ಶಹಾಬಾದ: ವಿಜಯ ಸಂಕಲ್ಪ ಯಾತ್ರೆ- ಎಲ್ಲೆಡೆ ಬಿಜೆಪಿ ಧ್ವಜಗಳು

0
6

ಕಲಬುರಗಿ:ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಗೆ ಜಿಲ್ಲೆಯ ಶಹಾಬಾದ ನಗರ ಸಜ್ಜಾಗಿದೆ.ನಗರದಲ್ಲೆಡೆ ಬಿಜೆಪಿ ಧ್ವಜ ಮತ್ತು ಕಟೌಟ್‍ಗಳು ರಾರಾಜಿಸುತ್ತಿವೆ.ಕೇಸರಿ ಬಣ್ಣ ಬಟ್ಟೆಯ ಸ್ವಾಗತ ಕಮಾನುಗಳು, ರಸ್ತೆಯ ತುಂಬೆಲ್ಲಾ ಪರಾರಿಗಳು ಕಟ್ಟಿದ್ದು ನಗರ ಕಂಗೊಳಿಸುತ್ತಿದೆ.

ಶಹಾಬಾದ ನಗರದ ವಾಡಿ ವೃತ್ತದಿಂದ ಬಸವೇಶ್ವರ ವೃತ್ತ ಹಾಗೂ ಬಸವೇಶ್ವರ ವೃತ್ತದಿಂದ ನೆಹರು ವೃತ್ತದವರೆಗಿನ ಮುಖ್ಯ ರಸ್ತೆಯುದಕ್ಕೂ ಎರಡು ಕಡೆ ಕಟ್ಟಿಗೆಯ ಕೋಲುಗಳನ್ನು ಅಳವಡಿಸಿ ಧ್ವಜಗಳನ್ನು ಕಟ್ಟಲಾಗಿದೆ. ನಗರದ ಬಸವೇಶ್ವರ ವೃತ್ತದಲ್ಲಿ ಮಂಟಪ ನಿರ್ಮಿಸಲಾಗಿದೆ.ಅಲ್ಲದೇ ಮುಖ್ಯ ರಸ್ತೆಯ ಮಧ್ಯದ ಡಿವೈಡರ್ದಲ್ಲಿನ ಪ್ರತಿ ವಿದ್ಯುತ್ ಕಂಬಗಳಿಗೆ ಕಟೌಟ್ ಕಟ್ಟಲಾಗಿದೆ. ನಗರದ ಸಹರಾ ಫಂಕ್ಷನ್ ಹಾಲ್‍ನಲ್ಲಿ ಊಟದ ವ್ಯವಸ್ಥೆಯೂ ಮಾಡಲಾಗಿದೆ.

Contact Your\'s Advertisement; 9902492681

ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಹೆಲಿಕಾಪ್ಟರ್ ಮೂಲಕ ಜಿಇ ಕಾರ್ಖಾನೆಯ ಹೆಲಿಪ್ಯಾಡಗೆ ಆಗಮಿಸುವರು.10:20 ಗಂಟೆಗೆ ಬಸವೇಶ್ವರ ವೃತ್ತದಿಂದ ನೆಹರು ವೃತ್ತಕ್ಕೆ ತೆರಳುವರು. ಬಾಬು ಜಗಜೀವನರಾಮ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವರು.ನಂತರ ನೆಹರು ವೃತ್ತದಿಂದ ಬಸವೇಶ್ವರ ವೃತ್ತದವರೆಗೆ ವಿಜಯ ಸಂಕಲ್ಪ ಯಾತ್ರೆ-3 ಮೆರವಣಿಗೆ ನಡೆಯಲಿದೆ.

ಜಗದೀಶ ಶೆಟ್ಟರ್, ಕೇಂದ್ರ ಸಚಿವ ಭಗವಂತ ಖೂಬಾ, ಸಚಿವರಾದ ಬಿ.ಶ್ರೀರಾಮಲು,ಪ್ರಭು ಚವ್ಹಾಣ, ಹಾಲಪ್ಪ ಆಚಾರ್, ಆನಂದಸಿಂಗ, ಅರವಿಂದ ಲಿಂಬಾವಳಿ, ಬಾಬುರಾವ ಚಿಂಚನಸೂರ,ಮಾಲಿಕಯ್ಯ ಗುತ್ತೆದಾರ,ಸಿದ್ಧರಾಜು, ಮಾರುತಿರಾವ ಮೂಳೆ, ಕಲಬುರಗಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಭಾಗವಹಿಸಲಿದ್ದಾರೆ.

ಅಲ್ಲದೇ ಮಂಡಲ ಅಧ್ಯಕ್ಷರು, ಮುಖಂಡರು, ಕಾರ್ಯಕರ್ತರು ಸೇರಿದಂತೆ ಸಾವಿರಾರು ಜನರು ಸೇರಲಿದ್ದಾರೆ ಎಂದು ಮಂಡಲ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ ತಿಳಿಸಿದ್ದಾರೆ.

ಶಾಸಕ ಬಸವರಾಜ ಮತ್ತಿಮಡು ಅವರ ನೇತೃತ್ವದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳಾಗಿವೆ. ಹೀಗಾಗಿ ಈ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಿ ಬಸವರಾಜ ಮತ್ತಿಮಡು ಅವರನ್ನು ಗೆಲ್ಲಿಸಬೇಕಿದೆ. ಎಂದರು.ಗ್ರಾಮೀಣ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಉತ್ತಮವಾಗಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಆಗಮನದಿಂದ ಪಕ್ಷಕ್ಕೆ ಇನ್ನಷ್ಟು ಶಕ್ತಿ ಮತ್ತು ಕಾರ್ಯಕರ್ತರಲ್ಲಿ ಚೈತನ್ಯ ತುಂಬಲಿದೆ. ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ- ಅಣವೀರ ಇಂಗಿನಶೆಟ್ಟಿ ಅಧ್ಯಕ್ಷ ಬಿಜೆಪಿ ಮಂಡಲ ಶಹಾಬಾದ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here