ಬಿಸಿ ಬಿಸಿ ಸುದ್ದಿ

ಶ್ರೀ ಹವಾ ಮಲ್ಲಿನಾಥ ಮಾಹಾರಾಜರ ದಿವ್ಯ ನೇತೃತ್ವದಲ್ಲಿ 23 ರಂದು ಪಂಜಾಬ್‍ ಗೆ

ಕಲಬುರಗಿ: ಜೈ ಭಾರತ ಮಾತಾ ಸೇವಾ ಸಮಿತಿ ನವ ದೆಹಲಿ ವತಿಯಿಂದ ಮಾರ್ಚ 23 ರಂದು ಭಾರತ ಪಾಕಿಸ್ತಾನ ಬಾರ್ಡರ್ ಸರ ಹದ್ದಿನಲ್ಲಿರುವ ಶಹೀದ ಭಗತ್ ಸಿಂಗ್ ರವರ ಪುರವಿಕರ್ ಜನ್ಮ ಸ್ಥಳ ವಾದ ಪಂಜಾಬ್ ರಾಜ್ಯದ ಖಠ್ಕರ್ ಕಲಾನ್ ಎಂಬಲ್ಲಿ ವೀರ ಅಮರ ಬಲಿದಾನದ ದಿನಾಚರಣೆ ಆಚರಿಸಲು ಪರಮ ಪೂಜ್ಯ ಸದ್ಗುರು ಶ್ರೀ ಹವಾ ಮಲ್ಲಿನಾಥ ಮಾಹಾರಾಜರ ದಿವ್ಯ ನೇತೃತ್ವದಲ್ಲಿ ಸಹಸ್ರಾರು ದೇಶ ಭಕ್ತರು ಮಾ. 15 ಬುಧುವಾರ ಆಳಂದ ತಾಲೂಕಿನ ಲಾಡ್ ಚಿಂಚೋಳಿ ಹತ್ತಿರದ ಭಾರತ ಮಾತಾ ಮಂದಿರ ದಿಂದ ದೇಶ ಭಕ್ತಿಯಾತ್ರೆಗೆ ಹೊರಡಲಿದ್ದಾರೆ.

ಯಾತ್ರೆ ಪ್ರಾರಂಭದ ಪೂರ್ವದಲ್ಲಿ ಎಲ್ಲಾ ದೇಶ ಭಕ್ತರು ಭಾರತ ಮಾತೆಯ ಮಂದಿರದಲ್ಲಿ ನ ದಿವ್ಯ ಭಾರತ ಮಾತೆಯ ಪ್ರತಿಮೆಗೆ ವಿಶೇಷ ಪೂಜೆ, ಅರ್ಚನೆ ನೆರವೇರಿಸಿ ಭಾರತ ಮಾತೆಗೆ ಜಯಕಾರದ ಘೋಷಣೆ ಗಳನ್ನು ಮೊಳಗಿಸಿ ದೇಶ ಭಕ್ತಿ ಯಾತ್ರೆಯನ್ನು ಪ್ರಾರಂಭಿಸಿದರು.

ಮಾಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ ರಾಜ್ಯಗಳ ವಿವಿಧ ಜಿಲ್ಲೆಗಳಿಂದ ಆಗಮಿಸಿದ ದೇಶ ಭಕ್ತರು ನೂರಾರು ವಾಹನ ಗಳೊಂದಿಗೆ ಈ ದೇಶ ಭಕ್ತಿ ಯಾತ್ರೆಯಲ್ಲಿ ಪಾಲ್ಗೊಂಡಿರುವರು.

ಈ ಯಾತ್ರೆಯು ಕರ್ನಾಟಕ, ಮಾಹಾರಾಷ್ಟ್ರ, ಮಧ್ಯಪ್ರದೇಶ, ರಾಜಸ್ಥಾನ ಹರಿಯಾಣಾ ರಾಜ್ಯಗಳಲ್ಲಿ ಸಂಚರಿಸಿ ಮಾರ್ಚ 22 ರಂದು ಪಂಜಾಬ ರಾಜ್ಯದಲ್ಲಿ ಪ್ರವೇಶ ಮಾಡಲಿರುವುದು.

ನಿಸ್ವಾರ್ಥ ಮನೋಭಾವದಿಂದ ಕೇವಲ ದೇಶ ಭಕ್ತಿ ಯೊಂದನ್ನೇ ಗುರಿಯಾಗಿಸಿಟ್ಟು ಕೊಂಡು ದೇಶದೆಲ್ಲೆಡೆ ದೇಶ ಭಕ್ತಿ ಯ ಸಂದೇಶ ಹೊತ್ತು ಸಾಗುತ್ತಿರುವ ಈ ದೇಶ ಭಕ್ತಿ ಯಾತ್ರೆಯು ಶುಭಕರ ವಾಗಿ ನಿರ್ವಿಘ್ನವಾಗಿ ಸಾಗಲಿ ಎಂದು ನಾವು ನೀವೆಲ್ಲರೂ ತಾಯಿ ಭಾರತತಾಂಬೆಯಲ್ಲಿ ಪ್ರಾರ್ಥಿಸೋಣ ಹಾಗೂ ಈ ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಅಮೂಲ್ಯ ಜೀವದ ತ್ಯಾಗ ಬಲಿದಾನ ನೀಡಿರುವ ಎಲ್ಲಾ ಸ್ವಾತಂತ್ರ್ಯ ವೀರ ಹೋರಾಟಗಾರರನ್ನು ಸಮಸ್ತ ದೇಶವಾಸಿಗಳು ಸದಾ ಅವರನ್ನು ಸ್ಮರಿಸಿ ಗೌರವಿಸದರೊಂದಿಗೆ ಅವರ ತತ್ವ ಸಿದ್ಧಾಂತಗಳನ್ನು ದೇಶದ ಪ್ರತಿಯೊಬ್ಬರ ಮನೆಗಳಿಗೆ ಹಾಗೂ ಅವರ ಮನಗಳಿಗೆ ಮುಟ್ಟಿಸುವಂಥ ಕೆಲಸ ಮಾಡಿ ದೇಶದ ಐಕ್ಯತೆ ನಾವೇಲರು ಕೂಡಿಕೊಂಡು ಕಾಪಡಬೇಕಾಗಿದೆ ಎಂದು ಜೈ ಭಾರತ್ ಮಾತಾ ಸೇವಾ ಸಮಿತಿ ನವದೆಹಲಿಯ ರಾಷ್ಟ್ರೀಯ ವಕ್ತಾರರಾದ ವೈಜನಾಥ ಝಳಕಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

emedialine

Recent Posts

ಕೃಷಿ ವಿಜ್ಞಾನಿ ಡಾ.ಎಸ್.ಎ.ಪಾಟೀಲ್ ಹೃದಯಾಘಾತದಿಂದ ನಿಧನ

ಕಲಬುರಗಿ: ಕೃಷಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳು ಹಾಗೂ ನಾಡಿನ ಶ್ರೇಷ್ಠ ಕೃಷಿ ವಿಜ್ಞಾನಿಗಳಾಗಿದ್ದ ಡಾ.ಎಸ್.ಎ.ಪಾಟೀಲ್ ಬಿರಾಳ (80) ಅವರು ನಿಧನರಾಗಿದ್ದಾರೆ.…

58 mins ago

ಜಲಮೂಲ, ಪರಿಸರ ಸಂರಕ್ಷಣೆಯತ್ತ ಯುವಜನತೆ ಸಕ್ರಿಯರಾಗಲಿ: ಹುಲಿಕುಂಟೆ ಮೂರ್ತಿ

ಬೆಂಗಳೂರು: ಯುವಜನತೆ ನದಿಮೂಲಗಳು ಹಾಗೂ ಪರಿಸರ ಸಂರಕ್ಷಣೆಯ ಅಭಿಯಾನಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಸಾಮಾಜಿಕ ಜವಾಬ್ದಾರಿಯನ್ನು ವಿದ್ಯಾರ್ಥಿ ದೆಸೆಯಲ್ಲಿಯೇ ಮೈಗೂಡಿಸಿಕೊಳ್ಳಬೇಕೆಂದು…

1 hour ago

ಕಲಬುರಗಿ ಜಿಲ್ಲಾ ಗಾಣಿಗ ನೌಕರರ ಸಭೆ 17ಕ್ಕೆ: ಸಂಗನಗೌಡ ಪಾಟೀಲ್‌

ಕಲಬುರಗಿ: ಜಿಲ್ಲಾ ಗಾಣಿಗ ನೌಕರರ ಕಲ್ಯಾಣ ಸಂಘದ ಸದಸ್ಯರ ಸಭೆ ಜು.17ರಂದು ಬೆಳಗ್ಗೆ 10.30ಕ್ಕೆ ಕನ್ನಡ ಭವನದಲ್ಲಿ ನಡೆಯಲಿದ್ದು, ಸಂಘದ…

3 hours ago

371 (ಜೆ) ಸಮರ್ಪಕ ಅನುಷ್ಠಾನಗೊಳಿಸದಿದ್ದರೆ ಮತ್ತೊಮ್ಮೆ ಉಗ್ರ ಹೋರಾಟದ ಎಚ್ಚರಿಕೆ

ಕಲಬುರಗಿ: 371(ಜೆ) ಕಲಂ ಸಮರ್ಪಕ ಅನುಷ್ಠಾನಕ್ಕೆ ಪ್ರತ್ಯೇಕ ಸಚಿವಾಲಯ ಘೋಷಣೆ ಮಾಡಿ ಕಚೇರಿ ಸ್ಥಾಪಿಸಬೇಕು.ಇಲ್ಲದಿದ್ದಲ್ಲಿ ಮತ್ತೊಮ್ಮೆ ಕಲ್ಯಾಣ ಕರ್ನಾಟಕದ ಎಲ್ಲಾ…

4 hours ago

ಆದರ್ಶದ ಬದುಕಿಗೆ ಯಾವೊತ್ತೂ ಬೆಲೆ: ಮಹಾಂತ ಸ್ವಾಮೀಜಿ

ಕಲಬುರಗಿ: ಮನುಷ್ಯ ಆದರ್ಶದ ಬದುಕನ್ನು ಕಳೆದಾಗ ಬೆಲೆಯುಳ್ಳ ಬದುಕಾಗುತ್ತದೆ. ಆಗ ಆ ಬದುಕಿಗೆ ಮೌಲ್ಯ, ಅರ್ಥ ಬರುತ್ತದೆ ಎಂದು ಮುದಗಲ್-…

4 hours ago

ರೈತರ, ವಿದ್ಯಾರ್ಥಿಗಳ ಸಮಸ್ಯ ಪರಿಹಾರಕ್ಕೆ ಒತ್ತಾಯ: ಶರಣಬಸಪ್ಪ ದೊಡ್ಮನಿ

ಕಲಬುರಗಿ : ಬಡವರ ಪರವಾಗಿ ಹಾಗೂ ಶಾಲಾ ಕಾಲೇಜು ವಸತಿ ನಿಲಯಗಳಲ್ಲಿ ಆಗುವ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಹಾಗೂ ಸಮಾಜಕಲ್ಯಾಣ…

17 hours ago