ಲಕ್ಷ್ಮೀಪುರ ಶ್ರೀಗಿರಿ ಮಠದಲ್ಲಿ ರೇಣುಕಾಚಾರ್ಯ ಜಯಂತಿ ಆಚರಣೆ

0
9

ಸುರಪುರ: ತಾಲೂಕಿನ ಲಕ್ಷ್ಮೀಪುರ ಶ್ರೀಗಿರಿ ಮಠದಲ್ಲಿ ರೇಣುಕಾಚಾರ್ಯರ ಜಯಂತಿ ಆಚರಿಸಲಾಯಿತು.ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಮೊದಲಿಗೆ ಶ್ರೀಗಿರಿ ಮಠದ ಆವರಣದಲ್ಲಿ ಧ್ವಜಾರೋಹಣ ನಂತರ ರೇಣುಕಾಚಾರ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ಗೌರವ ವಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ನಿಷ್ಠಿ ಕಡ್ಲೆಪ್ಪನವರ ವಿರಕ್ತ ಮಠದ ಶ್ರೀ ಪ್ರಭುಲಿಂಗ ಮಹಾಸ್ವಾಮೀಜಿ,ರುಕ್ಮಾಪುರ ಹಿರೇಮಠದ ಗುರುಶಾಂತಮೂರ್ತಿ ಶಿವಾಚಾರ್ಯ ಸ್ವಾಮೀಜಿ,ಶ್ರೀಗಿರಿ ಮಠದ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ,ಸಿದ್ದಲಿಂಗಯ್ಯ ಶಾಸ್ತ್ರಿಗಳು ಬಲಶೆಟ್ಟಿಹಾಳ,ಸಿದ್ದಯ್ಯಸ್ವಾಮಿ ಕಡ್ಲೆಪ್ಪನವರ ಮಠ,ಸುನೀಲಕುಮಾರ ಪಂಚಾಂಗಮಠ,ಮಹೇಶ ತಂಬೂರಿಮಠ,ಮಲ್ಲಿಕಾರ್ಜುನಯ್ಯ ಸ್ವಾಮಿ ಹಿರೇಮಠ,ಅಮರಯ್ಯಸ್ವಾಮಿ ಗೆಜ್ಜಿಮಠ,ಸಾಗರ ಪುರಾಣಿಕಮಠ,ಬಸಯ್ಯಸ್ವಾಮಿ ಹಿರೇಮಠ ದೇವತ್ಕಲ್,ಬಸಲಿಂಗಯ್ಯಸ್ವಾಮಿ ಶ್ರೀಗಿರಿಮಠ,ಶಾಂತಯ್ಯಸ್ವಾಮಿ ಹಿರೇಮಠ,ಬನ್ನಯ್ಯಸ್ವಾಮಿ ರೂಮಾಲಮಠ,ಬಸಯ್ಯಸ್ವಾಮಿ ಗಣಚಾರಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here