ವೀರಾಪೂರು: ತಾಲೂಕಿನ ನೆರೆ ಪೀಡಿತ ಸಂತ್ರಸ್ತರಿಗಾಗಿ ವೀರಾಪೂರ ಗ್ರಾಮದಲ್ಲಿ ವಿದ್ಯಾರ್ಥಿ-ಯುವಜನರಿಂದ ಆಹಾರ ಧಾನ್ಯ ಸಂಗ್ರಹದಲ್ಲಿ ಮಾಡಲಾಯಿತು.
ತಾಲೂಕಿನ ಕಡದರಗಡ್ಡಿ, ಯಳಗುಂದಿ, ಹಂಚಿನಾಳ, ಯರಗೋಡಿ, ಜಲದುರ್ಗ ಗ್ರಾಮಗಳು ಸೇರಿ ನಾಲ್ಕಾರು ದೊಡ್ಡಿಗಳ ಜನ ಪ್ರವಾಹದ ಪ್ರಹಾರಕ್ಕೆ ಸಿಲುಕಿ ತತ್ತರಿಸಿ ಹೋಗಿದ್ದಾರೆ. ಮನೆಮಠಗಳನ್ನು ಕಳೆದುಕೊಂಡು ಜನರ ಬದುಕು ಬೀದಿಪಾಲಾಗಿದೆ. ಸಂತ್ರಸ್ತರ ನೆರವಿಗೆ ಸಾಕಷ್ಟು ಪ್ರಮಾಣದಲ್ಲಿ ಮಾನವೀಯ ನೆಲೆಗಟ್ಟಿನಲ್ಲಿ ದಾನಿಗಳು ದೇಣಿಗೆ, ದಾನ ನೀಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಜಿಲ್ಲೆಯಾದ್ಯಾಂತ ದೇನಿಗೆ ಸಂಗ್ರಹಿಸುವ ಕಾರ್ಯ ನಡೆದಿದ್ದು, ವೀರಾಪೂರು ಗ್ರಾಮದಿಂದಲ್ಲೂ ಆಹಾರ ಧಾನ್ಯ ಸಂಗ್ರಹಿಸಿ ರವಾನೆ ಮಾಡಲಾಗುತ್ತಿದೆ.
ಗ್ರಾಮದಲ್ಲಿ ಸುಮಾರು 23 ಚೀಲ ದವಸ-ಧಾನ್ಯ ಹಾಗೂ 8 ಸಾವಿರ ಹಣ ಸಂಗ್ರಹವಾಗಿದೆ.
ಈ ಸಂದರ್ಭದಲ್ಲಿ ಎಸ್ಎಫ್ಐ ಜಿಲ್ಲಾ ಕಾರ್ಯದರ್ಶಿ ರಮೇಶ ವೀರಾಪೂರ, ಎಸ್ಎಫ್ಐ ಮುಖಂಡರಾದ ಅಮರೇಗೌಡ, ಅಭಿಷೇಕ್, ಬಸಲಿಂಗ, ಮಹೇಶ್, ಯುವ ಮುಖಂಡರಾದ, ಬಸವರಾಜ್, ಹುಚ್ಚರೆಡ್ಡಿ, ಮಲ್ಲಿಕಾರ್ಜುನ್ ಹಿರೇಮಠ್, ಹನುಮಂತ್ರಾಯ, ಕಳಕಪ್ಪ, ಬಾಷಮಿಯಾ, ಶಿವಪುತ್ರ ಬಸಾಪೂರು, ವೆಂಕಟೇಶ್, ಸಲೀಮ್, ರಮೇಶ್ ಕಪಗಲ್ ಮತ್ತಿತರರು ಉಪಸ್ಥಿತರಿದ್ದರು
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…