ಉದ್ಯಾನವನಕ್ಕೆ ಕಂಪೌಂಡ ಗೋಡೆ ನಿರ್ಮಾಣಕ್ಕೆ ಆಗ್ರಹ

0
10

ಕಲಬುರಗಿ; ನಗರದ ಬಸವೇಶ್ವರ ಆಸ್ಪತ್ರೆಯ ಎದುರಗಡೆ ಇರುವ ವಿದ್ಯಾನಗರ ಕಾಲೋನಿಯ ಶ್ರೀ ಮಲ್ಲಿಕಾರ್ಜುನ ಸಮುದಾಯ ಭವನ ಹಾಗೂ ಉದ್ಯಾನವನಕ್ಕೆ ಕಂಪೌಂಡ ಗೋಡೆ ನಿರ್ಮಿಸಲು ಹಾಗು ಉದ್ಯಾನವನದಲ್ಲಿ ಮಕ್ಕಳಿಗೆ ಆಟಿಕೆ ಸಲಕರಣೆಗಳನ್ನು ಅಳವಡಿಸಿ ವಿದ್ಯಾನಗರ ಕಾಲೋನಿಯ ಜನರಿಗೆ ಅನುಕೂಲ ಮಾಡಿಕೊಡಬೇಕೆಂದು ವಿದ್ಯಾನಗರ ವೆಲ್‍ಫೇರ ಸೊಸೈಟಿಯ ಅಧ್ಯಕ್ಷರಾದ ಮಲ್ಲಿನಾಥ ದೇಶಮುಖ ಹಾಗು ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಅವಿನಾಶ ಕುಲಕರ್ಣಿ ಮನವಿ ಪತ್ರ ಸಲ್ಲಿಸಿದ್ದಾರೆ.

ಇದಕ್ಕೆ ಸುಸಜ್ಜಿತ ಕಂಪೌಂಡ ಗೋಡೆ ನಿರ್ಮಿಸಿ ಒಂದು ಮುಖ್ಯದ್ವಾರದ ಗೇಟ್ ಹಾಗೂ ಎರಡು ಸಣ್ಣ ಗೇಟ್ ಕೂಡಿಸಬೇಕೆಂದು ಪತ್ರದಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here