ಬಿಸಿ ಬಿಸಿ ಸುದ್ದಿ

“ಕೌನ ಬನೇಗಾ ಜ್ಞಾನಪತಿ” ಸ್ಪರ್ಧಾರ್ಥಿಗಳಿಗೆ ಸ್ಪೂರ್ತಿ ಕಾರ್ಯಕ್ರಮ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಅಧ್ಯಯನ ಮಾಡುತ್ತಿರುವವರಿಗೆ, ಪ್ರಜ್ಞಾ ದಿ ಇನ್ಸ್ಟ್ಯೂಟ್ ಆಫ್ ಇನ್ನೋವೇಟೀವ್ ಲರ್ನಿಂಗ್ ವಿಶಿಷ್ಠ ವಿಭಿನ್ನ ರೀತಿಯಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತ್ಯಂತ ಅದ್ಭುತವಾದ ಕೆಲಸವನ್ನು ಮಾಡುತ್ತಿದೆ. “ಕೌನ ಬನೇಗಾ ಜ್ಞಾನಪತಿ” ಕಾರ್ಯಕ್ರಮ ಸ್ಪಧಾರ್ಥಿಗಳಿಗೆ ಸ್ಪೂರ್ತಿ ನೀಡುವ ಕಾರ್ಯಕ್ರಮ. ಇದರಲ್ಲಿ ಸ್ಪರ್ಧಾರ್ಥಿಗಳಿಗೆ ಪ್ರೇರಣೆ ಮತ್ತು ಪ್ರೋತ್ಸಾಹ ನೀಡುವ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು, ಅಪಾರವಾದ ಜ್ಞಾನ ಕೊಡಲಾಗುತ್ತಿದೆ. ಇವರ ಜೊತೆಗೆ ಕನ್ನಡ ರತ್ನ ಡಿ ಕರಿಯರ್ ಕಲಬುರಗಿ ಜಿಲ್ಲೆಯಲ್ಲಿ ಉಚಿತ ತರಗತಿಗಳನ್ನು ನಡೆಸುವ ಮೂಲಕ ಅನೇಕ ಬಡ ಕುಟುಂಬದ ಸ್ಪರ್ಧಾರ್ಥಿಗಳ ಬಾಳು ಬೆಳಗುವಲ್ಲಿ ನೆರವಾಗುತ್ತದೆ ಎಂದು ಅಕಾಡೆಮಿ ನಿರ್ದೇಶಕ ಢಾಕಪ್ಪ ಎಂ. ರಾಠೋಡ್ ಅಭಿಪ್ರಾಯ ವ್ಯಕ್ತಪಡಿಸಿದರು.

ಅವರು ಶನಿವಾರ ನಗರದ ಕನ್ನಡ ರತ್ನ ಡಿ ಕರಿಯರ್ ಅಕಾಡೆಮಿ ಹಾಗೂ ಪ್ರಜ್ಞಾ ದಿ ಇನ್ಸ್ ಟ್ಯೂಟ್ ಆಫ್ ಇನ್ನೋವೇಟೀವ್ ಲರ್ನಿಂಗ್ ವತಿಯಿಂದ ಆಯೋಜಿಸಿದ್ದ “ಕೌನ ಬನೇಗಾ ಜ್ಞಾನಪತಿ” ವಿಭಿನ್ನ ರಸಪ್ರಶ್ನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಪ್ರಜ್ಞಾ ಸಂಸ್ಥೆಯ ನಿರ್ದೇಶಕ ಶಿಕ್ಷಣ ತಜ್ಞ ಕೆ.ಎಂ.ವಿಶ್ವನಾಥ ಮರತೂರ ಇವರು ಕರ್ನಾಟಕದ ಸ್ಪಾರ್ಧಾತ್ಮಕ ಲೋಕದಲ್ಲಿ ಇದೊಂದು ವಿಭಿನ್ನ ವಿಶಿಷ್ಠ ಪ್ರಯತ್ನವಾಗಿದ್ದು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗುತ್ತಿರುವರಿಗೆ ಪ್ರೋತ್ಸಾಹಿಸುವ ಕಾರ್ಯಕ್ರಮವಿದು. ಒಟ್ಟು ಕರ್ನಾಟಕವನ್ನು ಗಮನಿಸಿದಾಗ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸುವವರ ಸಂಖ್ಯೆ ಕಲ್ಯಾಣ ಕರ್ನಾಟಕದಲ್ಲಿ ಕಡಿಮೆಯಂದು ಕಾಣಬರುತ್ತದೆ. ದೇಶದ ಉನ್ನತ ಹುದ್ದೆಗಳಲ್ಲಿಯೂ ನಮ್ಮ ಪಾಲು ಗಣನೀಯವಾಗಿಲ್ಲ,

ಕಲ್ಯಾಣ ಕರ್ನಾಟಕ ಭಾಗದಲ್ಲಿ ವಿದ್ಯಾವಂತರ ಸಂಖ್ಯೆ ಹೆಚ್ಚಿದೆ ವಿದ್ಯೆಗೆ ಸರಿಸಮಾನವಾದ ಸರಕಾರಿ ಹುದ್ದೆ ಪಡೆಯಲು ಬೇಕಾದ ಸ್ಪರ್ಧಾ ಮನೋಭಾವ ಮತ್ತು ಅಧ್ಯಯನದ ಕೊರತೆ ಎದ್ದು ಕಾಣುತ್ತದೆ. ನಮ್ಮಂತಹ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಮಾಹಿತಿಯಿದೆ ಆದರೆ ಸ್ಪೂರ್ತಿ ಮತ್ತು ಪ್ರೋತ್ಸಾಹದ ಕೊರತೆ ಕಾಣುತ್ತದೆ. ಶಿಕ್ಷಣ ಪ್ರೇಮಿಗಳು ಧನಾತ್ಮಕ ಮನಸ್ಸು ಮಾಡಿ ಈ ಭಾಗದ ಸ್ಪಧಾರ್ಥಿಗಳಿಗೆ ಪ್ರೋತ್ಸಾಹಿಸುವಲ್ಲಿ ಅವರ ಶೈಕ್ಷಣಿಕ ಮಟ್ಟ ಸುಧಾರಣೆಯಲ್ಲಿ ಕೈಜೋಡಿಸಬೇಕಾದ ಅತ್ಯಂತ ಅಗತ್ಯವಿದೆ.

ಹೀಗಾಗಿ ಈ ಸ್ಪರ್ಧಾತ್ಮಕ ಯುಗಕ್ಕೆ ನಮ್ಮ ಯುವಕರನ್ನು ಬೆಳೆಸುವ ನಿಟ್ಟಿನಲ್ಲಿ ಈ ಕೌನ ಬನೆಗಾ ಜ್ಞಾನಪತಿ ಸ್ಪರ್ಧೆ ಹಮ್ಮಿಕೊಳ್ಳಲಾಗುತ್ತಿದೆ. ನಾವೆಲ್ಲರೂ ಸರಿಯಾದ ಸಮಯದಿ, ಸರಿಯಾದ ವಯೋಮಾನದಿ ಮತ್ತು ಸರಿಯಾದ ಕ್ರಮದಲ್ಲಿ ಬದುಕು ಯಶಸ್ಸಿನತ್ತ ಕೊಂಡಯ್ಯೂಬೇಕಿದೆ. ಯಶಸ್ಸಿನ ಹಾದಿಯಲ್ಲಿ ಅವಕಾಶಗಳೆಂಬ ಹೂವುಗಳಿರುತ್ತವೆ. ನಮ್ಮ ಧನಾತ್ಮಕ ಒಳದೃಷ್ಠಿಯ ಮೂಲಕ ಹೆಜ್ಜೆಗಳು ಇಟ್ಟರೆ ಯಶಸ್ಸು ನಮ್ಮದಾಗುತ್ತದೆ ಎಂದು ರಸಪ್ರಶ್ನೆಯ ಪ್ರಶ್ನೋತ್ತರಗಳ ಮೂಲಕ ಸ್ಪಧಾರ್ಥಿಗಳಿಗೆ ಪ್ರೋತ್ಸಾಹಕ ಮಾತುಗಳನ್ನು ಆಡಿದರು.

ಅತ್ಯಂತ ಅದ್ಭುತವಾದ ಮನೋರಂಜನೆ ಹಾಗೂ ಜ್ಞಾನ ಕೊಡುತ್ತಾ ರಸಪ್ರಶ್ನೆ ಕಾರ್ಯಕ್ರಮ ನಡೆಸಲಾಯಿತು. ಈ ರಸಪ್ರಶ್ನೆಯಲ್ಲಿ ಮಲ್ಲಮ್ಮ ಪ್ರಥಮ ಸ್ಥಾನ, ವಿಶ್ವರಾಜ್ ದ್ವೀತಿಯ ಸ್ಥಾನ, ಸಿದ್ಧಲಿಂಗ ತೃತೀಯ ಸ್ಥಾನ ಕಾಶೀಬಾಯಿ ಮೆಚ್ಚುಗೆ ಬಹುಮಾನ ಪಡೆದರು.

ಈ ಕಾರ್ಯಕ್ರಮದಲ್ಲಿ 60ಕ್ಕೂ ಹೆಚ್ಚು ಸ್ಪರ್ಧಾರ್ಥಿಗಳು ಭಾಗವಹಿಸಿದ್ದರು. ಸಂಸ್ಥೆಯ ಗೌರವ ಸಲಹೆಗಾರರಾದ ಗೌತಮ್ ಕರಿಕಲ್ ಹಾಜರಿದ್ದರು. ಉಪನ್ಯಾಸಕರಾದ ಪ್ರಭಾಕರ್ ಖೊಂಬಿನ್, ಪಂಡಿತ್ ಬಿ.ಕೆ, ಯಲ್ಲಾಲಿಂಗ, ಗುಜ್ಜಮ್ಮ, ಭೀಮಾಶಂಕರ ಅವರು ಕಾರ್ಯಕ್ರಮದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದರು. ಉಪನ್ಯಾಸಕರಾದ ವೆಂಕಟೇಶ್ವರಿ ಸ್ವಾಗತಿಸಿ ನಿರೂಪಿಸಿ ವಂದಿಸಿದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

6 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

6 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

8 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

8 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

8 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

9 hours ago