ಸುರಪುರ: ನಗರದ ಹಸನಾಪುರ ಕ್ಯಾಂಪ್ಲ್ಲಿನ ಕೆಬಿಜೆಎನ್ಎಲ್ ಹೊರಗಾಲುವೆ ಕಾಡಾ ಸಂಖ್ಯೆ-2ರ ಕಚೇರಿಯನ್ನು ಬಾಗಲಕೋಟೆಗೆ ಸ್ಥಳಾಂತರಿಸುವುದನ್ನು ವಿರೋಧಿಸಿ ಸಾಮೂಹಿಕ ಸಂಘಟನೆಗಳ ವೇದಿಕೆಯಿಂದ ನಗರದ ತಹಸೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಅನೇಕ ಮುಖಂಡರು ಮಾತನಾಡಿ,ಹಸನಾಪುರ ಕಾಡಾ ಕಚೇರಿ ಸ್ಥಳಾಂತರ ಮಾಡುವುದರಿಂದ ಸುರಪುರ,ಶಹಾಪುರ,ದೇವದುರ್ಗ,ಯಾದಗಿರಿ,ವಡಗೇರಿ ತಾಲೂಕಿನ ರೈತರ ಲಕ್ಷಾಂತರ ಎಕರೆ ಜಮೀನುಗಳ ನೀರಾವರಿಗೆ ತೊಂದರೆಯಾಗಲಿದೆ.ಸರಕಾರಕ್ಕೆ ಅನೇಕ ಬಾರಿ ಪ್ರತಿಭಟನೆ ನಡೆಸಿ ಮನವಿ ಮಾಡಿದರು,ಈ ವರೆಗೆ ಒಂದೂ ಸ್ಪಷ್ಟನೆ ನೀಡುತ್ತಿಲ್ಲ,ಸರಕಾರ ರೈತರ ಜೊತೆಗೆ ಚೆಲ್ಲಾಟವಾಡದೆ ಕೂಡಲೇ ನೀರಾವರಿ ಸಚಿವರು ಸ್ಪಷ್ಟನೆ ನೀಡಬೇಕು,ಇಲ್ಲವಾದಲ್ಲಿ ಇಡೀ ಜಿಲ್ಲೆಯಾದ್ಯಂತ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ಶಾಸಕರು ಬರೀ ಹೇಳಿಕೆಯನ್ನು ನೀಡಿದರೆ ಸಾಲದು ರೈತರಿಗಾಗಿ ಕೂಡಲೇ ಸರಕಾರದ ಮೇಲೆ ಒತ್ತಡ ಹಾಕಿ ಮುಖ್ಯಮಂತ್ರಿಗಳಿಂದಲಾದರು ಅಥವಾ ನೀರಾವರಿ ಸಚಿವರಿಂದ ಸ್ಪಷ್ಟನೆಯನ್ನು ಹೊರಡಿಸಬೇಕು,ಇಲ್ಲವಾದಲ್ಲಿ ತಾವುಕೂಡ ರೈತರಿಗಾಗಿ ಪ್ರತಿಭಟನೆಗೆ ನಮ್ಮೊಂದಿಗೆ ಭಾಗವಹಿಸಲಿ ಎಂದು ಒತ್ತಾಯಿಸಿದರು.
ನಂತರ ಭೀಮರಾಯನಗುಡಿ ಮುಖ್ಯ ಕಾರ್ಯನಿರ್ವಾಹಕ ಅಭಿಯಂತರರಿಗೆ ಬರೆದ ಮನವಿಯನ್ನು ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿಯವರಿಗೆ ಸಲ್ಲಿಸಿದರು.ಮನವಿ ಸ್ವೀಕರಿಸಿದ ತಹಸೀಲ್ದಾರರು ಮಾತನಾಡಿ,ತಮ್ಮ ಮನವಿಯನ್ನು ಸಂಬಂಧಿಸಿರುವ ಅಧಿಕಾರಿಗಳಿಗೆ ಸಂಪರ್ಕಿಸಿ ನಿಮ್ಮ ಬೇಡಿಕೆಯನ್ನು ಗಮನಕ್ಕೆ ತರಲಾಗುವುದು,ಜೊತೆಗೆ ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಕಳುಹಿಸುವುದಾಗಿ ಭರವಸೆ ನೀಡಿದರು.
ಪ್ರತಿಭಟನೆಯಲ್ಲಿ ಮುಖಂಡರಾದ ರಮೇಶ ದೊರೆ ಆಲ್ದಾಳ,ವೆಂಕಟೇಶ ಬೇಟೆಗಾರ,ರೈತ ಸಂಘದ ತಾಲೂಕು ಅಧ್ಯಕ್ಷ ಹಣಮಂತ್ರಾಯ ಚಂದಲಾಪುರ,ಭೀಮರಾಯ ಸಿಂದಗೇರಿ,ಮಾಳಪ್ಪ ಕಿರದಳ್ಳಿ,ನಿಂಗಣ್ಣ ಗೋನಾಲ,ರಾಹುಲ ಹುಲಿಮನಿ,ನಾಗರಾಜ ಗೋಗಿಕೇರ,ವೈಜನಾಥ ಹೊಸ್ಮನಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…