ಟವಿಲ್ಲದವರಿಗೆ ಬಲವಂತದಿಂದ ಬಣ್ಣ ಹಚ್ಚುವುದಾಗಲಿ,ಹಣಕ್ಕಾಗಿ ಬಲವಂತ ಮಾಡುವುದಾಗಲಿ ಯಾರೂ ಮಾಡಬೇಡಿ ಯಾವುದೇ ಕಾರಣಕ್ಕೂ ಅಹಿತಕರ ವಾತಾವರಣ ಸೃಷ್ಟಿಯಾಗದಂತೆ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆ ಬಾರದಂತೆ ಶಾಂತಿ ಸೌಹಾರ್ಧತೆಯಿಂದ ಹೋಳಿ ಹಬ್ಬವನ್ನು ಆಚರಿಸುವಂತೆ ತಿಳಿಸಿದರು.
ಇದೇ ಸಂದರ್ಭದಲ್ಲಿ ಸಭೆಯಲ್ಲಿ ಭಾಗವಹಿಸಿದ್ದ ಅನೇಕ ಮುಖಂಡರು ಮಾತನಾಡಿ,ನಮ್ಮದು ಸೌಹಾರ್ಧ ಸಾಮರಸ್ಯಕ್ಕೆ ಹೆಸರುವಾಸಿಯಾದ ತಾಲೂಕಾಗಿದೆ.ಇಲ್ಲಿ ಎಲ್ಲಾ ಧರ್ಮಿಯರು ಎಲ್ಲಾ ಹಬ್ಬವನ್ನು ತುಂಬಾ ಸಹೋದರತೆಯ ಭಾವನೆಯೊಂದಿಗೆ ಆಚರಣೆ ಮಾಡುತ್ತಾರೆ.ಹಿಂದುಗಳ ಹಬ್ಬವನ್ನು ಇತರೆ ಧರ್ಮಿಯರು ಭಾಗವಹಿಸಿ ಹಾಗೂ ಮುಸ್ಲೀಂ ಹಬ್ಬಗಳಾದ ರಮಜಾನ್,ಮೋಹರಂ ಹಾಗೂ ಕ್ರೈಸ್ತರ ಕ್ರಿಸ್ ಮಸ್ನಂತಹ ಹಬ್ಬಗಳನ್ನು ಎಲ್ಲರು ಸೇರಿ ಆಚರಿಸಿ ಸಹೋದರತೆಯನ್ನು ಮೆರೆಯುತ್ತಾರೆ.ಆದ್ದರಿಂದ ಅದರಂತೆಯೇ ಈಗ ಎಲ್ಲರು ಹೋಳಿ ಹಬ್ಬವನ್ನು ಶಾಂತಿಯುತವಾಗಿ ಆಚರಿಸೋಣ ಮತ್ತು ಕೆಮಿಕಲ್ ಬಣ್ಣವನ್ನು ತ್ಯಜಿಸಿ ಆರೋಗ್ಯಕ್ಕೆ ಯಾವುದೇ ರೀತಿಯ ಕೆಟ್ಟ ಪರಿಣಾಮ ಬೀರದಂತ ಬಣ್ಣವನ್ನು ಹಚ್ಚಿ ಯಾವುದೇ ಕಾನೂನು ಸುವ್ಯವಸ್ಥೆಗೆ ಧಕ್ಕೆ ಬಾರದಂತೆ ಎಲ್ಲರು ಸೇರಿ ಹಬ್ಬವನ್ನು ಆಚರಿಸೋಣ ಎಂದರು.
ಈ ಸಂದರ್ಭದಲ್ಲಿ ಪಿಎಸ್ಐ ಸಿದ್ರಾಮಪ್ಪ,ಮುಖಂಡರಾದ ವೆಂಕೋಬ ದೊರೆ ಬೊಮ್ಮನಹಳ್ಳಿ,ರಮೇಶ ದೊರೆ ಆಲ್ದಾಳ,ವೆಂಕಟೇಶ ಬೇಟೆಗಾರ,ಸಚಿನಕುಮಾರ ನಾಯಕ,ಮುಫ್ತಿ ಎಕ್ಬಾಲ್ ಸಾಬ್ ಒಂಟಿ, ಭೀಮರಾಯ ಸಿಂದಗೇರಿ,ಖಾಜಾ ಅಜ್ಮೀರ್ ಸೇರಿದಂತೆ ಅನೇಕರು ಸಭೆಯಲ್ಲಿ ಭಾಗವಹಿಸಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…