ಕಲಬುರಗಿ: ಶಹಾಬಾದ ನಗರದಲ್ಲಿ ವಿಶ್ವಹಿಂದು ಪರಿಷತ್ ವತಿಯಿಂದ ಬುಧವಾರ ಆಚರಿಸಲಾದ ಹೋಳಿ ಹಬ್ಬವನ್ನು ವಿಶ್ವಹಿಂದು ಪರಿಷತ್ ಕಾರ್ಯಕರ್ತರು ಪರಸ್ಪರ ಬಣ್ಣ ಹಚ್ಚುವ ಮೂಲಕ ಸಂಭ್ರಮದಿಂದ ಹಬ್ಬವನ್ನು ಆಚರಿಸಿದರು.
ನಗರದ ಶಾಸ್ತ್ರೀ ಚೌಕದಿಂದ ಶ್ರೀರಾಮ ಮಾರುಕಟ್ಟೆವರೆಗೆ ಟ್ರ್ಯಾಕ್ಟರ್ಗಳಲ್ಲಿ ಸಾಲಾಗಿ ನಿಲ್ಲಿಸಿ ಅದರಲ್ಲಿರುವ ಬ್ಯಾರೆಲಗಳಲ್ಲಿ ಬಣ್ಣವನ್ನು ತುಂಬಲಾಗಿತ್ತು. ಪರಸ್ಪರ ಬಣ್ಣ ಎರೆಚುವ ಮೂಲಕ ಹಬ್ಬದ ಆಚರಣೆಯಲ್ಲಿ ತೊಡಗಿದ್ದು ಕಂಡು ಬಂತು. ಅಲ್ಲದೇ ನಗರದ ಭಾರತ್ ವೃತ್ತದಲ್ಲಿ ಮಡಿಕೆ ಓಡೆಯುವ ಯುವಕರ ಸಾಹಸಮಯ ಪ್ರದರ್ಶನ ಸಾರ್ವಜನಿಕರ ಗಮನ ಸೆಳೆಯಿತು.
ಅಲ್ಲದೇ ಟ್ರ್ಯಾಕ್ಟರ್ಗಳಲ್ಲಿ ಬಣ್ಣ ತುಂಬಿದ ಬ್ಯಾರೆಲ್ಗಳ ಮುಖಾಂತರ ನೀರು ಎರಚುವ ಮೂಲಕ ರಂಗು ರಂಗಿನಲ್ಲಿ ಸಾರ್ವಜನಿಕರು ತೇಲಾಡಿದರು. ಅಲ್ಲದೇ ಯುವಕರು ರಂಗಿನಾಟದಲ್ಲಿ ಪಾಲ್ಗೊಳ್ಳದ ಯುಕರನ್ನು ಓಢಾಡಿಸಿ ಅವರಿಗೆ ಬಣ್ಣ ಎರಚುವುದು ಮನರಂಜನೀಯವಾಗಿತ್ತು. ಪರಸ್ಪರ ಬಣ್ಣ ಹಚ್ಚಿಕೊಂಡು ಕುಣಿದು ಕುಪ್ಪಳಿಸಿದರು. ನಗರದ ಬಡಾವಣೆಗಳಲ್ಲಿ ಪ್ರತಿಷ್ಟಾಪಿಸಿದ್ದ ಕಾಮಣ್ಣರ ಮೂರ್ತಿಗೆ ಪೂಜೆ ಸಲ್ಲಿಸಿ ಮಂಗಳವಾರÀ ರಾತ್ರಿಯೇ ಕಾಮದಹನ ಮಾಡಲಾಯಿತು.ಶುಕ್ರವಾರ ಬೆಳಗ್ಗೆಯಿಂದಲೇ ಮಕ್ಕಳು ,ಯುವಕರು ಹಲಿಗೆ ಬಾರಿಸುತ್ತ ಪರಸ್ಪರ ಬಣ್ಣ ಎರಚಿ ಸಂಭ್ರಮಿಸಿದರು.
ಅಲ್ಲದೇ ಭಾರತ್ ಚೌಕನಲ್ಲಿ ಎಲ್ಲರೂ ಸೇರಿಕೊಂಡು ಪರಸ್ಪರ ಹೋಳಿ ಶುಭಾಶಯ ಕೋರಿ ಬಣ್ಣದೋಕುಳಿ ಆಡಿ ಸಂಭ್ರಮಿಸಿದರು. ಹಬ್ಬದ ನಿಮಿತ್ಯ ಬಿಗಿ ಪೊಲೀಸ್ ಬಂದೋಬಸ್ತ ಮಾಡಲಾಗಿತ್ತು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…