ಉರಿಗೌಡ ನಂಜೇಗೌಡ ಸಿನಿಮಾ; ಸಚಿವ ಮುನಿರತ್ನ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ

ಸಿಟಿ ರವಿ ಕಥೆ ಬರೆದರೆ, ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ ಚಿತ್ರಕಥೆ ಬರೆಯುತ್ತಾರೆಯೇ ಎಂದು ಕಿಡಿ

ಬೆಂಗಳೂರು: ಸಚಿವ ಮುನಿರತ್ನ ಅವರು ಉರಿಗೌಡ, ನಂಜೇಗೌಡ ಸಿನಿಮಾ ಮಾಡಿದರೆ ಸಿಟಿ ರವಿ ಕಥೆ ಬರೆದರೆ, ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ ಚಿತ್ರಕಥೆ ಬರೆಯುತ್ತಾರೆಯೇ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಉರಿಗೌಡ ನಂಜೇಗೌಡ ಹೆಸರಿನಲ್ಲಿ ಸಿನಿಮಾ ಮಾಡಲು ತಮ್ಮ ವೃಷಬಾದ್ರಿ ಪ್ರೊಡಕ್ಷನ್ಸ್ ಬ್ಯಾನರ್ ನಡಿಯಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಹೆಸರು ನೋಂದಾವಣಿ ಮಾಡಿರುವ ಸಚಿವ ಮುನಿರತ್ನ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಲ್ಲದೆ, ಒಕ್ಕಲಿಗರ ಮೇಲೆ ಬಿಜೆಪಿ ವಕ್ರದೃಷ್ಟಿ ಹಾಗೂ ಕುಲಕ್ಕೂ ಅಪಮಾನ ಕುಲ ಗುರುವಿಗೂ ಅಪಮಾನ ಎಂದು ಹ್ಯಾಷ್ ಟ್ಯಾಗ್ ಮಾಡಿ ಬಿಜೆಪಿ ಹಾಗೂ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಲ್ಪಿತಕಥೆ, ಸುಳ್ಳುಗಳಿಂದಲೇ ಜನರ ಮನಸ್ಸಿನಲ್ಲಿ ವಿಷಬೀಜ ಬಿತ್ತಿ ಕರ್ನಾಟಕವನ್ನು ಅಲ್ಲೋಲಕಲ್ಲೋಲ ಮಾಡುತ್ತಿರುವ ಬಿಜೆಪಿ ವಕ್ರದೃಷ್ಟಿ ಸದ್ಯಕ್ಕೆ ಒಕ್ಕಲಿಗರ ಮೇಲೆ ಬಿದ್ದಿದೆ.ಸ್ವಾಭಿಮಾನಿ ಒಕ್ಕಲಿಗರನ್ನು ಹೇಗಾದರೂ ಹಳ್ಳ ಹಿಡಿಸಲೆಬೇಕೆಂಬ ಹಿಡೆನ್‌ ಅಜೆಂಡಾ ಬಿಜೆಪಿಗೆಇರುವುದಂತೂ ಸತ್ಯ. ಕುಲಕ್ಕೆ, ಕುಲ ಗುರುವಿಗಾದ ಈ ಘೋರ ಅಪಮಾನದಿಂದ ಕುದಿಯುತ್ತಿರುವ ಒಕ್ಕಲಿಗ ಸಮಾಜವನ್ನು ಇನ್ನಷ್ಟು ಹೀನಾಯವಾಗಿ ಕಳಂಕದ ಕೂಪಕ್ಕೆ ತಳ್ಳಲು ಇದೇ ಬಿಜೆಪಿ ಸರಕಾರದ ಸಚಿವರೊಬ್ಬರು ಧೂರ್ತ ಪ್ರಯತ್ನ ನಡೆಸಿದ್ದಾರೆ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.

ಸಚಿವರು, ವೃತ್ತಿಯಲ್ಲಿ ಚಿತ್ರ ನಿರ್ಮಾಪಕರಾದ ಶ್ರೀ ಮುನಿರತ್ನ ಅವರು ತಮ್ಮ ವೃಷಭಾದ್ರಿ ಪ್ರೊಡಕ್ಷನ್ಸ್‌ ಮೂಲಕ ‘ ಉರಿಗೌಡ ನಂಜೇಗೌಡ ‘ ಹೆಸರನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನೋಂದಾಯಿಸಿ ಸಿನಿಮಾ ಮಾಡಲು ಹೊರಟಿದ್ದಾರೆ. ಈ ಮೂಲಕ ಒಕ್ಕಲಿಗರ ಗೌರವವನ್ನು ಬೆಳ್ಳಿತೆರೆಯ ಮೇಲೆಯೂ ಮೂರಾಬಟ್ಟೆ ಮಾಡಲು ಸಂಚು ರೂಪಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಕುದಿಯುತ್ತಿರುವ ಒಕ್ಕಲಿಗರ ನೋವಿನ ಮೇಲೆ ಮಾರಣಾಂತಿಕ ಬರೆ ಎಳೆಯುವಂತಿದೆ ಮುನಿರತ್ನರ ಈ ದುರಹಂಕಾರ. ರಾಜ್ಯ ಬಿಜೆಪಿ ಸೃಷ್ಟಿಸಿದ ಕಿರಾತಕ ಸುಳ್ಳನ್ನೇ ಸಿನಿಮಾ ಮಾಡಿ ಒಕ್ಕಲಿಗರನ್ನು ಇತಿಹಾಸದಲ್ಲಿ ಶಾಶ್ವತವಾಗಿ ಖಳನಾಯಕರನ್ನಾಗಿ ಚಿತ್ರಿಸುವುದೇ ಅವರ ದುರುದ್ದೇಶವಾಗಿದೆ. ಈ ದ್ರೋಹವನ್ನು ಒಕ್ಕಲಿಗರು ಸಹಿಸುವ ಪ್ರಶ್ನೆಯೇ ಇಲ್ಲ. ಚರಿತ್ರೆಯನ್ನು ವಿರೂಪಗೊಳಿಸುವ ನಿರ್ಲಜ್ಜ ರಾಜಕಾರಣಕ್ಕೆ ಮೂಲಕಾರಣರು ಯಾರು? ಇಷ್ಟಕ್ಕೂ, ಈ ಮುನಿರತ್ನಗೂ ಮಂಡ್ಯದ ಒಕ್ಕಲಿಗರಿಗೂ ಸಂಬಂಧವೇನು? ಒಕ್ಕಲಿಗ ಕುಲದಲ್ಲೇ ಹುಟ್ಟಿ ಒಕ್ಕಲು ಸಂಕುಲಕ್ಕೆ ಟಿಪ್ಪು ಕೊಲೆಯ ಕೊಳೆ ಮೆತ್ತಿಸಲು ಹೊರಟಿರುವ ಒಕ್ಕಲು ಕುಲದ ಇಬ್ಬರು ನಿಜವಾದ ಖಳನಾಯಕರನ್ನು ಒಕ್ಕಲಿಗರೆಂದೂ ಕ್ಷಮಿಸರು ಎಂದು ಕುಮಾರಸ್ವಾಮಿ ಅವರು ಎಚ್ಚರಿಕೆ ನೀಡಿದ್ದಾರೆ.

ಕಥೆ, ಚಿತ್ರಕಥೆ ಬರೆಯುತ್ತಾರ?: ಮುನಿರತ್ನ ಮಾಡುವ ಸಿನಿಮಾಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ ಸಿ.ಟಿ.ರವಿ ಕಥೆ ಬರೆಯುತ್ತಾರಾ? ಟಿಪ್ಪು ನೆಪದಲ್ಲಿ ಜನ್ಮತೆಳೆದ ಜಾತಿ ವಿರುದ್ಧವೇ ವಿಷ ಕಕ್ಕುತ್ತಿರುವ, ಬಿಜೆಪಿಯನ್ನು ಎತ್ತಿ ಕಟ್ಟುತ್ತಿರುವ ಸಿ.ಟಿ.ರವಿ ಅವರು ಉರಿಗೌಡ, ನಂಜೇಗೌಡರೆಂಬ ಕಲ್ಪಿತ ಹೆಸರುಗಳ ನೆಪದಲ್ಲಿ ದಿನವೂ ವಿಷ ಕಕ್ಕುತ್ತಿದ್ದಾರೆ ಎಂದು ಗುಡುಗಿದ್ದಾರೆ.

ವಿಜ್ಞಾನ, ತಂತ್ರಜ್ಞಾನ, ಆವಿಷ್ಕಾರ ಎಂದು ಸದಾ ಬಡಬಡಿಸುತ್ತಿದ್ದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರಂತೂ ಈಗ ಉರಿಗೌಡ, ನಂಜೇಗೌಡ ಎಂದು ವಿಷನಂಜು ಉಗಳುತ್ತಿದ್ದಾರೆ. ಅವರು ಈ ಸಿನಿಮಾಕ್ಕೆ ಚಿತ್ರಕಥೆ ಬರೆಯುತ್ತಾರಾಯೇ? ಬರೆದರೂ ಬರೆಯಬಹುದು.ಏಕೆಂದರೆ, ಇವರಿಬ್ಬರೂ ಕುಲದ್ರೋಹಿಗಳಷ್ಟೇ ಅಲ್ಲ, ಒಕ್ಕಲು ಸಂಕುಲದ ವಿನಾಶಕರು ಎಂದು ತಮ್ಮ ಟ್ವೀಟ್ ನಲ್ಲಿ ಬರೆದಿದ್ದಾರೆ.

ಬಿಜೆಪಿಗೆ ವಿನಾಶಕಾಲೇ ವಿಪರೀತ ಬುದ್ಧಿ: ವಿನಾಶಕಾಲೇ ವಿಪರೀತ ಬುದ್ಧಿ ಎನ್ನುವಂತಿದೆ ಬಿಜೆಪಿ ಸ್ಥಿತಿ. ಪ್ರತೀ ಸೂಕ್ಷ್ಮ ವಿಷಯದಲ್ಲೂ ಮತ ರಾಜಕಾರಣ ಮಾಡುವ ಕಮಲ ಪಕ್ಷಕ್ಕೆ ಕರ್ನಾಟಕವೇ ಪ್ರಯೋಗ ಶಾಲೆ. ಜಾತಿ, ಧರ್ಮಗಳ ನಡುವೆ ಕಿಚ್ಚಿಟ್ಟು, ಸರ್ವಜನಾಂಗದ ತೋಟವಾದ ಕರ್ನಾಟಕಕ್ಕೆ ಕೋಮುಪ್ರಾಷನ ಮಾಡಿಸುತ್ತಿದೆ ಬಿಜೆಪಿ. ಉರಿಗೌಡ, ನಂಜೇಗೌಡ ಎಂಬ ಕಲ್ಪಿತ ಒಕ್ಕಲಿಗ ಹೆಸರುಗಳ ಸೃಷ್ಟಿ, ಸಿನಿಮಾ ಮಾಡುವ ದುರುಳ ಐಡಿಯಾ, ಒಕ್ಕಲಿಗರ ಮೇಲೆ ರಾಷ್ಟ್ರ ಬಿಜೆಪಿ, ರಾಜ್ಯ ಬಿಜೆಪಿ ಬೀರುತ್ತಿರುವ ವಕ್ರದೃಷ್ಟಿ. ಇದೆಲ್ಲವೂ ಒಕ್ಕಲಿಗರನ್ನು ರಾಜಕೀಯವಾಗಿ ಮುಗಿಸಿಬಿಡುವ ಬಿಜೆಪಿ ರಕ್ಕಸ ಹಿಡೆನ್ ಅಜೆಂಡಾ ಅಲ್ಲದೆ ಮತ್ತೇನೂ ಅಲ್ಲ ಎಂದು ಅವರು ಹೇಳಿದ್ದಾರೆ.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

7 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

9 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

9 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

9 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

9 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

9 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420