ಹೈದರಾಬಾದ್ ಕರ್ನಾಟಕ

ಮತ ಎಣಿಕೆಗೆ ಸಿದ್ಧತೆ ಜಿಲ್ಲಾಧಿಕಾರಿಗಳಿಂದ ಕೌಟಿಂಗ್ ಕೇಂದ್ರಗಳ ವೀಕ್ಷಣೆ

ಕಲಬುರಗಿ: ಗುಲಬರ್ಗಾ (ಮೀಸಲು) ಲೋಕಸಭಾ ಕ್ಷೇತ್ರ ಹಾಗೂ ೪೨-ಚಿಂಚೋಳಿ (ಪ.ಜಾ. ಮೀಸಲು) ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆಗೆ ಸಂಬಂಧಿಸಿದಂತೆ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ವೆಂಕಟೇಶ್‌ಕುಮಾರ್ ಅವರು ಗುರುವಾರ ಗುಲಬರ್ಗಾ ವಿಶ್ವವಿದ್ಯಾಲಯಕ್ಕೆ ತೆರಳಿ ಮತ ಎಣಿಕಾ ಕಾರ್ಯಗಳ ಪೂರ್ವ ಸಿದ್ಧತೆಗಳ ಪರಿಶೀಲನೆ ನಡೆಸಿದರು.

ಕೌಂಟಿಂಗ್ ಕೇಂದ್ರಗಳಲ್ಲಿ ಟೇಬಲ್ ವ್ಯವಸ್ಥೆ, ಮತ ಎಣಿಕಾ ಕೇಂದ್ರಗಳಿಗೆ ಬ್ರಾಡ್‌ಬ್ಯಾಂಡ್ ನೆಟ್‌ವರ್ಕ್, ಎನ್‌ಐಸಿ ಸಂಪರ್ಕ, ಸಿಸಿಟಿವಿ, ಬ್ಯಾರಿಕೇಡ್ ವ್ಯವಸ್ಥೆ, ಅಧಿಕಾರಿಗಳು, ಅಭ್ಯರ್ಥಿಗಳ ಹಾಗೂ ಕೌಟಿಂಗ್ ಏಜೆಂಟರು ಮತ ಎಣಿಕಾ ಕೇಂದ್ರಕ್ಕೆ ಒಳ ಪ್ರವೇಶಿಸುವ ಪ್ರತ್ಯೇಕ ಮಾರ್ಗ, ಸ್ಟ್ರಾಂಗ್ ರೂಂ ನಿಂದ ಮತ ಎಣಿಕಾ ಕೇಂದ್ರಕ್ಕೆ  ಮತಯಂತ್ರಗಳನ್ನು ತರುವ ವ್ಯವಸ್ಥೆಗಳ ಬಗ್ಗೆ ಕೌಟಿಂಗ್ ಕೇಂದ್ರಗಳ ನಿರ್ಮಾಣದ ಉಸ್ತುವಾರಿ ಕೈಗೊಂಡಿರುವ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಅಮೀನ್ ಮುಖ್ತಾರ್ ಅವರಿಂದ ಇಂಚಿಂಚೂ ಮಾಹಿತಿಯನ್ನು ಪಡೆದರು.

ಪರೀಕ್ಷಾ ವಿಭಾಗದ ಹಾಲ್‌ನಲ್ಲಿ ಚಿತ್ತಾಪುರ. ಕಲಬುರಗಿ ಗ್ರಾಮೀಣ ಹಾಗೂ ಜೇವರ್ಗಿ ವಿಧಾನಸಭಾ ಕ್ಷೇತ್ರ, ಒಳಾಂಗಣ ಕ್ರೀಡಾಂಗಣದಲ್ಲಿ ಕಲಬುರಗಿ ಉತ್ತರ ಮತ್ತು ಗುರುಮಠಕಲ್ ಮತಕ್ಷೇತ್ರ, ಗಣಿತಶಾಸ್ತ್ರ ವಿಭಾಗದದಲ್ಲಿ ಅಫ್ಜಲಪುರ, ಸಸ್ಯಶಾಸ್ತ್ರ ವಿಭಾಗದಲ್ಲಿ ಕಲಬುರಗಿ ದಕ್ಷಿಣ ಮತಕ್ಷೇತ್ರ ಹಾಗೂ ಕನ್ನಡ ಅಧ್ಯಯನ ಕೇಂದ್ರ ಸಭಾಂಗಣ(ನೆಲಮಹಡಿ)ದಲ್ಲಿ ಸೇಡಂ ಕ್ಷೇತ್ರಗಳ ಮತಗಳ ಎಣಿಕೆ ನಡೆಯಲಿದೆ.

ಲೋಕಸಭಾ ಚುನಾವಣೆಯ ಮತಗಳನ್ನು ಆಯಾ ವಿಧಾನಸಭಾವಾರು ಕೌಟಿಂಗ್ ಕೇಂದ್ರ ತೆರೆದು ಎಣಿಕೆ ಮಾಡುತ್ತಿದ್ದು,  ಈಗಾಗಲೇ ಆಯಾ ಕ್ಷೇತ್ರದ ಕೌಟಿಂಗ್ ಕೇಂದ್ರಗಳಿಗೆ ಹೊಂದಿಕೊಂಡಂತೆ ಸ್ಟ್ರಾಂಗ್ ರೂಂಗಳ ಸಿದ್ಧಗೊಳಿಸಲಾಗಿದೆ. ಕೊಠಡಿಗಳಿಗೆ ಕಿಟಕಿ ಮುಂತಾದವುಗಳನ್ನು ಇಟ್ಟಿಗೆಗಳ ಮೂಲಕ ಮುಚ್ಚಿ ಭದ್ರಪಡಿಸಿರುವುದನ್ನು ಖುದ್ದು ವೀಕ್ಷಿಸಿದ ಜಿಲ್ಲಾ ಚುನಾವಣಾಧಿಕಾರಿಗಳು ಆಗಬೇಕಾದ ಕೆಲಸಗಳನ್ನು ತುರ್ತಾಗಿ ಮುಗಿಸುವಂತೆ ಸೂಚಿಸಿದರು.

ಏನೇ ಸಣ್ಣ-ಪುಟ್ಟ ಕೆಲಸಗಳಿದ್ದರೂ ಏಪ್ರಿಲ್ ೨೨ ರೊಳಗೆ ಮುಗಿಸಬೇಕು. ಏಪ್ರಿಲ್ ೨೨ರಂದು ಸಂಜೆ ಮತ ಎಣಿಕಾ ಕೇಂದ್ರಗಳನ್ನು ಪ್ಯಾರಾ ಮಿಲಿಟರಿ ಪಡೆ ವಶಕ್ಕೆ ನೀಡಿದರೆ, ಯಾವುದೇ ಕೆಲಸಗಳ ನಡೆಸಲು ಅವಕಾಶ ಸಿಗುವುದಿಲ್ಲ. ಹಾಗಾಗಿ ಶೀಘ್ರ ಮುಗಿಸಬೇಕು ಎಂದು ಸೂಚಿಸಿದ ಅವರು, ಅಧಿಕಾರಿಗಳು ಪ್ರತಿದಿನ ಬಂದು ಸಿದ್ಧತೆಗಳನ್ನು ಪರಿಶೀಲಿಸಬೇಕು ಎಂದು ಅವರು ಲೋಕೋಪಯೋಗಿ ಇಲಾಖೆ ಇಂಜಿಯರ್‌ಗಳಿಗೆ ತಿಳಿಸಿದರು.

42-ಚಿಂಚೋಳಿ (ಪ.ಜಾ. ಮೀಸಲು) ವಿಧಾನಸಭಾ ಕ್ಷೇತ್ರ: ಚಿಂಚೋಳಿ (ಪ.ಜಾ. ಮೀಸಲು) ವಿಧಾನಸಭಾ ಕ್ಷೇತ್ರದ ಮತದಾನ ಮೇ ೧೯ ರಂದು ನಡೆದು ಅಂದು ಸಂಜೆ ಕನ್ನಡ ಅಧ್ಯಯನ ಕೇಂದ್ರ ಸಭಾಂಗಣದ ಮೊದಲ ಮಹಡಿಯ ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳನ್ನು ತಂದಿಡುವ ವ್ಯವಸ್ಥೆ ಮಾಡಬೇಕು. ಮೇ ೨೩ ರಂದು ಮತಗಳ ಎಣಿಕೆ ನಡೆಯಬೇಕು. ಹಾಗೆಯೇ ಮೇ ೨೩ರಂದೇ ಕನ್ನಡ ಅಧ್ಯಯನ ಕೇಂದ್ರ ಸಭಾಂಗಣದ ನೆಲಮಹಡಿಯಲ್ಲಿ ಲೋಕಸಭಾ ಚುನಾವಣೆಯ ಸೇಡಂ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತಗಳ ಎಣಿಕೆ ನಡೆಯಲಿದೆ. ಹಾಗಾಗಿ ಪ್ರತ್ಯೇಕ ಬ್ಯಾರಿಕೇಡ್ ನಿರ್ಮಿಸುವ ಮೂಲಕ ಸುಗಮ ಮತೆಣಿಕೆಗೆ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್,  ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಸಚಿವ(ಮೌಲ್ಯಮಾಪನ) ಪ್ರೊ.ಡಿ.ಎಂ. ಮದರಿ, ಪ್ರೊಬೇಷನರಿ  ಐಎಎಸ್ ಅಧಿಕಾರಿ  ಸ್ನೇಹಲ್ ಸುಧಾಕರ ಲೋಖಂಡೆ, ಎನ್‌ಐಸಿ ಕೇಂದ್ರದ ಅಧಿಕಾರಿ ಸುಧೀಂದ್ರ ಅವಧಾನಿ, ಲೋಕೋಪಯೋಗಿ ಇಲಾಖೆ ಸಹಾಯಕ ಇಂಜಿನಿಯರ್ ಮಹ್ಮದ್ ಕಲೀಮುದ್ದೀನ್, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ (ವಿದ್ಯುತ್) ಭೀಮರಾವ ಗೋಗಿ, ಬಿಎಸ್‌ಎನ್‌ಎಲ್ ಸಬ್ ಡಿವಿಜನ್ ಇಂಜಿನಿಯರ್  ಎಂ.ಎಸ್. ಮಳಖೇಡ, ಶಿಷ್ಟಾಚಾರ ತಹಸೀಲ್ದಾರ್ ಪ್ರಕಾಶ್ ಚಿಂಚೋಳಿಕರ ಮುಂತಾದವರು ಇದ್ದರು.

emedialine

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

9 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

9 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

9 hours ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

9 hours ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

10 hours ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

10 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420