ಮಾದಿಗ ಸಮುದಾಯದ ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ತಿಭಟನೆ

ಕಲಬುರಗಿ: ಮಾದಿಗ ಸಮುದಾಯದ ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಡಾ.ಬಾಬು ಜಗಜೀವನರಾಮ ಅಭಿವೃದ್ಧಿ ಮತ್ತು ಹೋರಾಟ ಸಮಿತಿಯ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಖಾರಿಗಳ ಮುಖಾಂತರ ಸಿಎಂ ಬಸವರಾಜ ಬೋಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು.

ಬೇಡಿಕೆಗಳಾದ ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿಯನ್ನು ಯಥಾಸ್ಥಿತಿಯಾಗಿ ಯಾವುದೇ ರೀತಿ ವರದಿಯಲ್ಲಿ ಬದಲಾವಣೆ ಮಾಡಲಾರದೆ, ಸದಾಶಿವ ಆಯೋಗದ ವರದಿಯನ್ನು ಕೂಡಲೇ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಿ ಮಾದಿಗ ಜನಾಂಗದವರಿಗೆ ನ್ಯಾಯ ಒದಗಿಸಬೇಕು, ಭಾರತ ದೇಶದ ಉಪ-ಪ್ರಧಾನಿ ಹಸಿರು ಕ್ರಾಂತಿಯ ಹರಿಕಾರ ದಲಿತ ನೇತಾರರಾದ ಡಾ. ಬಾಬು ಜಗಜೀವನರಾಂ ರವರ ಏಪ್ರಿಲ್ 5 ರಂದು ಜಯಂತಿ ಉತ್ಸವ ದಿನದಂದು ರಾಜ್ಯ ಸರಕಾರ ರಜೆ ಘೋಷಣೆ ಮಾಡಬೇಕು, ಡಾ. ಬಾಬು ಜಗಜೀವನರಾಂ ರವರ ಜೀವನ ಚರಿತ್ರೆ ರಾಜ್ಯ ಸರಕಾರ ಸರಕಾರದ ಪಠ್ಯ ಪುಸ್ತಕದಲ್ಲಿ ಜೀವನ ಚರಿತ್ರೆ ಅಳವಡಿಸಬೇಕು, ಕರ್ನಾಟಕ ಆದಿಜಾಂಬವ ನಿಗಮಕ್ಕೆ ಹೆಚ್ಚಿನ 500 ಕೋಟಿ ಅನುದಾನ ನಿಗದಿಪಡಿಸಬೇಕು. ರಾಜ್ಯದ ಎಲ್ಲಾ ಮತಕ್ಷೇತ್ರಗಳಲ್ಲಿ ಎಲ್ಲಾ ಯೋಜನೆಗಳಲ್ಲಿ “ಗುರಿ” ಹೆಚ್ಚಿಸಬೇಕು, ಡಾ. ಬಾಬು ಜಗಜೀವನರಾಂ ಧರ್ಮ ಕೈಗಾರಿಕೆ ಅಭಿವೃದ್ಧಿ ನಿಗಮಕ್ಕೆ (ಲಿಡ್ಕರ್) ಹೆಚ್ಚಿನ ಅನುದಾನ (500 ಕೋಟಿ) ನಿಗದಿಪಡಿಸಬೇಕು. ಎಲ್ಲಾ ಮತಕ್ಷೇತ್ರಗಳಲ್ಲಿ ಎಲ್ಲಾ ಯೋಜನೆಗಳಲ್ಲಿ “ಗುರಿ” ಹೆಚ್ಚಿಸಬೇಕು.

ಕರ್ನಾಟಕ ರಾಜ್ಯಾದ್ಯಂತ ಎಲ್ಲಾ ಮಾದಿಗ ಪರ ಸಂಘಟನೆಗಳು ಸದಾಶಿವ ಆಯೋಗದ ವರದಿ ಬಗ್ಗೆ ಹಾಗೂ ಮಾದಿಗ ಮೇಲೆ ದೌರ್ಜನ್ಯ, ದಬ್ಬಾಳಿಕೆ, ಆದ ಸಂದರ್ಭದಲ್ಲಿ ಮಾದಿಗ ಪರ ಸಂಘಟನೆಗಳು ಹೋರಾಟ ಮಾಡಿರುತ್ತವೆ. ಹೋರಾಟ ಮಾಡಿದಕ್ಕೆ ರಾಜ್ಯ ಅಧ್ಯಕ್ಷರ ಮೇಲೆ ಹಾಗೂ ಜಿಲ್ಲಾ ಅಧ್ಯಕ್ಷರ ಮೇಲೆ ಮಾದಿಗ ಪರ ಸಂಘಟನೆಗಳ ಪದಾಧಿಕಾರಿಗಳ ಮೇಲೆ ಕೇಸ್ ದಾಖಲೆ ಮಾಡಿದನ್ನು ರಾಜ್ಯ ಸರಕಾರ ಕೂಡಲೇ ಹಿಂಪಡೆಯಬೇಕು.

ಈ ಎಲ್ಲಾ ವಿಷಯಗಳನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿ ಮಾದಿಗ ಸಮುದಾಯದ ಎಲ್ಲಾ ಬೇಡಿಕೆಗಳನ್ನು ಕೂಡಲೇ ಈಡೇರಿಸಿ ಮಾದಿಗ ಜನಾಂಗದವರಿಗೆ ನ್ಯಾಯ ದೊರಕಿಸಿ ಕೊಡಬೇಕು. ನ್ಯಾಯ ದೊರಕಿಸಿ ಕೊಡದಿದ್ದರೆ 2023ರ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ವಿರೋಧ ರಾಜ್ಯಾದ್ಯಂತ ಮತದಾನ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಅದಕ್ಕೆ ತಾವುಗಳು ಅವಕಾಶ ಮಾಡಿಕೊಡಲಾರದೆ ಕೂಡಲೇ ಮಾದಿಗ ಸಮುದಾಯದ ಎಲ್ಲಾ ಬೇಡಿಕೆಗಳು ಈಡೇರಿಸಬೇಕೆಂದು ಸಮಾಜದ ವತಿಯಿಂದ ಹಾಗೂ ಸಮಿತಿ ವತಿಯಿಂದ ಮನವಿ ಪತ್ರದಲ್ಲಿ ತಿಳಿಸಿದ್ದಾರೆ. ಜಿಲ್ಲಾ ಅಧ್ಯಕ್ಷ ರಾಜು ಎಸ್. ಕಟ್ಟಿಮನಿ, ರಾಜು ವಾಡೆಕಾರ, ಶರಣು ಎಸ್. ಸಗರಕರ್, ಮಲ್ಲಿಕಾರ್ಜುನ ಸರಡಗಿ, ಗುರುರಾಜ ಭಂಡಾರಿ, ಮಲ್ಲಪ್ಪ ಚಿಗಾನೂರ, ಅನಿಲ ಡೊಂಗರಗಾಂವ, ರವಿ ಸಿಂಗೆ, ಕಾಡಸಿದ್ದ, ಮಂಜುನಾಥ, ಸಿದ್ದಣ್ಣ ಸೇರಿದಂತೆ ಇತರರು ಇದ್ದರು.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

7 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

10 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

14 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

15 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

17 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420