ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ; ಶಾಸಕ ಬಸವರಾಜ ಮತ್ತಿಮಡು

0
8

ಕಲಬುರಗಿ: ವಿಜಯ ಸಂಕಲ್ಪ ಯಾತ್ರೆಗೆ ಜನರ ಬೆಂಬಲನೋಡಿದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಶಾಸಕ ಬಸವರಾಜ ಮತ್ತಿಮೂಡ ಹೇಳಿದರು.

ಅವರು ಶಹಾಬಾದ ನಗರದ ಪಾರ್ವತಿ ಕಲ್ಯಾಣ ಮಂಟಪದಲ್ಲಿ ವಿಜಯ ಸಂಕಲ್ಪ ಯಾತ್ರೆಯ ನಿಮಿತ್ತ ಆಯೋಜಿಸಲಾದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

Contact Your\'s Advertisement; 9902492681

ಪ್ರಧಾನಿ ನರೇಂದ್ರ ಮೋದಿ,ಕೇಂದ್ರ ಗೃಹ ಸಚಿವ ಅಮಿತ್ ಷಾ, ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಮುಂದಾಳತ್ವದಲ್ಲಿ ಬಿಜೆಪಿ ವಿಶ್ವದ ಅತಿ ದೊಡ್ಡದಾದ ಪಕ್ಷವಾಗಿ ಬೆಳೆದಿದೆ.ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ಬರಲಿದೆ. ಈಗಾಗಲೇ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಜನಪರವಾದ ಆಡಳಿತವನ್ನು ನೀಡುವ ಮೂಲಕ ಜನಮನ್ನಣೆ ಪಡೆದಿದೆ.ಕಲಬುರಗಿ ಗ್ರಾಮೀಣ ಮತಕ್ಷೇತ್ರದಲ್ಲೂ ಸಾಕಷ್ಟು ಅಭಿವೃದ್ಧಿ ಕೆಲಸಗಳು ಮಾಡಲಾಗಿದೆ.ಇಲ್ಲಿನ ಕಾರ್ಯಕರ್ತರೇ ನನಗೆ ಶಕ್ತಿ.ಅವರು ನನಗೆ ಸಾಕಷ್ಟು ಪ್ರೀತಿ, ವಿಶ್ವಾಸ ಕೊಟ್ಟಿದ್ದಾರೆ.ಅವರ ಪ್ರೀತಿ, ವಿಶ್ವಾಸ ನನಗೆ ಶ್ರೀರಕ್ಷೆಯಾಗಿದೆ ಎಂದರು.

ವಿಭಾಗೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ ಬಿನ್ನಾಡೆ ಮಾತನಾಡಿದರು. ಗ್ರಾಮೀಣ ಪ್ರಭಾರಿ ಶರಣಪ್ಪ ತಳವಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶೋಕ ಬಗಲಲಿ, ಲಿಂಗರಾಜ ಬಿರಾದರ, ಗ್ರಾಮೀಣ ಮಂಡಲ ಅಧ್ಯಕ್ಷ ಸಂಗಮೇಶ ವಾಲಿ, ನಗರ ಮಂಡಲ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ, ಕಾಡಾ ಅಧ್ಯಕ್ಷ ಹರ್ಷವರ್ಧನ ಗುಗ್ಗಳೆ, ಪ್ರಧಾನ ಕಾರ್ಯದರ್ಶಿ ಜಗನ್ನಾಥ ಮಾಲಿಪಾಟೀಲ್, ಪ್ರವೀಣ ಮುಚ್ಚಟ್ಟಿ, ಸದಾನಂದ ಕುಂಬಾರ, ಸಿದ್ರಾಮ ಕುಸಾಳೆ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here