ನಗರಸಭೆಯ ಪೌರಾಯುಕ್ತರ ಆಡಳಿತ ವೈಖರಿ ಖಂಡಿಸಿ ಸಭೆ ಬಹಿಷ್ಕರಿಸಿದ ಸರ್ವಸದಸ್ಯರು

ಶಹಾಬಾದ: ನಗರಸಭೆಯ ಸಭಾಂಗಣದಲ್ಲಿ ಶನಿವಾರ ನಗರಸಭೆಯ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರವರ ಅಧ್ಯಕ್ಷತೆಯಲ್ಲಿ ನಡೆಯಬೇಕಾಗಿದ್ದ 2023-24ನೇ ಸಾಲಿನ ಸರ್ವ ಸದಸ್ಯರ ಬಜೆಟ್ ಸಭೆಯನ್ನು ನಗರಸಭೆಯ ಪೌರಾಯುಕ್ತರ ಆಡಳಿತ ವೈಖರಿ ಖಂಡಿಸಿ ಸರ್ವ ಸದಸ್ಯರು ಬಹಿಷ್ಕರಿಸಿದಂತ ಘಟನೆ ನಡೆಯಿತು.

ಬೆಳಿಗ್ಗೆ 11 ಗಂಟೆಗೆ ನಡೆಯಬೇಕಿದ್ದ ಸರ್ವ ಸದಸ್ಯರ ಬಜೆಟ್ ಸಭೆಗೆ ನಗರಸಭೆಯ ಸದಸ್ಯ ಶ್ರವಣಕುಮಾರ ಒಬ್ಬರು ಮಾತ್ರ ಸಭಾಂಗಣದಲ್ಲಿ ಬಂದು ಕುಳಿತರು. ಸುಮಾರು 12 ಗಂಟೆಯವರೆಗೆ ಯಾವ ಸದಸ್ಯರು ಸಭೆ ಆಗಮಿಸಿದೇ ಇರುವುದರಿಂದ ಸಭಾಂಗಣದಲ್ಲಿ ಖಾಲಿ ಖಾಲಿ ಕುರ್ಚಿಗಳು ಕಾಣುತ್ತಿದ್ದವು.ಸರ್ವ ಸದಸ್ಯರು ಸಭೆಗೆ ಹೋಗದೇ ನಗರಸಭೆಯ ಮುಂಭಾಗದಲ್ಲಿ ಕುಳಿತು ನಗರಸಭೆಯ ಆಡಳಿತದ ವಿರುದ್ಧ ಆಕ್ರೋಶ ಹೊರಹಾಕಿದರು.

ಈ ಸಂದರ್ಭದಲ್ಲಿ ಮಾತನಾಡಿದ ನಗರಸಭೆಯ ಸದಸ್ಯರು, ನಗರಸಭೆಯ ಸರ್ವ ಸದಸ್ಯರಾದ ನಾವು ನಮ್ಮ ವಾರ್ಡನಲ್ಲಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಪೌರಾಯುಕ್ತರಿಗೆ ಮನವಿ ಮಾಡಿದರೂ ಯಾವುದಕ್ಕೂ ಸ್ಪಂದಿಸುತ್ತಿಲ್ಲ.ಕನಿಷ್ಠ ಪಕ್ಷ ಚಿಕ್ಕ ಪುಟ್ಟ ಸಮಸ್ಯೆಗಳನ್ನಾದರೂ ಬಗೆಹರಿಸುವ ನಿಟ್ಟಿನಲ್ಲೂ ಕ್ರಮಕೈಗೊಳ್ಳುತ್ತಿಲ್ಲ. ಮುಟೇಷನ್, ಖಾತಾ ಇತರ ಕೆಲಸಕ್ಕಾಗಿ ಇಲ್ಲದ ಕಾಗದ ಪತ್ರಗಳನ್ನು ಕೇಳಿ ಸತಾಯಿಸುತ್ತಿದ್ದಾರೆ. ಸಾರ್ವಜನಿಕರು ತಿಂಗಳುಗಟ್ಟಲೇ ಕಚೇರಿಗೆ ಅಲೆದಾಡುವಂತ ಆಗಿದೆ.ಇದರಿಂದ ನಗರಸಭೆ ಸಾರ್ವಜನಿಕರ ಕಂಗೆಣ್ಣಿಗೆ ಗುರಿಯಾಗಿದೆ.

ಇದರಿಂದ ನಗರಸಭೆಯ ಆಡಳಿತ ಸಂಪೂರ್ಣ ಕುಸಿದು ಬಿದ್ದಿದೆ. ವಾರ್ಡನ ಜನರಿಂದ ಉಗುಳಿಸಿಕೊಳ್ಳುವಂತ ಪರಿಸ್ಥಿತಿ ಚುನಾಯಿತ ಪ್ರತಿನಿಧಿಗಳಿಗೆ ತಂದಿಟ್ಟಿದ್ದಾರೆ. ಯಾವುದೇ ಸಣ್ಣಪುಟ್ಟ ಸಮಸ್ಯೆಗಳನ್ನು ತಮ್ಮ ವಾರ್ಡನಲ್ಲಿ ಕೆಲಸ ಮಾಡಿಕೊಳ್ಳಿ.ಅದಕ್ಕೆ ತಗುಲುವ ವೆಚ್ಚವನ್ನು ನಗರಸಭೆಯಿಂದ ನೀಡಲಾಗುವುದೆಂದು ಹೇಳುತ್ತಾರೆ.ಆದರೆ ಕೆಲಸ ಮಾಡಿದ ಮೇಲೆ ಬಿಲ್ ನೀಡಲೂ ಸತಾಯಿಸುವ ಕೆಲಸ ನಡೆದಿದೆ.

ಈ ಹಿಂದೆ ಪೌರಾಯುಕ್ತರ ಆಡಳಿತ ನಿರ್ಲಕ್ಷ್ಯತನವನ್ನು ಖಂಡಿಸಿ ನಗರಸಭೆಯ ಅಧ್ಯಕ್ಷರ ನೇತೃತ್ವದಲ್ಲಿ ಸರ್ವ ಸದಸ್ಯರ ನಿಯೋಗ ಜಿಲ್ಲಾಧಿಕಾರಿಗೆ ಹಾಗೂ ಶಾಸಕ ಬಸವರಾಜ ಮತ್ತಿಮಡು ಅವರಿಗೆ ತಿಳಿಸಲಾಗಿತ್ತು.ಅಲ್ಲದೇ ಉತ್ತಮ ಅಧಿಕಾರಿಗಳನ್ನು ನೇಮಿಸುವಂತೆ ಆಗ್ರಹಿಸಲಾಗಿತ್ತು.ಆದರೂ ಅದಕ್ಕೆ ಅವರು ಕ್ಯಾರೇ ಎನ್ನದೇ, ಅವರನ್ನೇ ಮುಂದುವರಿಸಿರುವುದರಿಂದ ಸರ್ವ ಸದಸ್ಯರು ಬಜೆಟ್ ಸಭೆಯನ್ನು ಬಹಿಷ್ಕರಿಸುವಂತಾಗಿದೆ. ಪೌರಾಯುಕ್ತರ ನಡೆ ಇದಕ್ಕೆಲ್ಲಾ ಕಾರಣ.ಆದ್ದರಿಂದ ಪೌರಾಯುಕ್ತರ ಬದಲಾವಣೆ ಮಾಡಿ ಉತ್ತಮ ಅಧಿಕಾರಿ ನೇಮಿಸದಿದ್ದರೇ ಧರಣಿ ಹಮ್ಮಿಕೊಳ್ಳುತ್ತೆವೆ ಎಂದರು.

ನಗರಸಭೆಯ ಪೌರಾಯುಕ್ತ ಬಸವರಾಜ ಹೆಬ್ಬಾಳ ಅವರು ನಗರಸಭೆಯ ಅಧ್ಯಕ್ಷರಿಗೆ ಹಾಗೂ ಸರ್ವ ಸದಸ್ಯರಿಗೆ ಸಭೆಯಲ್ಲಿ ಪಾಲ್ಗೊಳ್ಳಲು ಐದಾರು ಬಾರಿ ಮನವಿ ಮಾಡಿದರೂ ಯಾವೊಬ್ಬ ಸದಸ್ಯರು ಸ್ಪಂದಿಸದೇ, ಸಭೆಯನ್ನು ಬಹಿಷ್ಕರಿಸಿದರು.

ಚುನಾಯಿತ ಪ್ರತಿನಿಧಿಗಳಾದ ನಮ್ಮ ವಾರ್ಡಗಳಲ್ಲಿ ಇರುವ ಸಮಸ್ಯೆಗಳ ಕುರಿತು ತಿಳಿಸಿದರೂ ಯಾವುದಕ್ಕೂ ಸ್ಪಂದಿಸುತ್ತಿಲ್ಲ.ಇದರಿಂದ ಜನರಿಗೆ ಮುಖ ತೋರಿಸದಂತಾಗಿದೆ. ಪೌರಾಯುಕ್ತರ ಆಡಳಿತ ವೈಖರಿ ಹಾಗೂ ನಡೆಯನ್ನು ಖಂಡಿಸಿ ಸಭೆಯನ್ನು ಬಹಿಷ್ಕರಿಸಿದ್ದೆವೆ. ಇದು ಮುಂದುವರಿಯುತ್ತದೆ- ಸೂರ್ಯಕಾಂತ ಕೋಬಾಳ ನಗರಸಭೆಯ ಸದಸ್ಯ.

ನಗರೋತ್ಥಾನ ಯೋಜನೆಯಡಿ ಬಸವೇಶ್ವರ ವೃತ್ತದಿಂದ ಕನಕದಾಸರ ವೃತ್ತದವರೆಗಿನ ರಸ್ತೆ ಕಾಮಗಾರಿ ಮಾಡದೇ ಬಿಲ್ ಪಾವತಿ ಮಾಡಲಾಗಿದೆ.ಅಲ್ಲದೇ ಈಗ ಅದೇ ರಸ್ತೆಯ ಕಾಮಗಾರಿ ನಡೆಯುತ್ತಿದ್ದು, ಯಾವ ಯೋಜನೆ ಎಂಬುದು ಯಾರಿಗೂ ಗೊತ್ತಿಲ್ಲ.ಸಾರ್ವಜನಿಕರ ತೆರಿಗೆ ಹಣ ವಂಚನೆ ನಡೆದಿದೆ. – ನಾಗರಾಜ ಕರಣಿಕ್ ನಗರಸಭೆಯ ಸದಸ್ಯ.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

2 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

8 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

19 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

20 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

20 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

20 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420