ಸಭೆಗೆ ಸದಸ್ಯರು ಯಾಕೆ ಬರುತ್ತಿಲ್ಲ ಎಂದು ಗೊತ್ತಾಗುತ್ತಿಲ್ಲ |ಎರಡನೇ ದಿನವೂ ಬಜೆಟ್ ಮಂಡನೆ ಮುಂದೂಡಿಕೆ

ಸುರಪುರ: ಇಲ್ಲಿಯ ನಗರಸಭೆಗೆ ಆಯ-ವ್ಯಯ(ಬಜೆಟ್) ಮಂಡನೆಗಾಗಿ ಕರೆದಿರುವ ಸಾಮಾನ್ಯ ಸಭೆಗೆ ಎರಡನೇ ದಿನವೂ ಯಾವುದೇ ಸದಸ್ಯರು ಸಭೆಗೆ ಬಾರದೆ ದೂರ ಉಳಿಯುವ ಮೂಲಕ ಸಭೆಗೆ ಗೈರಾಗಿದ್ದಾರೆ.

ಬುಧವಾರ ಮುಂಜಾನೆ 11 ಗಂಟೆಗೆ ನಿಗದಿಯಾಗಿದ್ದ ಸಭೆಗೆ ಆಡಳಿತರೂಢ ಸೇರಿ ವಿರೋಧ ಪಕ್ಷದ ಯಾವುದೇ ಸದಸ್ಯರು ಬಾರದೆ ವಿವಿಧ ಕಾರಣಗಳನ್ನು ನೀಡಿ ಗೈರಾಗಿದ್ದರು,ಇದರಿಂದ ಬಜೆಟ್ ಸಭೆಯನ್ನು ಗುರುವಾರಕ್ಕೆ ಮುಂದೂಡಲಾಗಿತ್ತು.ಆದರೆ ಗುರುವಾರ 11 ಗಂಟೆಗೆ ಅಧ್ಯಕ್ಷೆ ಸುಜಾತಾ ವೇಣುಗೋಪಾಲ ನಾಯಕ ಜೇವರ್ಗಿಯವರು ಆಗಮಿಸಿದರು,ಆದರೆ ಅಧ್ಯಕ್ಷರನ್ನು ಹೊರತು ಪಡಿಸಿ ಇನ್ನುಳಿದ ಆಡಳಿತ ಮತ್ತು ವಿರೋಧ ಪಕ್ಷದ 30 ಜನ ಸದಸ್ಯರಲ್ಲಿ ಯಾರೊಬ್ಬರು ನಗರಸಭೆಯತ್ತ ಸುಳಿಯಲಿಲ್ಲ.

ಇದರ ಕುರಿತು ವರದಿಗಾರರು ಕೇಳಿದ ಸ್ಪಷ್ಟನೆಗೆ ವಿವಿರಣೆ ನೀಡಿದ ಅಧ್ಯಕ್ಷರು,ನಿನ್ನೆಯ ದಿನ ಮದುವೆ,ಸಾವು ಸೇರಿದಂತೆ ಅನೇಕ ಕಾರಣಗಳಿಂದ ಸದಸ್ಯರು ಬಂದಿರಲಿಲ್ಲ,ಆದರೆ ಇಂದು ಯಾವೊಬ್ಬ ಸದಸ್ಯರು ಬಂದಿಲ್ಲ,ಯಾಕೆ ಎಂದು ತಿಳಿಯುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.ಇದರ ಕುರಿತು ನಗರಸಭೆಗೆ ಪೌರಾಯುಕ್ತರು ಮಾಹಿತಿಯನ್ನು ಪಡೆಯುತ್ತಿದ್ದಾರೆ ಎಂದರು.

ಇದರ ಮದ್ಯೆ ಇನ್ನೇನು ಕೆಲವೇ ದಿನಗಳಲ್ಲಿ ವಿಧಾನಸಭಾ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದ್ದು,ನಂತರ ಚುನಾವಣಾ ನೀತಿ ಸಂಹಿತೆ ಜಾರಿಯಾಗುವ ಸಾಧ್ಯತೆ ಇದ್ದು,ಇಂತಹ ಸಂದರ್ಭದಲ್ಲಿ ನಗರಸಭೆಯ ಸದಸ್ಯರು ಬಜೆಟ್ ಸಭೆಯಿಂದ ದೂರ ಉಳಿಯುವ ಮೂಲಕ ನಗರದ ಅಭಿವೃಧ್ಧಿಗೆ ನಿರ್ಲಕ್ಷ್ಯ ತೋರುತ್ತಿದ್ದಾರೆ.

ಸಭೆಯಲ್ಲಿ ಭಾಗವಹಿಸಿ ತಮ್ಮ ಏನೆ ಅಭಿಪ್ರಾಯವಿದ್ದಲ್ಲಿ ತಿಳಿಸಬೇಕು,ಆದರೆ ಸಭೆಯಿಂದ ದೂರ ಉಳಿದಲ್ಲಿ ಚುನಾವಣೆ ನೀತಿ ಸಂಹಿತೆ ಏನಾದರು ಜಾರಿಗೊಂಡು ಬಜೆಟ್ ಮಂಡನೆಯಾಗದಿದ್ದಲ್ಲಿ ನಗರದ ಅಭಿವೃಧ್ಧಿ ಕಾರ್ಯಗಳಿಗೆ ಹಿನ್ನಡೆಯಾಗಲಿದೆ,ಅದರ ಕಳಂಕ ನಗರಸಭೆ ಸದಸ್ಯರಿಗೆ ತಗುಲಲಿದೆ ಎಂದು ನಗರದ ಅನೇಕ ಜನರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

7 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

9 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

9 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

9 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

9 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

9 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420