ಪ್ರಜಾಪ್ರಭುತ್ವದಲ್ಲಿ ಇದೊಂದು ಕರಾಳ ದಿನ: ಶಾಸಕ ಪ್ರಿಯಾಂಕ್ ಖರ್ಗೆ

0
30

ಕಲಬುರಗಿ: ನಮ್ಮ ಕಾಂಗ್ರೆಸ್ ಪಕ್ಷದ ಸಂಸದರು, ವಿಪಕ್ಷ ನಾಯಕರಾದ Rahul Gandhi ಅವರ ಸತ್ಯವಾದ ಹೇಳಿಕೆಯನ್ನು ಸಹಿಸಲಾರದೆ ಕೇಂದ್ರ ಬಿಜೆಪಿ ಸರ್ಕಾರ ಅವರನ್ನು ಅನರ್ಹಗೊಳಿಸುವ ಮೂಲಕ ತಮ್ಮ ಹೇಡಿತನವನ್ನು ಪ್ರದರ್ಶಿಸಿದೆ ಎಂದು ಮಾಜಿ ಸಚಿವ ಶಾಸಕ ಪ್ರಿಯಾಂಕ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದೀಪ ಆರುವ ಮುನ್ನ ಜೋರಾಗಿ ಉರಿಯುವ ಹಾಗೆ ಬಿಜೆಪಿ ಪಕ್ಷ ತನ್ನ ಅಂತ್ಯವನ್ನು ತಾನೇ ಸಿದ್ಧಪಡಿಸಿಕೊಳ್ಳುತ್ತಿದೆ. ಬಿಜೆಪಿ ಸರ್ಕಾರದ ಇಂತಹ ಬೆದರಿಕೆಗಳಿಗೆ ಭಯಪಡುವುದಕ್ಕೆ, ಕ್ಷಮೆ ಕೇಳುವುದಕ್ಕೆ, ನಾವು ಸಾವರ್ಕರ ಅನುಯಾಯಿಗಳಲ್ಲ ಮಹಾತ್ಮಾ ಗಾಂಧಿ ಅವರ ಅನುಯಾಯಿಗಳು ಎಂದು ಚಾಟಿ ಬಿಸಿದ್ದಾರೆ.

Contact Your\'s Advertisement; 9902492681

ರಾಹುಲ್ ಗಾಂಧಿ ಅವರನ್ನು ನೇರವಾಗಿ ಎದುರಿಸಲು ಸಾಧ್ಯವಾಗದ ಸಂದರ್ಭದಲ್ಲಿ ಇಂತಹ ಅನ್ಯಮಾರ್ಗಗಳ ಮೂಲಕ ಕುಗ್ಗಿಸಬೇಕು ಎಂದು ಹೊರಟಿರುವುದು ನಾಚಿಕೆಗೇಡು.ಕಾಂಗ್ರೆಸ್ ಪಕ್ಷ ಅಂದು ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿತ್ತು, ಇಂದು ಸಂವಿಧಾನವನ್ನು ಉಳಿಸುವುದಕ್ಕಾಗಿ ಬಿಜೆಪಿ ವಿರುದ್ಧ ಹೋರಾಟ ಮಾಡುವ ಸಂದರ್ಭ ಬಂದಿದೆ ಎಂದು ಕರೆ ನೀಡಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here