ಉಪನ್ಯಾಸಕರ ಮೇಲೆ ಕಾನ್‍ಸ್ಟೆಬಲ್ ಹಲ್ಲೆ: ಪ್ರತಿಭಟನೆ

ಕಲಬುರಗಿ: ಜಿಲ್ಲೆಯ ಅಳಂದ ಪಟ್ಟಣದಲ್ಲಿನ ಕೇಂದ್ರದಲ್ಲಿ ಪಿಯುಸಿ ಪರೀಕ್ಷಾ ಉಪನ್ಯಾಸಕರ ಮೇಲೆ ಪೆÇಲೀಸ್ ಕಾನ್‍ಸ್ಟೆಬಲ್ ಅಂಕುಶ ಎಂಬುವರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ರಾಜ್ಯ ಪದವಿ ಪೂರ್ವ ಕಾಲೇಜುಗಳ ಹಾಗೂ 53 ರಾಜ್ಯ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಸದಸ್ಯರು, ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಮೌನ ಪ್ರತಿಭಟನೆ ನಡೆಸಿದರು.

ಹಲ್ಲೆ ಮಾಡಿದವರ ವಿರುದ್ಧ ಕ್ರಮ ಆಗ್ರಹಿಸಿದರು. ಉಪನ್ಯಾಸಕ ಮಂಜುನಾಥ ಅವರು ಅಳಂದ ಸರ್ಕಾರಿ ಪದವಿಪೂರ್ವ ಕಾಲೇಜು (ಬಾಲಕಿಯರ), ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮಧ್ಯಾಹ್ನ 1.45ರ ವೇಳೆಗೆ ಉತ್ತರ ಪತ್ರಿಕೆಗಳ ಗೋಪ್ಯ ಲಕೋಟೆ ಮಾಡುವ ಕೋಣೆಗೆ ನುಗ್ಗಿದ ಪೆÇಲೀಸ್ ಕಾನ್‍ಸ್ಟೆಬಲ್ ಅಂಕುಶ ಅವರು ಮಂಜುನಾಥ ಅವರ ಮೇಲೆ ಹಲ್ಲೆ ಮಾಡಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಈ ದೃಶ್ಯಗಳು ಪರೀಕ್ಷಾ ಕೇಂದ್ರದಲ್ಲಿ ಅಳವಡಿಸಿದ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಎಂದು ಹೇಳಿದ್ದಾರೆ.

ಹಲ್ಲೆಗೆ ಒಳಗಾದ ಉಪನ್ಯಾಸಕರು ತೀವ್ರವಾಗಿ ಮನನೊಂದಿದ್ದಾರೆ. ಕರ್ತವ್ಯ ನಿರತ ಉಪನ್ಯಾಸಕರ ಮೇಲೆ ಹಲ್ಲೆ ಮಾಡಿದ್ದು, ಖಂಡನೀಯ. ಪರೀಕ್ಷಾ ಕೇಂದ್ರಗಳಿಗೆ ಭದ್ರತೆ ಒದಗಿಸಬೇಕಾದ ಪೋಲಿಸ್ ಇಲಾಖೆಯ ಸಿಬ್ಬಂದಿ ಈ ರಿತಿ ವರ್ತಿಸಿದ್ದು ಸರಿಯಲ್ಲ. ಇದನ್ನು ಉಭಯ ಸಂಘಟನೆಗಳು, ಸಂಘಟನೆಗಳು ಬಲವಾಗಿ ಖಂಡಿಸುತ್ತವೆ. ಇದು ಹೀಗೆ ಮುಂದುವರಿದರ ಮುಂಬರುವ ದಿನಗಳಲ್ಲಿ ಪರೀಕ್ಷೆಗೆ ನಿಯೋಜನೆಗೊಂಡ ಸಿಬ್ಬಂದಿ ಮತ್ತು ಅಧಿಕಾರಿಗಳು ಕರ್ತವ್ಯ ನಿರ್ವಹಿಸಲು ಹಿಂಜರಿಯುತ್ತಾರೆ ಎಂದಿದ್ದಾರೆ.
ಮರುಕಳಿಸದಂತೆ ಅಗತ್ಯ ತೆಗೆದುಕೊಳ್ಳಬೇಕು. ಹಲ್ಲೆ ಮಾಡಿದ ಪೆÇಲೀಸ್ ಕಾನ್‍ಸ್ಟೆಬಲ್ ಎರಡು ದಿನಗಳ ಒಳಗಾಗಿ ಕಾನೂನು ಕ್ರಮ ಜರುಗಿಸಬೇಕು. ಇಲ್ಲದಿದ್ದರೇ ಹೋರಾಟ ತೀವ್ರಗೊಳಿಸಲಾಗುವುದು ಎಂದು ಸಂಘವ ಮುಖಂಡರು ಎಚ್ಚರಿಸಿದರು.

ಮನವಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಶಿಷ್ಟಾಚಾರ ತಹಶೀಲ್ದಾರ್ ಸಯ್ಯದ್ ನಿಸಾರ್ ಅಹ್ಮದ್ ಅವರಿಗೆ ಸಲ್ಲಿಸಿದರು. ಉಪನ್ಯಾಸಕರ ಸಂಘದ ಪದಾಧಿಕಾರಿಗಳಾದ ನಾಮದೇವ ಕಡಕೋಳ, ಜೆ.ಮಲ್ಲಪ್ಪ, ಬಿ.ಹೆಚ್.ನಿರಗುಡಿ, ಶರಣಗೌಡ ಪಾಟೀಲ, ನರಸಪ್ಪ ಟಿ, ರಂಗೋಲಿ, ಬಸಣ್ಣ ಪೂಜಾರಿ, ಶಿವಕುಮಾರ ವಿ. ಯರಗೇರಿ, ಜಗಪ್ಪ ಹೊಸಮನಿ, ಯಶವಂತ ಪವಾರ, ಅಶೋಕ ತಳವಾರ, ಪ್ರಚಾರ್ಯ ಸಂಘದ ಪದಾಧಿಕಾರಿಗಳಾದ ಅರುಣಕುಮಾರ ಪಾಟೀಲ, ಮೊಹ್ಮದ್ ಅಲ್ಲಾಉದ್ದೀನ್, ಸಾಗರ, ಮಲ್ಲೇಶ ನಾಟೀಕಾರ, ಪಲ್ಲಾದ ಬುರ್ಲಿ, ಆಯೇಶಾ ನಸೀಮ್, ಎಂ.ಸುಜಾತಾ, ಬಿ.ಪಿ.ಚವ್ಹಾಣ, ಬಸವರಾಜ ಬಿರಾಜದಾರ, ಗೌಸುದ್ದೀನ್ ತುಮಕೂರಕರ್ ಇದ್ದರು.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

2 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

5 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

9 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

10 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

12 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

23 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420