ಕಲಬುರಗಿ: ಶಹಾಬಾದ ನಗರದಲ್ಲಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯ ಗ್ಯಾರಂಟಿ ಕಾರ್ಡ್ ಅಭಿಯಾನಕ್ಕೆ ಬ್ಲಾಕ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಡಾ. ಡಾ.ರಶೀದ್ ಮರ್ಚಂಟ ಚಾಲನೆ ನೀಡಿದರು.
ಶಹಾಬಾದ ನಗರದ ವಾರ್ಡ 11,12,13 ರ ಪ್ರತಿಯೊಬ್ಬ ಮತದಾರನ ಮನೆಗೆ ಬೇಟಿ ನೀಡಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನಪರವಾದ ಯೋಜನೆ ಬರಲಿದೆ. ಗೃಹಜ್ಯೋತಿ ಯೋಜನೆ ಮೂಲಕ ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ಪೂರೈಕೆ, ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಮನೆಯೊಡತಿಗೆ 2 ಸಾವಿರ ರೂಪಾಯಿ ಪೆÇ್ರೀತ್ಸಾಹ ಧನ ಮತ್ತು ಅನ್ನಭಾಗ್ಯ ಯೋಜನೆ ಮೂಲಕ ಬಿಪಿಎಲ್ ಕಾರ್ಡ್ ಹೊಂದಿರುವ ಪ್ರತಿ ಸದಸ್ಯನಿಗೆ 10 ಕೆಜಿ ಅಕ್ಕಿ ಉಚಿತವಾಗಿ ನೀಡಲಾಗುತ್ತದೆ ಎಂದು ಪ್ರಣಾಳಿಕೆಯ ಗ್ಯಾರಂಟಿ ಕಾರ್ಡ್ ಕೊಟ್ಟು ಭರವಸೆ ನೀಡಿದರು. ರಾಜ್ಯದಲ್ಲಿ ಶೇ40ರಷ್ಟು ಕಮಿಷನ್ ಬಿಜೆಪಿ ಸರ್ಕಾರವಿದೆ. ದೇಶದಲ್ಲಿ ಲಂಚಾವತಾರ ಹೆಚ್ಚಾಗಿದೆ. ಇಂದು ಸಾಮಾನ್ಯ ಜನರು ಜೀವನ ಮಾಡಲು ಕಷ್ಟಪಡುವಂತಾಗಿದೆ. ರಾಜ್ಯ ಪ್ರವಾಹದಲ್ಲಿ ತತ್ತರಿಸಿದ್ದಾಗ ಯಾರು ಬಂದು ನೋಡಲಿಲ್ಲ. ಈಗ ಮತ ಪಡೆಯಲು ಮಾತ್ರ ದೆಹಲಿಯಿಂದ ರಾಜ್ಯಕ್ಕೆ ಆಗಾಗ ಬರುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಮುಖಂಡ ಸುರೇಶ ನಾಯಕ ಮಾತನಾಡಿ, ಬಿಜೆಪಿ ಈಗ ದ್ವೇಷದ ರಾಜಕೀಯಕ್ಕೆ ಮುಂದಾಗಿ ಕಾಂಗ್ರೆಸ್ ನಾಯಕರನ್ನು ಮುಗಿಸಿ ಎಂಬಂಥ ಕೀಳು ಹೇಳಿಕೆ ನೀಡುತ್ತಿದೆ. ಬಿಜೆಪಿಯವರದ್ದು ಡಬಲ್ ಇಂಜಿನ್ ಸರಕಾರವಲ್ಲ, ಡಬಲ್ ಕರಪ್ಷನ್ ಸರಕಾರ ಎಂದರು. ಪಕ್ಷದ ಕಾರ್ಯಕರ್ತರು ಗ್ಯಾರಂಟಿ ಕಾರ್ಡ್ ಪ್ರತಿ ಬೂತ್ ನ ಮನೆ ಮನೆಗೂ ನೀಡಬೇಕು. ಈ ಗ್ಯಾರಂಟಿ ಕಾರ್ಡ್ ಅನ್ನು ಜನರಿಗೆ ನೀಡಿ ನಮ್ಮ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಬೇಕು. ಆದ್ದರಿಂದ ಎಲ್ಲರೂ ಒಟ್ಟಾಗಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವಂತೆ ಮಾಡಬೇಕು ಎಂದು ಹೇಳಿದರು.
ಜಿಲ್ಲಾ ವಕ್ತಾರರಾದ ಪೀರ ಪಾಶಾ ಮಾತನಾಡಿ, ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಜನರಿಗೆ ಮೋಸ ಮಾಡುತ್ತಿದೆ. ಧರ್ಮದ ಹೆಸರಿನಲ್ಲಿ ದ್ವೇಷ ಬಿತ್ತುತ್ತಿದೆ.ಗ್ಯಾಸ್ ಮತ್ತು ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಿಂದ ಜನರು ತ್ತರಿಸಿ ಹೋಗಿದ್ದಾರೆ.ಆದ್ದರಿಂದ ಈ ಬಾರಿ ಮೋಸ ಹೋಗದೇ ಜನಪರವಾದ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ಬರುವಂತೆ ಮಾಡಿ ಎಂದರು.
ಈ ಅಭಿಯಾನದಲ್ಲಿ ಯುವ ಘಟಕದ ಅಧ್ಯಕ್ಷ ಕಿರಣ ಚೌಹಾಣ, ಪ್ರಾಧಿಕಾರದ ಮಾಜಿ ಅಧ್ಯಕ್ಷ ಹಾಷಮ ಖಾನ, ಕುಮಾರ ಚೌಹಾಣ, ಅಹ್ಮದ ಪಟೇಲ, ಸಾಹೇಬಗೌಡ ಬೊಗುಂಡಿ, ಬಾಬು ಆಶಪ್ಪಾ, ಮಹೇಬೂಬ, ದಿಲೀಪ ನಾಯಕ, ಅನ್ವರ ಪಾಶಾ, ನರಸಿಂಗ ರಾಠೋಡ, ದೇವರಾಜ ರಾಠೋಡ, ಮೇರಾಜ ಸಾಹೇಬ, ಗೋಪಾಲ ಪವಾರ, ಚಂದರ ನಾಯಕ ಇದ್ದರು.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…