ರಾಜಕಿಯ ಪಕ್ಷಗಳ ಪ್ರಣಾಳಿಕೆಯಲ್ಲಿ ಕಲ್ಯಾಣದ ಬಗ್ಗೆ ಘೋಷಣೆಗೆ ಸಮಿತಿ ಒತ್ತಾಯ

ಕಲಬುರಗಿ: ಬರುವ ವಿಧಾನ ಸಭೆ ಚುನಾವಣೆ ಹಿನ್ನಲೆಯಲ್ಲಿ ರಾಜ್ಯದಲ್ಲಿ ರಾಷ್ಟ್ರ ಮಟ್ಟದ ಮತ್ತು ಪ್ರಾದೇಶಿಕ ಮಟ್ಟದ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ ರಚನಾತ್ಮಕ ಸರ್ವಾಂಗೀಣ ಪ್ರಗತಿಯ ಬಗ್ಗೆ ಮತ್ತು 371ನೇ(ಜೆ) ಕಲಂ ಪರಿಣಾಮಕಾರಿ ಅನುಷ್ಠಾನಕ್ಕೆ ಸಂಬಂಧಿಸಿ ತಮ್ಮ ತಮ್ಮ ಪಕ್ಷಗಳ ಪ್ರಣಾಳಿಕೆಯಲ್ಲಿ ಅಧಿಕೃತವಾಗಿ ಘೋಷಣೆ ಮಾಡಬೇಕೆಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಇಂದಿನ ಸಭೆಯಲ್ಲಿ ಮಹತ್ವದ ನಿರ್ಣಯ ಕೈಗೊಂಡು ಒತ್ತಾಯಿಸಿದೆ.

ಸಮಿತಿಯ ಸಂಸ್ಥಾಪಕ ಅಧ್ಯಕ್ಷರಾದ ಲಕ್ಷ್ಮಣ ದಸ್ತಿಯವರ ಅಧ್ಯಕ್ಷತೆಯಲ್ಲಿ ಜರುಗಿದ ಮಹತ್ವದ ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ ರಾಷ್ಟ್ರ ಮತ್ತು ಪ್ರಾದೇಶಿಕ ಪಕ್ಷಗಳು ನಮ್ಮ ಪ್ರದೇಶದಿಂದ ಆಯ್ಕೆಯಾಗುತ್ತಿದ್ದಾರೆ. ಆದರೆ, ಕಲ್ಯಾಣದ ಪ್ರಗತಿಯ ಬಗ್ಗೆ ಪರಿಣಾಮಕಾರಿ ಸ್ಪಂದನೆ ನೀಡುತ್ತಿಲ್ಲ. ಈ ಹಿನ್ನಲೆಯಲ್ಲಿ ರಾಜಕೀಯ ಪಕ್ಷಗಳು ನಮ್ಮ ಭಾಗದ ಅಭಿವೃದ್ಧಿಯ ಬಗ್ಗೆ ಪ್ರಣಾಳಿಕೆಯ ಘೋಷಣಾ ಪತ್ರದಲ್ಲಿ ಸ್ಪಷ್ಟವಾಗಿ ಘೋಷಣೆಗಳು ಮಾಡಿ ಮತ ಯಾಚಿಸಬೇಕೆಂದು ಒತ್ತಾಯಿಸಲಾಯಿತು.

ಸಭೆಯಲ್ಲಿ ಭಾಗವಹಿಸಿದ ಮುಖಂಡರಾದ ಮನೀಷ್ ಜಾಜು, ಲಿಂಗರಾಜ ಸಿರಗಾಪೂರ, ಜ್ಞಾನಮಿತ್ರ ಸ್ಯಾಮ್ಯೂವೆಲ್, ಅಬ್ದುಲ ರಹೀಂ, ಸಂತೋಷ ಜವಳಿ, ಪೆÇ್ರ. ದೇವಿದಾಸ ಜಿ.ಎಂ., ಪೆÇ್ರ.ಅನೀಲ ಕುಲಕರ್ಣಿ, ಡಾ. ಮಹಾವೀರ, ವಿನೋದ ಪಾಟೀಲ, ಬಸವರಾಜ ಕೆ., ಮಹಾದೇವ ಜಿ. ಪರಮೇಶ್ವರ, ಅಮಿತಕುಮಾರ ಭೀಮರಾವ ಕಂದಳ್ಳಿ, ಬಸವರಾಜ ಮ್ಯಾಗಿ, ಮಹೆತಾಬ ಖಾನ್, ಮಹಿಬೂಬ ಸಾಬೀರ ಅಲಿ ಮುಂತಾದವರು ಮಾತನಾಡಿ ಸಮಿತಿಯ ಅಧ್ಯಕ್ಷರು ನಾವು ಕೊಟ್ಟ ಸಲಹೆಗಳನ್ನು ಪರಿಗಣಿಸಿ ವಿವರವಾದ ಪ್ರಸ್ತಾವನೆಯನ್ನು ಸಿದ್ಧಮಾಡಿ ಎಲ್ಲಾ ಪಕ್ಷಗಳ ರಾಜ್ಯಾಧ್ಯಕ್ಷರುಗಳಿಗೆ ಕಲ್ಯಾಣ ಕರ್ನಾಟಕದ ಕಲ್ಯಾಣದ ಬಗ್ಗೆ ಪ್ರಣಾಳಿಕೆಯಲ್ಲಿ ಸೇರಿಸಲು ಅಭಿಯಾನ ಹಮ್ಮಿಕೊಳ್ಳಬೇಕೆಂದು ಆಗ್ರಹಿಸಿದರು.

ಸಮಿತಿಯ ಪ್ರಮುಖರ ಮತ್ತು ಚಿಂತಕರ ಸಲಹೆಗಳಂತೆ ಆದಷ್ಟು ಶೀಘ್ರ ಒಂದೆರಡು ದಿನಗಳಲ್ಲಿ ಕಲ್ಯಾಣ ಕರ್ನಾಟಕದ ರಚನಾತ್ಮಕ ಪ್ರಗತಿಯ ಬಗ್ಗೆ 371ನೇ(ಜೆ) ಕಲಂ ವಿಷಯಗಳು ಸೇರಿದಂತೆ ವಿವರವಾದ ಪ್ರಸ್ತಾವನೆ ಸಿದ್ಧಪಡಿಸಿ ಅಧಿಕೃತವಾಗಿ ಘೋಷಣೆ ಮಾಡಿ ಆಯಾ ಪಕ್ಷಗಳಿಗೆ ಸಲ್ಲಿಸುವ ಅಭಿಯಾನದ ದಿನಾಂಕ ಘೋಷಣೆ ಮಾಡಲಾಗುವದೆಂದು ಸಭೆಯ ಅಧ್ಯಕ್ಷತೆ ವಹಿಸಿದ ಲಕ್ಷ್ಮಣ ದಸ್ತಿಯವರು ತಿಳಿಸಿದರು.

ಸಭೆಯಲ್ಲಿ ಚಿಂತಕರು ಸೇರಿದಂತೆ ಸಮಿತಿಯ ಕೋರ ಕಮಿಟಿಯ ಸದಸ್ಯರು ಮತ್ತು ಕ್ರೀಯಾ ಸದಸ್ಯರು ಭಾಗವಹಿಸಿದರು.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

2 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

8 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

19 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

20 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

20 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

20 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420