ಬಿಸಿ ಬಿಸಿ ಸುದ್ದಿ

ಜನತೆಯ ಆಶಯದಂತೆ ಕಾರ್ಯನಿರ್ವಹಣೆ; ಶಾಸಕ ಸುಭಾಷ್ ಆರ್ ಗುತ್ತೇದಾರ

ಆಳಂದ; ಅಧಿಕಾರಕ್ಕೆ ಬಂದ ದಿನದಿಂದಲೂ ಮತಕ್ಷೇತ್ರದ ಜನತೆಯ ಆಶಯದಂತೆ ಕಾರ್ಯನಿರ್ವಹಿಸಿದ್ದೇನೆ ಈಗಲೂ ಪ್ರತಿದಿನ ಜನರ ಅಹವಾಲು ಆಲಿಸಲು ಹೆಚ್ಚಿನ ಸಮಯ ನೀಡುತ್ತಿದ್ದೇನೆ ಎಂದು ಶಾಸಕ ಸುಭಾಷ ಗುತ್ತೇದಾರ ಹೇಳಿದರು.

ತಾಲೂಕಿನ ತೀರ್ಥ ಗ್ರಾಮದಲ್ಲಿ ಸಣ್ಣ ನೀರಾವರಿ ಇಲಾಖೆ ವತಿಯಿಂದ ಮಂಜೂರಾದ ಅಣೆಕಟ್ಟು ನಿರ್ಮಾ ಕಾಮಗಾರಿಗೆ ಗುದ್ದುಲಿ ಪೂಜೆ ನೆರವೇರಿಸಿದ ಬಳಿಕ ಮಾತನಾಡಿದರು.

ಕೇಂದ್ರ ಸರ್ಕಾರದಿಂದ ರೈತರು, ಕಾರ್ಮಿಕರು ಮತ್ತು ಮಹಿಳೆಯರಿಗಾಗಿ ಹಲವಾರು ಇಲಾಖೆಯ ಮೂಲಕ ಸೌಲಭ್ಯಗಳನ್ನು ಒದಗಿಸುತ್ತಿದೆ ಜನರು ಇಲಾಖೆಯನ್ನು ಸಂಪರ್ಕಿಸಿ ಲಾಭವನ್ನು ಪಡೆದುಕೊಳ್ಳಬೇಕು. ಗ್ರಾಮೀಣ ಜನರ ಜೀವನ ಮಟ್ಟ ಸುಧಾರಣೆಗಾಗಿ ಶಿಕ್ಷಣ, ಕುಡಿಯುವ ನೀರು, ರಸ್ತೆ ಸೇರಿದಂತೆ ಕೃಷಿ ಕಾರ್ಮಿಕರು, ರೈತರ ಮತ್ತು ಕೃಷಿಗೆ ಪೂರಕವಾಗುವ ನಿಟ್ಟಿನಲ್ಲಿ ಯೋಜನೆ ಮತ್ತು ಸೌಲಭ್ಯಗಳನ್ನು ಸರ್ಕಾರ ಅನುಷ್ಠಾನಕ್ಕೆ ಮುಂದಾಗಿದ್ದು ಅರ್ಜಿ ಸಲ್ಲಿಸಿ ಸೌಲಭ್ಯಗಳನ್ನು ಪಡೆದು ಆರ್ಥಿಕ ಮಟ್ಟವನ್ನು ಸುಧಾರಿಸಿಕೊಳ್ಳಬೇಕು ಎಂದು ಎಂದು ಸಲಹೆ ನೀಡಿದರು.

ಚುನಾವಣೆ ಪೂರ್ವ ನೀಡಿದ ಭರವಸೆಗಳನ್ನು ತೀರ್ಥ ಗ್ರಾಮ ಸೇರಿ ಹಲವಡೆ ಕಾಮಗಾರಿಗಳ ಕೈಗೆತ್ತಿಕೊಂಡು ಪೂರ್ಣಗೊಳಿಸಲಾಗುತ್ತಿದೆ. ಒಂದು ಕಾಮಗಾರಿ ಮಾಡಿದ ಮೇಲೆ ಅಭಿವೃದ್ಧಿ ಮುಗಿಯುವುದಿಲ್ಲ. ಜನರ ಬೇಡಿಕೆಗೆ ತಕ್ಕಂತೆ ಅನುದಾನ ಬಂದಂತೆ ಎಲ್ಲ ಬೇಡಿಕೆಗಳನ್ನು ಈಡೇರಿಸುವ ಮೂಲಕ ಶಾಲಾ ಕಟ್ಟಡ, ಸಮುದಾಯ ಭವನ, ಕುಡಿಯುವ ನೀರಿನ ಸೌಲಭ್ಯ ಹಾಗೂ ರಸ್ತೆಗಳ ನಿರ್ಮಾಣ ಕಾರ್ಯ ಎಲ್ಲಡೆ ಭರದಿಂದ ಕೈಗೊಳ್ಳಲಾಗಿದೆ. ಅನೇಕ ಕಾಮಗಾರಿಗಳ ಮುಗಿದಿವೆ. ಕೆಲವಡೆ ಆರಂಭಗೊಳಿಸಲಾಗಿದೆ. ಇನ್ನೂ ಕೆಲವು ಕಡೆ ಟೆಂಡರ್ ಮುಗಿದ ಮೇಲೆ ಉಳಿದ ಬಾಕಿ ಎಲ್ಲಾ ಕಾಮಗಾರಿಗಳನ್ನು ಅಧಿಕಾರ ಅವಧಿಗೆ ಮೊದಲೇ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.

ಗ್ರಾಪಂ ಅಧ್ಯಕ್ಷ ಯಶ್ವಂತರಾವ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ವಿಠ್ಠಲರಾವ ಪಾಟೀಲ, ಮಲ್ಲಿನಾಥ ಪೊಲೀಸ್ ಪಾಟೀಲ, ಶರಣಬಸಪ್ಪ ಸರಾಟೆ, ಪೀರಪ್ಪ ಪೂಜಾರಿ, ರಾಜೇಂದ್ರ ಪಾರಾಣೆ, ಶಿವಪುತ್ರ ಪೂಜಾರಿ, ಅರವಿಂದ ಸರಾಟೆ, ಶ್ರೀಶೈಲ ಸರಸಂಬಿ, ಸಿದ್ದಾರಾಮ ಹಳದೊಡ್ಡಿ, ಬರಗಾಲಿ ಪೂಜಾರಿ, ಶಂಕರರಾವ ಪಾಟೀಲ, ಚೆನ್ನಯ್ಯ ಸ್ವಾಮಿ, ಲಕ್ಷ್ಮಣ ಯಾದವ, ಚೆನ್ನಪ್ಪ ಬದೋಲೆ, ವಿಶ್ವನಾಥ ಪೂಜಾರಿ, ಸಣ್ಣ ಸಣ್ಣ ನೀರಾವರಿ ಇಲಾಖೆ ಎಇಇ ಶಾಂತಪ್ಪ ಜಾಧವ ಸೇರಿದಂತೆ ಗ್ರಾಮಸ್ಥರು ಇದ್ದರು.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

43 mins ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

46 mins ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

48 mins ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

2 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

3 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

6 hours ago