ಕುರುಬ ಸಮಾಜದ ಯುವ ಘಟಕದ ಪದಾಧಿಕಾರಿಗಳ ಆಯ್ಕೆ

0
79

ಶಹಾಬಾದ:ನಗರದ ಮರಗೋಳ ಕಾಲೇಜಿನ ಸಮೀಪದ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಯುವ ಘಟಕದ ರಾಜ್ಯಾಧ್ಯಕ್ಷ ಭಗವಂತರಾಯ ಮಾಲಿಪಾಟೀಲ ಅಧ್ಯಕ್ಷತೆಯಲ್ಲಿ ಕರ್ನಾಟಕ ಪ್ರದೇಶ ಕುರುಬರ ಸಂಘದ ಯುವ ಘಟಕದ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಈ ಸಭೆಯಲ್ಲಿ ಕರ್ನಾಟಕ ಪ್ರದೇಶ ಕುರುಬ ಸಂಘದ ತಾಲೂಕಾ ಯುವ ಘಟಕದ ಅಧ್ಯಕ್ಷರಾಗಿ ಸೂರ್ಯಕಾಂತ ಗಿರಣಿ, ಕಾರ್ಯಾಧ್ಯಕ್ಷರಾಗಿ ಲಿಂಗರಾಜ ಕಮರಡಗಿ, ಪ್ರಧಾನ ಕಾರ್ಯದರ್ಶಿಯಾಗಿ ವಿಜಯ ಕುಮಾರ ಕಂಠೀಕರ, ಉಪಾಧ್ಯಕ್ಷರಾಗಿ ಸುನೀಲ ಪೂಜಾರಿ, ಖಂಜಾಚಿಯಾಗಿ ಶರಣಪ್ಪ ಪೂಜಾರಿ, ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

Contact Your\'s Advertisement; 9902492681

ಈ ಸಭೆಯಲ್ಲಿ ಸಮಾಜದ ಜಿಲ್ಲಾಧ್ಯಕ್ಷರಾದ ಗುರುನಾಥ ಪೂಜಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗೇಶ ಮುಚ್ಚಕೆಡ, ಹಿರಿಯರಾದ ದೇವಿಂದ್ರಪ್ಪ ಮರತೂರ, ಮಲ್ಲಿಕಾರ್ಜುನ ಪೂಜಾರಿ ಭಂಕೂರ ಹಾಗೂ ಸಂಘದ ಯುವ ಘಟಕದ ಜಿಲ್ಲಾಧ್ಯಕ್ಷ ಧರ್ಮರಾಜ ಹೇರೂರ, ಶಹಾಬಾದ ತಾಲೂಕ ಅಧ್ಯಕ್ಷ ಮಲ್ಕಣ್ಣ ಮುದ್ದಾ, ಮರಲಿಂಗ ಕಮರಡಗಿ, ಬಸವರಾಜ ಮದ್ರಕಿ, ಅಶೋಕ ದೇವರಮನಿ ಉಪಸ್ಥಿತಿರಿದ್ದರು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here