ಗೋಲ್ಡನ್ ಕೇವ್ ಬುದ್ಧ ವಿಹಾರಕ್ಕೆ ನಗರಸಭೆ ಪೌರಾಯುಕ್ತ ಪ್ರೇಮ್ ಚಾಲ್ರ್ಸ ಭೇಟಿ

0
16

ಸುರಪುರ: ನಗರದ ಗೋಲ್ಡನ್ ಕೇವ್ ಬುದ್ಧ ವಿಹಾರಕ್ಕೆ ನಗರಸಭೆ ಪೌರಾಯುಕ್ತ ಪ್ರೇಮ್ ಚಾಲ್ರ್ಸ್ ಭೇಟಿ ನೀಡಿ ವೀಕ್ಷಿಸಿದರು.ಕಳೆದ ಮೂರು ದಿನಗಳ ಹಿಂದೆ ಭಾರತೀಯ ಬೌದ್ಧ ಮಹಾಸಭಾದ ಮುಖಂಡರು ನಗರಸಭೆ ಮುಂದೆ ಪ್ರತಿಭಟನೆ ನಡೆಸಿ ಬುದ್ಧ ವಿಹಾರದ ಜಾಗದ ಕುರಿತು ಅಕ್ರಮ ವರ್ಗಾವಣೆ ಆರೋಪದ ಕುರಿತು ಮನವಿ ಸಲ್ಲಿಸಿದ್ದರ ಅಂಗವಾಗಿ ಭೇಟಿ ನೀಡಿ ವೀಕ್ಷಿಸಿದರು.

ಈ ಸಂದರ್ಭದಲ್ಲಿ ಇಡೀ ಬುದ್ಧ ವಿಹಾರ ಎಲ್ಲವನ್ನು ಸುತ್ತಾಡಿ ನೋಡಿ,ಅಭಿವೃಧ್ಧಿ ಕಾರ್ಯಗಳು ಉತ್ತಮವಾಗಿ ನಡೆದಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಅಲ್ಲದೆ ಇಲ್ಲಿಯ ಎಲ್ಲಾ ವಿಷಯದ ಕುರಿತು ಆರ್.ಸಿ ಅವರಿಗೆ ವರದಿ ಸಲ್ಲಿಸುವುದಾಗಿ ತಿಳಿಸಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ನಗರಸಭೆ ಎಸ್.ಒ ಶಿವಪುತ್ರ ಗೋಲ್ಡನ್ ಕೇವ್ ಬುದ್ಧ ವಿಹಾರ ಟ್ರಸ್ಟ್ ಅಧ್ಯಕ್ಷ ವೆಂಕಟೇಶ ಹೊಸ್ಮನಿ ,ಪದಾಧಿಕಾರಿಗಳಾದ ರಾಹುಲ್ ಹುಲಿಮನಿ,ಮಾಳಪ್ಪ ಕಿರದಳ್ಳಿ,ಮಹಾದೇವಪ್ಪ ಬೊಮ್ಮನಹಳ್ಳಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here