ಬಿಸಿ ಬಿಸಿ ಸುದ್ದಿ

ಅಲ್ಲಮ ಪ್ರಭು ಆಧ್ಯಾತ್ಮ ಜಗತ್ತಿನ ವಿಸ್ಮಯ -ನರೋಣಿ

ಶಹಾಬಾದ:ಅ ಲ್ಲಮ ಪ್ರಭು ಆಧ್ಯಾತ್ಮ ಜಗತ್ತಿನ ವಿಸ್ಮಯ.ಸಾಧನೆಯ ದೃಷ್ಟಿಯಿಂದ ದೇಶ, ಕಾಲಗಳನ್ನು ಮೀರಿ ವಿಶ್ವದ ಮಹಾನ್ ವಿಭೂತಿಗಳ ಸಾಲಿನಲ್ಲಿ ನಿಲ್ಲಬಲ್ಲ ಮಹಾನುಭವಿ ಎಂದು ಉಪನ್ಯಾಸಕ ರವೀಂದ್ರ ನರೋಣಿ ಮರತೂರ ಹೇಳಿದರು.

ಅವರು ಬುಧವಾರ ಭಂಕೂರ ಗ್ರಾಮದ ಶಾಂತನಗರದ ಬಸವ ಸಮಿತಿಯಲ್ಲಿ ಆಯೋಜಿಸಲಾದ ಅಲ್ಲಮಪ್ರಭು ಜಯಂತಿ ಹಾಗೂ ಯುಗಾದಿ ಹಬ್ಬದ ಕಾರ್ಯಕ್ರಮದ ಉದ್ಘಾಟಕರಾಗಿ ಮಾತನಾಡಿದರು.

ಬಸವಣ್ಣನವರದು ಭಕ್ತಿಮಾರ್ಗ.ಅಲ್ಲಮನದು ಅರಿವಿನ ಮಾರ್ಗ.ಅನುಭಾವದರಿವಿನಲ್ಲಿ ಲೋಕಕಲ್ಯಾಣವನ್ನು ಕಂಡವರು ಅಲ್ಲಮ ಪ್ರಭುದೇವರು.ತಮ್ಮ ಆತ್ಮ ಉದ್ಧಾರದ ಜತೆಗೆ ವ್ಯಕ್ತಿ ಶುದ್ಧಿಯ ಮೂಲಕ ಸಮಾಜದ ಶುದ್ಧಿಗೆ ತೊಡಗಿದ ಅವರು ತನು,ಮನ ಶಿದ್ಧಿಗೆ ಆದ್ಯತೆ ನೀಡಿದವರು.ಸರ್ವಸಮಾನತೆಯ, ಸ್ವಾವಲಂಬನೆಯ ಬದುಕಿಗೆ ಸತ್ಯ ಶುದ್ಧ ಕಾಯಕ ಮತ್ತು ದಾಸೋಹ ಜಾರಿಗೊಳಿಸಿದರು. ಬಸವ ಧರ್ಮ ಅಪ್ಪಿಕೊಳ್ಳುವ ಹಾಗೂ ಒಪ್ಪಿಕೊಳ್ಳುವ ಧರ್ಮವಾಗಿದ್ದು, ಅದರ ಸಾರವನ್ನು ನಾವೆಲ್ಲರೂ ಅನುಭವಿಸಿದ್ದೆ ಆದರೆ ಎಲ್ಲರೂ ಬದುಕಿನಲ್ಲಿ ಸಂತೋಷವನ್ನು ಕಾಣಬಹುದು ಎಂದರು.

ಬಸವ ಸಮಿತಿ ಅಧ್ಯಕ್ಷ ನೀಲಕಂಠ ಮುದೋಳಕರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಲ್ಲಮ ಪ್ರಭುದೇವರ ಆಧ್ಯಾತ್ಮಿಕ ಜ್ಞಾನ,ಅನುಭಾವ, ವೈರಾಗ್ಯ ಜೀವನ ಮನುಕುಲಕ್ಕೆ ಆದರ್ಶವಾಗಿವೆ. ಯುಗಾದಿಯೆಂದರೆ ಹೊಸವರ್ಷದ ಆರಂಭದ.ಇಂದಿನಿಂದ ವಸಂತ ಮಾಸ ಪ್ರಾರಂಭವಾಗುತ್ತದೆ. ಬೇವು-ಬೆಲ್ಲ ಜೀವನದ ಸಿಹಿ-ಕಹಿಗಳೆರಡನ್ನೂ ಪಡೆಯಬೇಕೆಂದು ನೆನಪಿಸಲು ಬೇವು-ಬೆಲ್ಲಗಳ ಮಿಶ್ರಣವನ್ನು ತಿನ್ನಲಾಗುತ್ತದೆ. ಗಿಡ ಮರಗಳು ಹೊಸ ಚಿಗುರು ಪಡೆಯಲು ಪ್ರಾರಂಭವಾಗುತ್ತದೆ. ಈ ಹೊಸ ವರ್ಷವನ್ನು ಬೇವು-ಬೆಲ್ಲ ತಿನ್ನುವುದರ ಮೂಲಕ ಜೀವನದಲ್ಲಿ ಸಿಹಿ-ಕಹಿ ಎರಡೂ ಸಮಾನವಾಗಿರುವುದರ ಸಂಕೇತವಾಗಿ ಸ್ವೀಕರಿಸಬೇಕೆಂಬ ಸಂದೇಶವೇ ಈ ಯುಗಾದಿ ಎಂದರು.

ದಾನಿಗಳಾದ ಈರಣ್ಣ ಸುತಾರ, ಮರತೂರಿನ ಶಾಮರಾಯಗೌಡ ಮಾಲಿಪಾಟೀಲ ವೇದಿಕೆಯ ಮೇಲಿದ್ದರು. ರೇವಣಸಿದ್ದಪ್ಪ ಮುಸ್ತಾರಿ ನಿರೂಪಿಸಿ, ಸ್ವಾಗತಿಸಿದರು, ವಂದಿಸಿದರು. ಬಸವ ಸಮಿತಿ ಮಾಜಿ ಅಧ್ಯಕ್ಷ ಅಮೃತ ಮಾನಕರ್, ಪದಾಧಿಕಾರಿಗಳಾದ ಶಿವಶರಣಪ್ಪ ಜಟ್ಟೂರ್, ಚಂದ್ರಕಾಂತ ಅಲಮಾ, ಶಾಂತಪ್ಪ ಬಸಪಟ್ಟಣ, ಹಣಮಂತರಾಯ ದೇಸಾಯಿ, ಶಿವರಾಜ ಹಡಪದ, ಮಲ್ಲಿಕಾರ್ಜುನ ಘಾಲಿ, ಅಮರಪ್ಪ ಹೀರಾಳ,ಶರಣಬಸಪ್ಪ ನಾಗನಳ್ಳಿ ಸೇರಿದಂತೆ ಇತರರು ಇದ್ದರು.

emedialine

Recent Posts

ಮಹಿಳೆಯರನ್ನು ಗೌರವಿಸುವ ಶ್ರೀಮಂತ ಸಂಪ್ರದಾಯ ಹೊಂದಿರುವ ದೇಶ ಭಾರತ

ಮಾರ್ಚ್ 8 ರಂದು ಅಂತರರಾಷ್ಟ್ರೀಯ ಮಹಿಳಾ ದಿನ ಅಶೋಕ ಪಾಟೀಲ ಮಹಿಳೆ ಅಥವಾ ಸ್ತ್ರೀ ಪದವು ಸಂಸ್ಕøತದ್ದು, ಕನ್ನಡದಲ್ಲಿ ಈ…

4 days ago

ನಿಧನ ವಾರ್ತೆ: ಭೀಮರಾವ.ಸಿ.ಸುಗೂರ

ಶಹಾಬಾದ:ನಗರದ ಹಳೆಶಹಾಬಾದನ ವೀರಶೈವ ಲಿಂಗಾಯತ ಸಮಾಜದ ಮುಖಂಡರಾದ ಭೀಮರಾವ.ಸಿ.ಸುಗೂರ (77) ಶನಿವಾರದಂದು ನಿಧನರಾಗಿದ್ದಾರೆ. ಇವರಿಗೆ ಇಬ್ಬರು ಸುಪುತ್ರರು, ಇಬ್ಬರು ಸುಪುತ್ರಿಯರು…

1 week ago

ನೆಲೋಗಿ ಬಿ.ಆರ್.ಅಂಬೇಡ್ಕರ ಭವನದಲ್ಲಿ ಛತ್ರಪತಿ ಶಿವಾಜಿಯ ಮಹಾರಾಜರ ಜನ್ಮ ದಿನಾಚರಣೆ

ಜೇವರ್ಗಿ: ಇಂದು ನೆಲೋಗಿ ಗ್ರಾಮದಲ್ಲಿ ಡಾ. ಅಂಬೇಡ್ಕರ್ ಸೇವಾ ಚಾರಿಟೇಬಲ್ ಟ್ರಸ್ಟ್ ನೆಲೋಗಿವತಿಯಿಂದ ಡಾ. ಬಿ.ಆರ್.ಅಂಬೇಡ್ಕರ ಸಮುದಾಯ ಭವನದಲ್ಲಿ ಛತ್ರಪತಿ…

3 weeks ago

ಸಮಾಜದಲ್ಲಿನ ಅನಿಷ್ಟ ಪದ್ಧತಿ ಹೋರಾಟ ಅಗತ್ಯ: ಮೇಯರ್

ಇ-ಮೀಡಿಯಾ ಲೈನ್ ನ್ಯೂಸ್ ಕಲಬುರಗಿ: ಮೂಢನಂಬಿಕೆ, ಅನಿಷ್ಟ ಪದ್ಧತಿ, ಸಂವಿಧಾನದ ಆಶಯ ಈಡೇಸುವ ನಿಟ್ಟಿನಲ್ಲಿ ಜನ್ಮ ತಾಳಿದ ಮಾನವ ಬಂಧುತ್ವ…

3 weeks ago

ಕಲಬುರಗಿ; 200 ಶಾಲಾ ಮಕ್ಕಳಿಗೆ ಆನಾಪಾನ ಧ್ಯಾನ ಆಯೋಜನೆ

ಕಲಬುರಗಿ: ನಗರದ ಸೆಂಟ್ ಮೇರಿ ಶಾಲೆಯಲ್ಲಿ 5 ರಿಂದ 9 ನೇ ತರಗತಿಯ 200 ಶಾಲಾ ಮಕ್ಕಳಿಗೆ ಆನಾಪಾನ ಧ್ಯಾನ…

4 weeks ago

ಉಚಿತ ಆರೋಗ್ಯ ತಪಾಸಣೆ ಶಿಬಿರ

ಜೇವರ್ಗಿ: ತಾಲೂಕಿನ ಜನರ ಸೇವೆಗಾಗಿ ಕಲಬುರಗಿಯ ಇಸ್ಲಾಮಾಬಾದ ಕಾಲೋನಿಯ ಅಲ್ ಶಿಫಾ ಆಸ್ಪತ್ರೆಯ ಮುಖ್ಯಸ್ಥರು ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು…

4 weeks ago