ಮುಸ್ಲಿಂರ ಮೀಸಲಾತಿ ಪ್ರವರ್ಗ ರದ್ದತಿಗೆ ಆಕ್ರೋಶ

  • ಮೀಸಲಾತಿ ಮುಂದುವರೆಸದಿದ್ದರೆ ನ್ಯಾಯಾಲಯದ ಮೋರೆ

ಕಲಬುರಗಿ: ಮುಸ್ಲಿಂ ರಿಗೆ ಇದ್ದ 2 ಬಿ ಪ್ರವರ್ಗ ಮೀಸಲಾತಿ ರದ್ದುಗೊಳಿಸಿರುವ ರಾಜ್ಯ ಸರ್ಕಾರದ ನಿರ್ಧಾರ ಕ್ಕೆ ಅಖಿಲ ಭಾರತ ಮಿಲ್ಲಿ ಕೌನ್ಸಿಲ್ ನ ರಾಷ್ಟ್ರೀಯ ಕಾರ್ಯದರ್ಶಿಯಾಗಿರುವ ಕುಡಾ ಮಾಜಿ ಅಧ್ಯಕ್ಷ ಡಾ. ಮೊಹಮ್ಮದ ಅಜಗರ ಚುಲ್ ಬುಲ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಮುಸ್ಲಿಂ ಸಮುದಾಯ ಗುರುತಿಸುವ ಮೀಸಲಾತಿ ಪ್ರವರ್ಗ ರದ್ದುಪಡಿಸುವ ಮುಖಾಂತರ ಮುಸ್ಲಿಂ ಧರ್ಮವೇ ಅಸ್ತಿತ್ವ ಇಲ್ಲ ಎನ್ನುವಂತೆ ಮಾಡಲಾಗಿದೆ. ಇದು ಮುಸ್ಲಿಂ ರನ್ನು ಹತ್ತಿಕ್ಕುವ ಷಡ್ಯಂತ್ರ ವಾಗಿದೆಯಲ್ಲದೇ ಬಿಜೆಪಿ ಮುಸ್ಲಿಂ ರ ವಿರೋಧಿ ಎಂಬುದನ್ನು ಈ ಮೂಲಕ ನಿರೂಪಿಸಲಾಗಿದೆ ಎಂದು ಗುಡುಗಿದ್ದಾರೆ.

2ಬಿ ಪ್ರವರ್ಗ ರದ್ದುಪಡಿಸಿ ಮುಸ್ಲಿಂ ರಿಗೆ ಆರ್ಥಿಕವಾಗಿ ಹಿಂದುಳಿದ ( ಇಡಬ್ಯುಎಸ್) ವರ್ಗಕ್ಕೆ ಸೇರಿಸಿರುವುದು ಅನ್ಯಾಯದ ಪರಮಾವಧಿಯಾಗಿದೆ. ಮುಸ್ಲಿಂ ವರ್ಗ ಮೊದಲೇ ಶೈಕ್ಷಣಿಕ, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಹಿಂದುಳಿದಿದೆ. ಇಡಬ್ಯುಎಸ್ ದಲ್ಲಿ ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಮುಂದುವರೆದವರು ಇದ್ದಾರೆ. ಅವರೊಂದಿಗೆ ಮುಸ್ಲಿಂ ಜನಾಂಗ ಸ್ಪರ್ಧೆ ಮಾಡೋದು ಕಠಿಣ ವಾಗುತ್ತದೆ. ಪ್ರಮುಖವಾಗಿ ಶಿಕ್ಷಣ ಹಾಗೂ ಉದ್ಯೋಗ ಪಡೆಯುವುದು ದುಸ್ಥರವಾಗುತ್ತದೆ. ಹೀಗಾಗಿ ಮುಸ್ಲಿಂ ಸಮುದಾಯ ಮತ್ತೆ ಪಾತಾಳಕ್ಕೆ ಇಳಿಯುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಶೇ. 15ರಷ್ಟು ಇರುವ ಮುಸ್ಲಿಂ ಜನಾಂಗಕ್ಕೆ ಮೀಸಲಾತಿ ಪ್ರವರ್ಗ ಇರದಿರುವುದು ನಿಜಕ್ಕೂ ಸಮುದಾಯಕ್ಕೆ ಮಾಡಿರುವ ಅವಮಾನ ಹಾಗೂ ಶೋಷಣೆಯಾಗಿದೆ. ಸಾಚಾರ ವರದಿಯಲ್ಲಿ ಮುಸ್ಲಿಂ ಸಮುದಾಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಿಂತಲೂ ಹಿಂದುಳಿದಿದ್ದಾರೆ ಎಂಬ ವರದಿ ಉಲ್ಲೇಖವಾಗಿದೆ. ಇಷ್ಟಿದ್ದ ಮೇಲೂ ರಾಜ್ಯ ಬಿಜೆಪಿ ಸರ್ಕಾರದ ಮುಸ್ಲಿಂ ಸಮುದಾಯದ 2 ಬಿ ಪ್ರವರ್ಗ ಮೀಸಲಾತಿ ರದ್ದು ಮಾಡಿರುವುದು ಯಾವ ನ್ಯಾಯ? ಸರ್ಕಾರದ ಮುಸ್ಲಿಂ ಸಮುದಾಯದ ಮೀಸಲಾತಿ ಪ್ರವರ್ಗ ರದ್ದುಪಡಿಸಿರುವ ವಿರುದ್ದ ವ್ಯಾಪಕವಾದ ಹೋರಾಟದ ಜತೆಗೇ ನ್ಯಾಯಾಲಯದಲ್ಲಿ‌ ಮೊಕದ್ದಮೆ ಹೂಡಲಾಗುವುದು ಎಂದು ಚುಲ್ ಬುಲ್ ತಿಳಿಸಿದ್ದಾರೆ.

ಮುಸ್ಲಿಂ ರ ಮೀಸಲಾತಿ ಕಲ್ಪಿಸುವ 2ಬಿ ಪ್ರವರ್ಗ ರದ್ದುಪಡಿಸಿರುವ ಹಿನ್ನೆಲೆಯಲ್ಲಿ ಧಾರ್ಮಿಕ ಗುರುಗಳ, ಮುಖಂಡರ, ವಿವಿಧ ಸಂಘ ಸಂಸ್ಥೆಗಳ ಸದಸ್ಯರ ಸಭೆ ಕರೆದು ಚರ್ಚಿಸಲಾಗಿದ್ದು, ಸರ್ಕಾರದ ಧೋರಣೆ ವಿರುದ್ದ ಬೀದಿಗಿಳಿದು ಹೋರಾಟ ರೂಪಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ಕಲ್ಪಿಸುವ ಪ್ರವರ್ಗ ಹಿಂದುಳಿದ ವರ್ಗಗಳ ನಾಯಕ ದೇವರಾಜ ಅರಸು ಕಾಲ. 1975 ರಿಂದ ಬಂದಿದೆ.‌1975ರಲ್ಲಿ ಹಾವನೂರ ಆಯೋಗ, 1983 ರ ಟಿ. ವೆಂಕಟಸ್ವಾಮಿ ಆಯೋಗ, ಅದೇ ರೀತಿ ಚಿನ್ನಪ್ಪ ರೆಡ್ಡಿ ಮತ್ತು ರವಿವರ್ಮಕುಮಾರ ಆಯೋಗಗಳು ಮೀಸಲಾತಿ ಮುಂದುವರೆಸುವಂತೆ ಹೇಳಿವೆ. ಆದರೆ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ರದ್ದುಪಡಿಸಿರುವುದು ಸರ್ವಾಧಿಕಾರಿಧೋರಣೆಯಾಗಿದೆ ಎಂದು ಕಿಡಿ ಕಾರಿದ್ದಾರೆ.

emedialine

Recent Posts

ಇಂದಿನಿಂದ ಸೂಗೂರ (ಕೆ ) ನವರಾತ್ರಿ ಬ್ರಹ್ಮೋತ್ಸವ

ಕಾಳಗಿ : ಕಲ್ಯಾಣ ಕರ್ನಾಟಕದ ತಿರುಪತಿ ಎಂದೇ ಪ್ರಸಿದ್ಧಿ ಪಡೆದಿರುವ ಸುವರ್ಣ ಗಿರಿ ಕಾಳಗಿ ತಾಲೂಕಿನ ಸೂಗೂರ (ಕೆ )…

3 mins ago

ಕಾಳಗಿ: ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

ಕಲಬುರಗಿ: ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಿಗೆ ಕಾಳಗಿ ತಾಲೂಕು ಪ್ರವಾಸಿ ಮಂದಿರದಲ್ಲಿ ಹವ್ಯಾಸೀಕಲಾ ಬಳಗದ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ದಿವ್ಯ…

43 mins ago

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

14 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

17 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

21 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

22 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420