ಶಾಸ್ವತ ಕುಡಿಯುವ ನೀರಿನ ಬೇಡಿಕೆ ಬೇಗ ಈಡೇರಿದ್ದು ಹೆಮ್ಮೆಯ ಸಂಗತಿ; ಸಚಿವ ಬಸವರಾಜ

ಸುರಪುರ:ನಗರದ ವೀರಶೈವ ಕಲ್ಯಾಣ ಮಂಟಪ ಆವರಣದಲ್ಲಿ ಸುರಪುರ ನಗರಕ್ಕೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ನಗರಕ್ಕೆ ಮತ್ತು 3 ಹಳ್ಳಗಿಳಿಗೆ 2 ನೇ ಹಂತದ ಕುಡಿಯುವ ನೀರು ಸರಬರಾಜು ಕಾಮಗಾರಿ ಉದ್ಘಾಟನಾ ಹಾಗೂ ಕೃಷ್ಣಭಾಗ್ಯ ಜಲ ನಿಗಮದ 2022-23 ನೇ ಸಾಲಿನ ಅನುದಾನದಲ್ಲಿ ದೇವತ್ಕಲ್, ತಳ್ಳಳ್ಳಿ ಮತ್ತು ಏದಲಭಾವಿ ಏತನೀರಾವರಿ ಹಾಗೂ ಬೈರಿಮಡ್ಡಿ ಕೆರೆಯಿಂದ ಫೀಡರ್ ಕಾಲುವೆ ಮುಖಾಂತರ ರೈತರ ಜಮೀನುಗಳಿಗೆ ನೀರು ಹರಿಸುವ ಕಾಮಗಾರಿಗಳಿಗೆ ಹಾಗೂ ನಗರದಲ್ಲಿ ಪತ್ರಿಕಾ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ಕಾರ್ಯಕ್ರಮವನ್ನು ನಡೆಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿದ ನಗರಾಭಿವೃಧ್ಧಿ ಸಚಿವ ಬೈರತಿ ಬಸವರಾಜ ಮಾತನಾಡಿ,ದಾಹ ಮುಕ್ತ ಕರ್ನಾಟಕ ಮಾಡುವುದೇ ಸರ್ಕಾರ ಸಂಕಲ್ಪವಾಗಿದ್ದು, ಸುರಪುರದಲ್ಲಿ ನದಿ ಮೂಲದಿಂದ ಶುದ್ದ ಕುಡಿಯುವ ನೀರು ತರುವ ಕೆಲಸ ಮಾಡಿ, ಶಾಶ್ವತ ಕುಡಿಯುವ ನೀರಿನ ಬೇಡಿಕೆ ಈಡೇರಿದ್ದು ಹೆಮ್ಮೆಯ ಸಂಗತಿ, ಉದ್ಘಾಟಿಸಿ ಅವರು ಮಾತನಾಡಿದರು.

ಎಲ್ಲ ಮೂಲ ಸೌಕರ್ಯಗಳಿಗಿಂತ ಕುಡಿಯುವ ನೀರು ಹೆಚ್ಚು ಅವಶ್ಯಕ ದಿನದ 24 ಗಂಟೆಯೂ ಪ್ರತಿ ಮನೆಗೆ ಶುದ್ಧ ಕುಡಿಯುವ ನೀರು ನಲ್ಲಿಯಲ್ಲಿ ಬರುವಂತೆ ಮಾಡಿದ್ದು ಮಾದರಿ ಕೆಲಸವಾಗಿದೆ. ಕುಡಿಯುವ ನೀರಿನ ಯೋಜನೆಯು ಎಲ್ಲಾ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ನೀರಿನ ದಾಹ ನೀಗಿಸಲು ಹೊಸಹೊಸ ಯೋಜನೆ ಮಾಡಲಾಗಿದೆ. ಕುಡಿಯುವ ನೀರಿನ ಅಭಾವ ಆಗಬಾರದೆಂದು ಕಲ್ಯಾಣ ಕರ್ನಾಟಕ ಭಾಗಕ್ಕೆ 2700 ಕೋಟಿ ರೂಗಳನ್ನು ಮೀಸಲಿಡಲಾಗಿದೆ. ಪ್ರಧಾನ ಮಂತ್ರಿಯವರು ಅಮೃತ ಯೋಜನೆಯಡಿಯಲ್ಲಿ 4500 ಕೋಟಿ ರೂಗಳನ್ನು ರಾಜ್ಯಕ್ಕೆ ನೀಡಿದ್ದಾರೆ ಎಂದು ಅವರು ನುಡಿದರು.

ನೀರಾವರಿ ಇಲಾಖೆಯಿಂದ 53 ಸಾವಿರ ಎಕರೆಗೆ ನೀರನ್ನು ಒದಗಿಸುವ ಕೆಲಸ ಮಾಡಲಾಗಿದೆ ಎಂದು ಸಚಿವರು ನುಡಿದರು.

*ಶಾಸಕ ನರಸಿಂಹ ನಾಯಕ (ರಾಜುಗೌಡ) ಮಾತನಾಡಿ,* ನಗರಸಭೆ ವ್ಯಾಪ್ತಿಯಲ್ಲಿ ಬರುವ 31 ವಾರ್ಡ್ ಗಳ 11 ಸಾವಿರ ಮನೆಗಳಿಗೆ ಅತೀ ಶುದ್ದ ಕುಡಿಯುವ ನೀರಿನ ಸೌಲಭ್ಯ ಒದಗಿಸಲಾಗಿದೆ. ದಿನದ 24 ಗಂಟೆಯೂ ನೀರು ಒದಗಿಸುವ ಅದ್ಬುತ ಯೋಜನೆ ಇದಾಗಿದೆ. ಕೃಷ್ಣಾ ನದಿಯಿಂದ ನೀರು ತರುವ ಮಧ್ಯದ ಹಳ್ಳಿಗಳಾದ ದೇವಾಪುರ, ಕವಡಿಮಟ್ಟಿ ಮತ್ತು ಎಸ್.ಹೆಚ್ ಖಾನಾಪುರ ಗ್ರಾಮಗಳಿಗೆ ಸರಬರಾಜು ಮಾಡಲು ಯೋಜನೆ ರೂಪಿಸಲಾಗಿದೆ ಒಟ್ಟು 196 ಕೋಟಿ ರೂ ವೆಚ್ಚ ಮಾಡಲಾಗಿದೆ ಎಂದು ಶಾಸಕರು ಹೇಳಿದರು.

ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು. ನೀರು ಬಳಕೆ ಮಾಡಿದರೆ ನೀರಿನ ಬಿಲ್ ಜಾಸ್ತಿ ಬರುತ್ತದೆ ಎಂದು ಭಯಪಡಬೇಡಿ. ಸುಮಾರು 1 ರಿಂದ 8 ಸಾವಿರ ಲೀಟರ್ ನೀರು ಬಳಕೆ ಮಾಡಿದರೆ ಕೇವಲ 56 ರೂಪಾಯಿಗಳಷ್ಟು ಮಾತ್ರ ಬಿಲ್ ಬರುತ್ತದೆ ಎಂದರು.

5 ವರ್ಷಗಳಲ್ಲಿ ಮಾಡಲಾಗದ ಕೆಲಸವನ್ನು ಕೇವಲ 12 ತಿಂಗಳಲ್ಲಿಯೇ ಅಧಿಕಾರಿಗಳು ಮಾಡಿ ಮುಗಿಸಿದ್ದಾರೆ ಎಂದು ಸಂತಸಪಟ್ಟು ಸಂಭಂದಿಸಿದ ಅಧಿಕಾರಿಗಳಿಗೆ ವೇದಿಕೆಯಲ್ಲಿ ಅಭಿನಂದಿಸಿದರು.

ಕೃಷ್ಣ ಭಾಗ್ಯ ಜಲ ನಿಗಮದ 2022-23 ನೇ ಸಾಲಿನ ಅನುದಾನದಲ್ಲಿ ರೂ.127.7 ಕೋಟಿಗಳ ವೆಚ್ಚದಲ್ಲಿ ಸುಮಾರು 56.355 ಎಕರೆ ಭೂಮಿಗೆ ನೀರು ಹರಿಸುವ ಏತ ನೀರಾವರಿಗಳಾದ ದೇವತ್ಕಲ್ ಏತನೀರಾವರಿ.ಕೆ ತಳ್ಳಳ್ಳಿ. ಭೈರಿಮಡ್ಡಿ ಕೆರೆಯಿಂದ ಪೀಡರ್ ಕಾಲುವೆ ಮೂಲಕ ನೀರಾವರಿ.ಏದಲಭಾವಿ ಏತನೀರಾವರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮಾಡಿದ್ದು ಅಭಿವೃದ್ಧಿಯ ಕನಸು ನನಸಾಗಿದೆ ಎಂದರು.

ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಅಡಿಯಲ್ಲಿ ನಗರದ ವಿವಿಧ ವಾರ್ಡ್ ಹಾಗೂ ರಸ್ತೆ ಬದಿ ಚರಂಡಿ ನಿರ್ಮಾಣ, ಶಾಸಕರ ಅನುದಾನದ ಶಾಲಾ ಕೋಣೆಗಳ ನಿರ್ಮಾಣ, ತಿಂಥಣಿ ಬ್ರಿಡ್ಜ್ ಕಮ್ ಬ್ಯಾರೇಜ್ ನಿರ್ಮಾಣ, ಸುರಪುರ ಪತ್ರಿಕಾ ಭವನ ನಿರ್ಮಾಣ ಕಾಮಗಾರಿ ಸೇರಿದಂತೆ ಸುಮಾರು 355 ಕೋಟಿ ರೂ ಗಳ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ರಾಯಚೂರು ಲೋಕಸಭಾ ಸದಸ್ಯ ರಾಜಾ ಅಮರೇಶ್ವರ ನಾಯಕ, ನಗರ ಸಭೆ ಅಧ್ಯಕ್ಷ ಸುಜಾತ ವೇಣುಗೋಪಾಲ ಜೇವರ್ಗಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಕಾಶ ಸಜ್ಜನ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಡಾ:ಸುರೇಶ ಸಜ್ಜನ್,ಉದ್ಯಮಿ ಡಾ:ಎಸ್.ಪಿ ದಯಾನಂದ ಸೇರಿದಂತೆ ಇನ್ನಿತರರು ನಗರಸಭೆ ಸದಸ್ಯರು , ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧಿಕಾರಿಗಳು ಉಪಸ್ಥಿತರಿದ್ದರು.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

4 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

9 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

20 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

21 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

22 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

22 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420