ಶರಣರು ವಿಶ್ವದ ಮೊದಲ ಪ್ರಜಾಪ್ರಭುತ್ವ ಚಿಂತಕರು

ಕಲಬುರಗಿ: ರಾಜಸತ್ತೆಯ ಆ ಕಾಲದಲ್ಲಿ ಪ್ರಜಾಚಿಂತನೆ, ಪ್ರಜೆಗಳ ಶ್ರೋಯೋಭಿವೃದ್ಧಿ ಬಯಸಿದ್ದ ಬಸವಾದಿ ಶರಣರು ಜಗತ್ತಿನ ಮೊದಲ ಪ್ರಜಾಪ್ರಭುತ್ವವಾದಿಗಳು ಎಂದು ಗುಲ್ಬರ್ಗ ವಿಶ್ವವಿದ್ಯಾಲಯದ ಕುಲಸಚಿವ ಡಾ. ಬಿ. ಶರಣಪ್ಪ ಸತ್ಯಂಪೇಟೆ ಭಿಪ್ರಾಯಪಟ್ಟರು.

ಬಸವ ಸಮಿತಿ ಡಾ. ಬಿ.ಡಿ. ಜತ್ತಿ ವಚನ ಅಧ್ಯಯನ ಮತ್ತು ಸಂಶೋಧನ ಕೇಂದ್ರದ ಆಶ್ರಯದಲ್ಲಿ ಲಿಂ. ನೀಲಮ್ಮ ಮತ್ತು ಲಿಂ. ಶರಣಪ್ಪ ಕಲ್ಲಪ್ಪ ವಾಲಿ ಸ್ಮರಣಾರ್ಥ ಜಯನಗರದ ಅನುಭವ ಮಂಟಪದಲ್ಲಿ ಆಯೋಜಿಸಿದ್ದ 746ನೇ ಅರಿವಿನ ಮನೆ ಕಾರ್ಯಕ್ರಮದಲ್ಲಿ ಶರಣರ ಪ್ರಜಾಪ್ರಭುತ್ವ ಚಿಂತನೆಗಳು ವಿಷಯ ಕುರಿತು ಅನುಭಾವ ನೀಡಿದ ಅವರು, ಬಸವಣ್ಣನವರ ಆನು ಒಲಿದಂತೆ ಆಡುವೆ ಎಂಬ ಉದ್ಘೋಷವು ಪ್ರಜಾಪ್ರಭುತ್ವದ ಮೊದಲ ದನಿ ಹಾಗೂ ಪ್ರಜಾಪ್ರಭುತ್ವದ ಆಶಯವಾಗಿದೆ ಎಂದು ತಿಳಿಸಿದರು.

ಭಾರತದ ಸಂವಿಧಾನದ ಪೂರ್ವ ಪೀಠಿಕೆಯಲ್ಲಿ ಬರುವ ಸಮಾಜಿಕ ನ್ಯಾಯ, ಸ್ವತಂತ್ರ್ಯ, ಸಮನತೆ ಹಗೂ ಭ್ರಾತೃತ್ವಗಳು ವಚನ ಸಂವಿಧಾನದಲ್ಲಿವೆ. ಸಾಮಾಜಿಕ, ಆರ್ಥಿಕ, ರಾಜಕೀಯ ತಾರತಮ್ಯ ನಿವಾರಿಸಿ ಸಮಾನತೆ ತರುವ ಇರಾದೆ ಹೊಂದಿದ್ದ ಶರಣರು, ಕೇವಲ ಧಾರ್ಮಿಕ ಚಿಂತಕರಾಗಿರದೆ ಭಾರತದ ಮೊದಲ ಸಾಮಾಜಿಕ ಚಿಂತಕರು ಕೂಡ ಆಗಿದ್ದರು ಎಂಬುದು ಅವರ ಅನೇಕ ವಚನಗಳಿಂದ ತಿಳಿದು ಬರುತ್ತದೆ ಎಂದು ಹೇಳಿದರು.

ಭಕ್ತಿ ಆಂದೋಲನದ ಜೊತೆಗೆ ಜಂಗಮ, ಪುರಾತನ, ಪ್ರಮಥರು ಮತ್ತು ಅನುಭವ ಮಂಟಪದ ಪರಿಕಲ್ಪನೆಯನ್ನು ಹುಟ್ಟು ಹಾಕುವ ಮೂಲಕ ವಚನ ಪ್ರಸಾರ ಕರ್ಯ ಕೈಗೊಂಡರು. ಅಂದಿನ ಅನುಭವ ಮಂಟಪ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಸಂಕೇತವಾಗಿದೆ. ಸಂವಿಧಾನದಲ್ಲಿರುವ ಅನೇಕ ಅಂಶಗಳನ್ನು ಶರಣರು ತಮಗೆ ಒಲಿದಂತೆ ಆಗಲೇ ರೂಪಿಸಿಕೊಂಡಿದ್ದರು ಎಂದು ಅವರು ಅನೇಕ ವಚನಗಳ ಉದಾಹರಣೆ ನೀಡಿ ವಿವರಿಸಿದರು.

ಬಸವ ಸಮಿತಿ ಅಧ್ಯಕ್ಷೆ ಡಾ. ವಿಲಾಸವತಿ ಖೂಬಾ ಅಧ್ಯಕ್ಷತೆ ವಹಿಸಿದ್ದರು. ದತ್ತಿ ದಾಸೋಹಿ ಡಾ. ಕೆ.ಎಸ್. ವಾಲಿ ಸ್ವಾಗತಿಸಿದರು. ಎಚ್.ಕೆ. ಉದ್ದಂಡಯ್ಯ ನಿರೂಪಿಸಿದರು. ಬಸವ ಸಮಿತಿ ಉಪಾಧ್ಯಕ್ಷೆ ಡಾ. ಜಯಶ್ರೀ ದಂಡೆ, ಡಾ. ಬಿ.ಡಿ. ಜತ್ತಿ ವಚನ ಅಧ್ಯಯನ ಮತ್ತು ಸಂಶೋಧನ ಕೇಂದ್ರದ ನಿರ್ದೇಶಕ ಡಾ. ವೀರಣ್ಣ ದಂಡೆ, ಬಂಡಪ್ಪ ಕೇಸೂರ, ಗುರುಶಾಂತಮ್ಮ, ಮಲ್ಲಿಕಾರ್ಜುನ ಇತರರಿದ್ದರು.

ಪ್ರಜಾಪ್ರಭುತ್ವಕ್ಕೆ ತಮ್ಮದೇ ಆದ ಕೊಡುಗೆ ನೀಡಿದ ಬಸವಾದಿ ಶರಣರ ವಿಚಾರಗಳನ್ನು ಮುಂದಿನ ತಲೆಮಾರಿಗೆ ತಲುಪಿಸುವ ಕೆಲಸವನ್ನು ಮಾಡುತ್ತಿರುವ ಜವಾಬ್ದಾರಿಯನ್ನು ಅನೇಕರು ಮಾಡಿದ್ದಾರೆ. ಅಂಥವರ ಸಾಲಿನಲ್ಲಿ ಬಸವ ಸಮಿತಿಯ ಡಾ. ವಿಲಾಸವತಿ ಖೂಬಾ ಕೂಡ ಒಬ್ಬರು. ಅತ್ತಿಮಬ್ಬೆಯ ರೀತಿಯಲ್ಲಿ ಧರ್ಮ ಪ್ರಸಾರ ಮಾಡುತ್ತಿರುವ ಅವರ ಕಾರ್ಯ ಸ್ತುತ್ಯರ್ಹವಾಗಿದೆ. -ಡಾ. ಬಿ.ಶರಣಪ್ಪ ಸತ್ಯಂಪೇಟೆ, ಕುಲಸಚಿವರು, ಗು.ವಿ.ಕ

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

10 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

13 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

13 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

13 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

13 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

13 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420