ಸುರಪುರ: ನಗರದ ಪೊಲೀಸ್ ಕಾಲೋನಿಯಲ್ಲಿ ನಟ ಡಾ. ಪುನೀತ್ ರಾಜಕುಮಾರ್ ಸ್ಮರ್ಣಾರ್ಥವಾಗಿ ಕುಡಿಯುವ ನೀರಿನ ಅರವಟಿಗೆಯನ್ನು ಆರಂಭಿಸಲಾಗಿದೆ.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪಿಎಸ್ಐ ಕೃಷ್ಣಾ ಸುಬೇದಾರ್ ಅರವಟಿಗೆಗೆ ಚಾಲನೆ ನೀಡಿ ಮಾತನಾಡಿ,ಈ ನಾಡು ಕಂಡ ಹೆಮ್ಮೆಯ ನಟ ಹಾಗೂ ಸಮಾಜ ಸೇವಕ ಡಾ:ಪುನೀತ್ ರಾಜಕುಮಾರ್ ಹೆಸರಲ್ಲಿ ಕುಡಿಯುವ ನೀರಿನ ಅರವಟಿಗೆ ಆರಂಭಿಸಿರುವುದು ತುಂಬಾ ಹೆಮ್ಮೆಯ ಸಂಗತಿಯಾಗಿದೆ ಎಂದರು.ಯಾಕೆಂದರೆ ಬೇಸಿಗೆ ಸಂದರ್ಭದಲ್ಲಿ ಜನರು ಕುಡಿಯುವ ನೀರು ತುಂಬಾ ಅವಶ್ಯಕವಾಗಿದೆ.ಇದನ್ನು ಅರಿತು ಪ್ರತಿವರ್ಷ ಅರವಟಿಗೆಯನ್ನು ಆರಂಭಿಸುವ ಮೂಲಕ ಪೊಲೀಸ್ ಕಾಲೋನಿಯ ಜನ ಅದರಲ್ಲೂ ವಿಶೇಷವಾಗಿ ದಯಾನಂದ ಜಮಾದಾರ್ ಕಾಳಜಿ ವಹಿಸುತ್ತಿರುವುದು ಹೆಮ್ಮೆಯ ಕಾರ್ಯವಾಗಿದೆ ಎಂದರು.
ಅಲ್ಲದೆ ಪ್ರತಿಯೊಬ್ಬರು ಹೀಗೆ ಪರೋಪಕಾರಕ್ಕೆ ಮುಂದಾಗಬೇಕು ಮತ್ತು ಪ್ರತಿಯೊಬ್ಬರು ತಮ್ಮ ಹುಟ್ಟು ಹಬ್ಬವನ್ನು ಅದ್ಧೂರಿಯಾಗಿ ಆಚರಿಸುವ ಬದಲು ಪ್ರತಿವರ್ಷ ಒಂದು ಸಸಿಯನ್ನು ನೆಟ್ಟು ಬೆಳೆಸುವುದನ್ನು ರೂಢಿಸಿಕೊಂಡರೆ ಅದಕ್ಕಿಂತ ದೊಡ್ಡ ಆಚರಣೆ ಯಾವುದು ಇರುವುದಿಲ್ಲ ಈನಿಟ್ಟಿನಲ್ಲಿ ಎಲ್ಲರು ಚಿಂತನೆ ಮಾಡಬೇಕು ಎಂದರು.
ಕಾರ್ಯಕ್ರಮದಲ್ಲಿ ಮತ್ತೋರ್ವ ಪಿಎಸ್ಐ ನಬಿಲಾಲ ಸೇರಿದಂತೆ ಅನೇಕ ಜನ ಪೊಲೀಸ್ ಪೇದೆಗಳು ಹಾಗೂ ಪುನೀತ್ ರಾಜಕುಮಾರ್ ಅಭಿಮಾನಿಗಳು ಭಾಗವಹಿಸಿದ್ದು,ಪೊಲೀಸ್ ಪೇದೆ ದಯಾನಂದ ಜಮಾದಾರ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…