ಬಾಲ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಜನಜಾಗೃತಿ ವಾಹನಕ್ಕೆ ಚಾಲನೆ

0
10

ಕಲಬುರಗಿ: ರಂದು ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ,  ಸಂಯುಕ್ತಾಶ್ರಯದಲ್ಲಿ  ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ 2016ರ ಕುರಿತು ಸಾರ್ವಜನಿಕರಲ್ಲಿ ಪ್ರಚಾರ ಹಾಗೂ ಅರಿವು ಮೂಡಿಸಲು ಕಲಬುರಗಿ ಜಿಲ್ಲಾದ್ಯಂತ ಹಾಗೂ ಎಲ್ಲಾ  ತಾಲೂಕಾದ್ಯಂತ ಸಂಚಾರಿ ವಾಹನ ಮೂಲಕ ಅರಿವು ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಪ್ರಾದೇಶಿಕ ಉಪಕಾರ್ಮಿಕ ಆಯುಕ್ತರಾದ ವೆಂಕಟೇಶ ಶಿಂಧಿಹಟ್ಟಿ ಚಾಲನೆ ನೀಡಿದರು.

ನಂತರ ಉದ್ಘಾಟನಾ ಮಾಡಿ ಮಾತನಾಡುತ್ತಾ ಬಾಲ್ಯಾವಸ್ಥೆ ಹಾಗೂ ಕಿಶೊರಾವಸ್ಥೆಯ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ  ತಿದ್ದುಪಡಿ 2016 ರನ್ವಯ ಎಲ್ಲಾ ಉದ್ಯೋಗ ಮತ್ತು ಪ್ರಕ್ರಿಯೆಗಳಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದು ಸಂಪೂರ್ಣ ನಿಷೇಧಿಸಿದ್ದು ಹಾಗೂ 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ.

Contact Your\'s Advertisement; 9902492681

ಬಾಲ್ಯಾವಸ್ಥೆ ಹಾಗೂ ಕಿಶೊರಾವಸ್ಥೆ ಕಾರ್ಮಿಕರನ್ನು ನಿಯೋಜಿಸಿಕೊಂಡಲ್ಲಿ ಅಂತಹ ಮೊದಲ ಅಪರಾಧಕ್ಕೆ ಮಾಲೀಕರಿಗೆ 6 ತಿಂಗಳಿಂದ 2ವರ್ಷಗಳ ವರೆಗೆ ಜೈಲು ಶಿಕ್ಷೆ ಅಥವಾ ರೂ. 20,000/- ರಿಂದ 50,000/- ರ ವರೆಗೆ ದಂಡ ಅಥವಾ ಎರಡನ್ನೂ ವಿಧಿಸಲು ಅವಕಾಶವಿರುತ್ತದೆ. ಪೋಷಕರಾಗಿದ್ದಲ್ಲಿ ಲಘು ಶಿಕ್ಷಾ ಪ್ರಾವಧಾನವಿದ್ದು,  ಪುನರಾವರ್ತಿತ ಅಪರಾಧಕ್ಕೆ ರೂ. 10,000/- ಗಳ ದಂಡವನ್ನು ವಿಧಿಸಬೇಕಾಗಿರುತ್ತದೆ. ಗೌರವಾನ್ವಿತ ಭಾರತದ ಸವೋಚ್ಛ ನ್ಯಾಯಾಲಯವು ರೀಟ್ ಅರ್ಜಿ (ಸಿವಿಲ್) ಸಂಖ್ಯೆ 465/1986 ರಲ್ಲಿ ನೀಡಿರುವ ನಿರ್ದೇಶನದ್ವಯ ತಪ್ಪಿತಸ್ಥ ಮಾಲೀಕರುತಾವು ನಿಯೋಜನೆಗೊಂಡ ಪ್ರತಿ ಮಗುವಿಗೆ ರೂ. 20,000/-ಪರಿಹಾರವನ್ನು ಮಕ್ಕಳ ಪುನರ್ವಸತಿಗೆ ರಚಿಸಲಾದ ಕಲ್ಯಾಣ ನಿಧಿಗೆ ಪಾವತಿಸಬೇಕಾಗಿರುತ್ತದೆ.

ಮಕ್ಕಳ ಬಾಲ್ಯವನ್ನು ಉಳಿಸೋಣ, ಅವರ ದುಡಿತ ತಪ್ಪಿಸಿ, ವಿದ್ಯ, ಆರೋಗ್ಯವನ್ನು, ಒದಗಿಸಿ ದೇಶದ ಉನ್ನತಿಗೆ ಶ್ರಮಿಸೋಣ, ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಶಾಲೆಗೆ ಸೇರಿಸಲು ಪೋಷಕರು, ಸಾರ್ವಜನಿಕರು, ಸರ್ಕಾರ ನೇಮಿಸಿದ ವಿವಿಧ 11 ಇಲಾಖೆಯ ನಿರೀಕ್ಷಕರುಗಳು ಕೈಜೋಡಿಸಬೇಕು ಅಂದಾಗ ಮಾತ್ರ ಈ ಒಂದು ಅನಿಷ್ಠ ಪದ್ಧತಿಯನ್ನು ಹೋಗಲಾಡಿಸಲು ಮತ್ತು ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡಲು ಸಾಧ್ಯ. ಈ ನಿಟ್ಟಿನಲ್ಲಿ ಕಲಬುರಗಿ ಜಿಲ್ಲೆಯನ್ನು ಮುಕ್ತ ಜಿಲ್ಲೆಯಾಗಿಸಲು ಪ್ರಯತ್ನ ಮಾಡೋಣು ಎಂದು ಹೇಳಿದರು.

ಕಾರ್ಯಕ್ರದಲ್ಲಿ ಸಹಾಯಕ ಕಾರ್ಮಿಕ ಆಯುಕ್ತರು ಹಾಗೂ ಸದಸ್ಯ ಕಾರ್ಯದರ್ಶಿಗಳಾದ  ಡಾ. ಅವಿನಾಶ ನಾಯ್ಕ ರವರು ಮಾತನಾಡುತ್ತಾ ಮಕ್ಕಳು ರಾಷ್ಟ್ರದ ಸಂಪತ್ತು ಬಾಲ್ಯಾವಸ್ಥೆ ಹಾಗೂ ಕಿಶೊರಾವಸ್ಥೆ ಕಾರ್ಮಿಕ ಪದ್ಧತಿಯು ಮಕ್ಕಳನ್ನು ದೈಹಿಕ, ನೈತಿಕ ಮಾನಸಿಕ ಹಾಗೂ ಆರ್ಥಿಕವಾಗಿ ಶೋಷಣೆಗೆ ಒಳಪಡಿಸಿ ಅವರ ಶಿಕ್ಷಣ ಅವಕಾಶಗಳನ್ನು ತಡೆಗಟ್ಟುತ್ತದೆ. ಕಲಿಯುವ ವಯಸ್ಸಿನಲ್ಲಿ ಮಕ್ಕಳು ಶಿಕ್ಷಣದಿಂದ ದೂರ ಉಳಿದು ದುಡಿಮೆಯಲ್ಲಿ ತೊಡಗಿಸಿಕೊಳ್ಳುವುದು ಅತ್ಯಂತ ಕಳವಳಿಕಾರಿಯಾಗಿದೆ. ಶಿಕ್ಷಣ ವಂಚಿತ ಹಾಗೂ ದುಡಿಮೆಯಲ್ಲಿ ತೊಡಗಿರುವ ಈ ಮಕ್ಕಳನ್ನು ಮುಖ್ಯವಾಹಿನಿಗೆ ಕರೆ ತರಲು ವಿವಿಧ ಇಲಾಖೆಯ ಅಧಿಕಾರಿಗಳು, ಸರ್ಕಾರೇತರ ಸಂಸ್ಥೆಗಳು ಹಾಗೂ ಸಾರ್ವಜನಿಕರು ಸಂಘಟಿತರಾಗಿ ಪ್ರಯತ್ನಿಸಬೇಕಿz್ಬಂದು ಹೇಳಿದರು.

ಸದರಿ ಕಾರ್ಯಕ್ರಮುದಲ್ಲಿ  ರಮೇಶ ಸುಬಂಡ್, ಕಾರ್ಮಿಕ ಅಧಿಕಾರಿಗಳು, ರವೀಂದ್ರಕುಮಾರ ಬಲ್ಲೂರ್, ಕೆ.ಎಸ್. ಪ್ರಸನ್ನ,  ಪರಶುರಾಮ, ಹಿರಿಯ ಕಾರ್ಮಿಕ ನಿರೀಕ್ಷಕರು, ಮತಿ ಕವಿತಾ,  ಶಿವರಾಜ ಪಾಟೀಲ್, ಕಾರ್ಮಿಕ ನಿರೀಕ್ಷಕರು, ಕಾರ್ಮಿಕ ಇಲಾಖೆಯ ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಕೊನೆಯಲ್ಲಿ  ಸಂತೋಷ ಕುಲಕರ್ಣಿ ಯೋಜನಾ ನಿರ್ದೇಶಕರು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಕಲಬುರಗಿ ರವರು ಮಾತನಾಡುತ್ತಾ, ಸದರಿ ಸಂಚಾರಿ ವಾಹನವು ಕಲಬುರಗಿ ಜಿಲ್ಲಾದ್ಯಂತ ಹಾಗೂ ಎಲ್ಲಾ  11 ತಾಲೂಕಾದ್ಯಂತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಾಸಿಸುವ ಸ್ಥಳಗಳಲ್ಲಿ ಸಂಚರಿಸಿ, ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯವಾಹಿನಿ ಶಾಲೆ ಮರಳಿ ಸೇರಿಸುವ ನಿಟ್ಟಿನಲ್ಲಿ ಸಾರ್ವಜಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಸದರಿ ಸಂಚಾರಿ ವಾಹನ ಚಾಲನೆಯನ್ನು ನೀಡಲಾಯಿತು.

ಒಂದು ವೇಳೆ 6 ರಿಂದ 14 ವರ್ಷದೊಳಗಿನ ಮಕ್ಕಳು ಯಾವುದೇ ಉದ್ಯೋಗ ಅಥವಾ ಪ್ರಕಿಯೆಗಳನ್ನು ಹಾಗೂ 18 ವರ್ಷ ವಯಸ್ಸಿನವರೆಗಿನ ಕಿಶೋರರು ಅಪಾಯಕಾರಿ ಉದ್ದಿಮೆಗಳಲ್ಲಿ (ಫ್ಯಾಕ್ಟರಿ, ಮೈನ್ಸ್, ಕೇಮಿಕಲ್ಸ್ ಮತ್ತು ಎಕ್ಸಪ್ಲೋಜಿವ್)  ದುಡಿಯುವುದು  ಕಂಡು ಬಂದಲ್ಲಿ ಚೈಲ್ಡ್ ಲೈನ್ -1098/112 ಅಥವಾ 080-22453549, 08472-256295,  269347,  275278 ಈ ದೂರವಾಣಿಗೆ ಕರೆ ಮಾಡಬಹುದಾಗಿದೆಂದು ತಿಳಿಸಿ, ಸದರಿ ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರನ್ನು ವಂದನಾರ್ಪನೆಯನ್ನು ಸಲ್ಲಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here