ಬಿಸಿ ಬಿಸಿ ಸುದ್ದಿ

ಸುರಪುರ:ಜಿಲ್ಲಾಧಿಕಾರಿಗಳ ಸಭೆಯಲ್ಲಿ ಬಿಎಲ್‍ಓ ಕಿಟ್ ವಿತರಣೆ

ಸುರಪು: ನಗರದ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸುರಪುರ ವಿಧಾನಸಭಾ ಕ್ಷೇತ್ರದ ಎಲ್ಲಾ ಬಿಎಲ್‍ಓಗಳ ಸಭೆಯನ್ನು ನಡೆಸಲಾಯಿತು.

ಸಭೆಯ ಅಧ್ಯಕ್ಷತೆವಹಿಸಿದ್ದ ಜಿಲ್ಲಾಧಿಕಾರಿಗಳಾದ ಸ್ನೇಹಲ್ ಆರ್ ಅವರು ಮಾತನಾಡಿ,ಎಲ್ಲಾ ಮತಗಟ್ಟೆ ವ್ಯಾಪ್ತಿಯಲ್ಲಿನ ಮತದಾರರ ಪಟ್ಟಿಯಲ್ಲಿ ಯಾವುದೇ ಹೆಸರುಗಳು ಬಿಟ್ಟು ಹೋಗದಂತೆ ನೋಡಿಕೊಳ್ಳುವಂತೆ ತಿಳಿಸಿದರು.ಅಲ್ಲದೆ ಮತದಾರರ ಪಟ್ಟಿಯಲ್ಲಿ ಯಾವುದೇ ವಿಐಪಿ ವಿವಿಐಪಿ ಹೆಸರುಗಳು ಇರುವುದನ್ನು ಖಚಿತಪಡಿಸಿಕೊಳ್ಳಿ,ಮತದಾರರ ಪಟ್ಟಿಯಲ್ಲಿನ ಸೇರ್ಪಡೆ ಮತ್ತು ಪರಿಷ್ಕರಣೆಗೆ ಸಂಬಂಧಿಸಿದಂತೆ ನಮೂನೆ-6,ನಮೂನೆ-8ರ ಚೆಕಲಿಸ್ಟ್‍ಗಳನ್ನು ಎರಡು ದಿನಗಳಲ್ಲಿ ಪರಿಶೀಲನೆ ಮಾಡಿ ಚುನಾವಣೆ ಶಾಖೆಗೆ ಸಲ್ಲಿಸುವಂತೆ ತಿಳಿಸಿದರು.

ಮತದಾನ ದಿಂದ ಯಾವೊಬ್ಬ ವ್ಯಕ್ತಿಯೂ ವಂಚಿತರಾಗಬಾರದು ಆನಿಟ್ಟಿನಲ್ಲಿ ಎಲ್ಲರು ಕಾರ್ಯನಿರ್ವಹಿಸುವಂತೆ ತಿಳಿಸಿದರು.ಅಲ್ಲದೆ ಕ್ಷೇತ್ರದಲ್ಲಿನ ಎಲ್ಲಾ ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯಗಳ ಕುರಿತು ಪರಿಶೀಲನೆ ಮಾಡಿ ವರದಿ ನೀಡುವಂತೆ ತಿಳಿಸಿದರು.

ಹೊಸದಾಗಿ ಮತದಾರರ ಪಟ್ಟಿಗೆ ಸೇರ್ಪಡೆಗೊಂಡಿರುವ ಯುವ ಮತದಾರರು ಮತದಾನ ಮಾಡಲು ಮಾಹಿತಿಯನ್ನು ನೀಡುವಂತೆ ತಿಳಿಸಿದರು ಮತ್ತು ಪ್ರತಿ ಮತಗಟ್ಟೆ ವ್ಯಾಪ್ತಿಯಲ್ಲಿನ 80 ವರ್ಷ ಮೇಲ್ಪಟ್ಟ ಮತ್ತು ಪಿಡಬ್ಲ್ಯೂಡಿ ಮತದಾರರ ವಿಳಾಸ ಹಾಗೂ ಇತರೆ ಮಾಹಿತಿಯನ್ನು ಕ್ರೂಢಿಕರಿಸುವಂತೆ ಹಾಗೂ ಯಾವುದೇ ಮತಗಟ್ಟೆ ವ್ಯಾಪ್ತಿಯಲ್ಲಿ ಮತದಾನ ಬಹಿಷ್ಕಾರ ಮಾಡುವುದರ ಕುರಿತು ಮುಂಚೆಯೇ ಮಾಹಿತಿ ಪಡೆದು ಚುನಾವಣಾಧಿಕಾರಿಗಳಿಗೆ ತಿಳಿಸುವಂತೆ ಸೂಚಿಸಿದರು.

ನಂತರ ಎಲ್ಲಾ ಬಿಎಲ್‍ಓಗಳಿಗೆ ಕಿಟ್‍ಗಳನ್ನು ವಿತರಿಸಲಾಯಿತು. ಸಭೆಯಲ್ಲಿ ಸಹಾಯಕ ಆಯುಕ್ತ ಶಾ ಆಲಂ ಹುಸೇನ್,ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ,ತಾಲೂಕು ಪಂಚಾಯಿತಿ ಇಓ ಚಂದ್ರಶೇಖರ ಪವರ್ ಸೇರಿದಂತೆ ಎಲ್ ಬಿಎಲ್‍ಓಗಳು ಭಾಗವಹಿಸಿದ್ದರು.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

41 mins ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

44 mins ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

47 mins ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

2 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

3 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

6 hours ago