ಹೈದರಾಬಾದ್ ಕರ್ನಾಟಕ

ಸಮಾಜದ ನೊಂದವರ ನೆರವಿಗೆ ಧಾವಿಸಿ

ಕಲಬುರಗಿ; ಇಂದು ಪಾಶ್ಚಿಮಾತ್ಯ ಸಂಸ್ಕ್ರತಿಗೆ ಮಾರು ಹೋಗದೆ ಕಾಟಾಚಾರಕ್ಕಾಗಿ ಸಮಾಜ ಸೇವೆ ಮಾಡದೇ ನಿಜವಾದ ಸಾಮಾಜಿಕ ಕಳಕಳಿಯನ್ನು ಯುವಕರು ಹೊಂದಬೇಕಾಗಿದೆ, ಯಾರು ಕಷ್ಟದಲ್ಲಿ ಇರುತ್ತಾರೆಯೋ ಅಂತವರ ನೆರವಿಗೆ ಇಂದಿನ ಯುವ ಸಮುದಾಯ ಮುಂದೆ ಬರಬೇಕೆಂದು ಮಾಜಿ ವಿಧಾನ ಪರಿಷತ್ ಸದಸ್ಯರಾದ ಅಲ್ಲಮಪ್ರಭು ಪಾಟೀಲ ಹೇಳಿದರು.

ನಗರದ ಕನ್ನಡ ಸಾಹಿತ್ಯ ಪರಿಷತ್ತಿನ ಸುವರ್ಣ ಭವನದಲ್ಲಿ ನಿಸರ್ಗ ಗ್ರಾಮಿಣ ಅಭಿವೃದ್ಧಿ ಸೇವಾ ಸಂಸ್ಥೆ ಏರ್ಪಡಿಸಿದ ಸಂಸ್ಥೆಯ ದ್ವಿ ದಶಮಾನೋತ್ಸವದ ಅಂಗವಾಗಿ ವಿವಿಧ ಕ್ಷೇತ್ರದ ಗಣ್ಯರಿಗೆ ನಿಸರ್ಗ ರತ್ನ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.
ಸಮಾಜ ಸೇವೆ ಮಾಡುವ ಮನೋಭಾವ ಮತ್ತು ಇಚ್ಚಾಶಕ್ತಿ ಯುವ ಸಮುದಾಯದಲ್ಲಿ ಬೆಳೆಯಬೇಕಾಗಿದೆ. ಇಂತಹ ಕಾರ್ಯಗಳಿಗಾಗಿ ಸಹಾಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ದಿವ್ಯ ಸಾನಿಧ್ಯ ವಹಿಸಿದ ಖಜೂರಿಯ ಕರುಣೇಶ್ವರ ಮಠದ ಪೂಜ್ಯರಾದ ಮುರುಗೇಂದ್ರ ಶಿವಯೋಗಿಗಳು, ಕನ್ನಡ ನಾಡು ಮತ್ತು ಜಲ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ, ಪ್ರಶಸ್ತಿಗಳಿಂದ ಸಾಮಾಜಿಕ ಜವಾಬ್ದಾರಿ ಹೆಚ್ಚುತ್ತದೆ ಎಂದು ಹೇಳಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಜೈ ಕನ್ನಡಿಗರ ರಕ್ಷಣಾ ವೇದಿಕೆ ಅಧ್ಯಕ್ಷ ಸಚಿನ್ ಫರಹತಾಬಾದ ರವರು ಸಂವಿಧಾನದ 371 (ಜೆ) ಕಲಂ ಅನ್ನು ಸರಿಯಾದ ರೀತಿಯಲ್ಲಿ ಪ್ರಯೋಜನಕಾರಿಯಾಗಲಿ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಸುರೇಶ ಬಡಿಗೇರ ಪ್ರಮಾಣೀಕಥನ, ಪ್ರಯತ್ನ ಮತ್ತು ಸಮಯ ಪ್ರಜ್ಞೆಯಿಂದ ಸಾಮಾಜಿಕ ಕಳಕಳಿಯನ್ನು ಹೊಂದಬೇಕಾಗಿದೆ. ಸರಕಾರ ನೀಡುವ ಶಿಫಾರಸ್ಸಿನ ಪ್ರಶಸ್ತಿಗಳಿಗಿಂತ ಸಂಘ ಸಂಸ್ಥೆಗಳು ಕೊಡಮಾಡುವ ಪ್ರಶಸ್ತಿಗಳಲ್ಲಿ ಹೆಚ್ಚಿನ ಮೌಲ್ಯ ಇರುತ್ತದೆ ಎಂದು ಹೇಳಿದರು.

ಪ್ರಗತಿಪರ ಚಿಂತಕ ಮಹಾದೇವ ಧನ್ನಿ, ಜಿಲ್ಲಾ ಕ.ಸಾ.ಪ ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ ನ್ಯಾಯವಾದಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಪಿ.ಎನ್. ಕಪನೂರ, ಸಂಸ್ಥೆಯ ಕಾರ್ಯದರ್ಶಿ ಧೂಳಪ್ಪ ಧ್ಯಾಮನಕರ್ ಎಂ.ಡಿ. ಸಿದ್ದೀಕಿ, ಇತರರು ಉಪಸ್ಥಿತರಿದ್ದರು.
ಇದೇ ಕಾರ್ಯಕ್ರಮದಲ್ಲಿ ವಿವಿಧ ಸಾಧಕರಿಗೆ ನಿಸರ್ಗ ರತ್ನ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಕಾರ್ಯಕ್ರಮದ ಆರಂಭಕ್ಕೆ ಕು. ಆಕಾಂಕ್ಷಾ ಪುರಾಣಿಕ್ ಹಾಗೂ ಹಾಗೂ ಕು. ಅನನ್ಯಾ ಗೋಲ್ಡಸ್ಮಿತ್ ಅವರಿಂದ ಭರತನಾಟ್ಯ ಪ್ರದರ್ಶನ ಮಾಡಲಾಯಿತು.

ವಿವಿಧ ಕಲಾ ತಂಡಗಳಿಂದ ಜಾನಪದ ಸಂಭ್ರಮ, ಸಂಪ್ರದಾಯ ಪದ ಕಾರ್ಯಕ್ರಮಗಳು ನಡೆಯಿತು. ಕಾರ್ಯಕ್ರಮದಲ್ಲಿ ಕಾರ್ಯಕ್ರಮದಲ್ಲಿ ಮಹಾಂತೇಶ ನಂದಗಿರಿ, ಹಣಮಂತ ರೇವಣ್ಣೋರು, ದಯಾನಂದ ತಳಕೇರಿ, ರವಿ ಸರಾಫ್, ದೇವರಾಜ, ಸಿದ್ದರಾಮ ರಾಜಮಾನೆ, ಸಂತೋಶ ಹಂಗರಗಿ, ವೆಂಕಟೇಶ ತಿವಾರಿ, ಮಲ್ಲಿಕಾರ್ಜುನ ಲಿಗಾಡೆ, ಪೀರಪ್ಪ ಹಾದಿಮನಿ, ಬಸವರಾಜ ಕಟ್ಟಿಮನಿ, ಶಾಮಸುಂದರ್ ಜೋಶಿ, ಶ್ರೀನಿವಾಸ ಕಾಡಾದಿ, ಧರ್ಮಣ್ಣ ಧನ್ನಿ, ಸಿದ್ದರಾಮ ನಡಿಗೇರಿ, ಕಲ್ಯಾಣಿ ನವರಂಗ್, ನಾಗೇಂದ್ರಪ್ಪ ಮುಡ್ಡಿ ಭಾಗವಹಿಸಿದರು.
ಪ್ರಕಾಶ ಹದನೂರ ನಿರೂಪಿಸಿದರು, ಶಿಕ್ಷಕ ಮುರುಳಿಧರ್ ಟೋಣಪೆರವರ ವಂದಿಸಿದರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

7 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

8 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

8 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

8 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

9 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

10 hours ago